ಆ್ಯಪ್ನಗರ

ಏ.2ಕ್ಕೆ ಅತಿಥಿ ಉಪನ್ಯಾಸಕರ ರಾಜ್ಯ ಸಮಾವೇಶ

ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯಿಂದ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ವೃತ್ತಿ ಸಮಸ್ಯೆಗಳು ಮತ್ತು ಪರಿಹಾರದ ಹಕ್ಕೊತ್ತಾಯಕ್ಕಾಗಿ ಏ.2ರಂದು ಬೆಳಗ್ಗೆ 10ಕ್ಕೆ ಶಿವಮೊಗ್ಗ ಡಾ.ಬಿ.ಆರ್‌. ಅಂಬೇಡ್ಕರ್‌ ಭವನದಲ್ಲಿ ರಾಜ್ಯ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅತಿಥಿ ಉಪನ್ಯಾಸಕರ ಜಿಲ್ಲಾ ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ಎಚ್‌.ಕೊಟ್ರೇಶ್‌ ತಿಳಿಸಿದ್ದಾರೆ.

Vijaya Karnataka 29 Mar 2019, 5:00 am
ದಾವಣಗೆರೆ : ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯಿಂದ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ವೃತ್ತಿ ಸಮಸ್ಯೆಗಳು ಮತ್ತು ಪರಿಹಾರದ ಹಕ್ಕೊತ್ತಾಯಕ್ಕಾಗಿ ಏ.2ರಂದು ಬೆಳಗ್ಗೆ 10ಕ್ಕೆ ಶಿವಮೊಗ್ಗ ಡಾ.ಬಿ.ಆರ್‌. ಅಂಬೇಡ್ಕರ್‌ ಭವನದಲ್ಲಿ ರಾಜ್ಯ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅತಿಥಿ ಉಪನ್ಯಾಸಕರ ಜಿಲ್ಲಾ ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ಎಚ್‌.ಕೊಟ್ರೇಶ್‌ ತಿಳಿಸಿದ್ದಾರೆ.
Vijaya Karnataka Web guest lecturer state convention for a2
ಏ.2ಕ್ಕೆ ಅತಿಥಿ ಉಪನ್ಯಾಸಕರ ರಾಜ್ಯ ಸಮಾವೇಶ


ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ 412 ಸರಕಾರಿ ಪದವಿ ಕಾಲೇಜುಗಳಲ್ಲಿ 13,500 ಜನ ಅತಿಥಿ ಉಪನ್ಯಾಸಕರು ಅನೇಕ ವರ್ಷಗಳಿಂದ ಕನಿಷ್ಠ ವೇತನ ಪಡೆದು 3 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶ್ರಮಿಸುತ್ತಿದ್ದಾರೆ. ಆದರೆ, ಅತಿಥಿ ಉಪನ್ಯಾಸಕರಿಗೆ ಸರಿಯಾದ ಸೇವಾ ಭದ್ರತೆ ಇಲ್ಲದಂತಾಗಿದೆ. ವರ್ಷದಲ್ಲಿ 9 ರಿಂದ 10 ತಿಂಗಳು ಮಾತ್ರ ಕಾಲೇಜು ಶಿಕ್ಷಣ ಗೌರವಧನ ನೀಡುತ್ತಿದೆ. ಇದನ್ನು ವರ್ಷ ಪೂರ್ತಿ ನೀಡಬೇಕಾಗಿದೆ ಎಂದರು.

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ, 13,500 ಜನ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕು. ಮಾಜಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಕೈಗೊಂಡ ನಿರ್ಣಯದಂತೆ ಹಾಗೂ ರೂಸಾ ನಿಯಮದಡಿ ಪ್ರತಿ 60 ವಿದ್ಯಾರ್ಥಿಗಳಿಗೆ ತರಗತಿ ವಿಭಾಗಿಸಬೇಕು ಎಂದು ಆಗ್ರಹಿಸಿದರು.

7ನೇ ವೇತನ ಆಯೋಗ ಮತ್ತು ಯುಜಿಸಿ ಹೊರಡಿಸಿದ ಜನವರಿ 28, 2019ರ ಶಿಫಾರಸ್ಸಿನ ಅನ್ವಯ ಪ್ರತಿ ಗಂಟೆ ಬೋಧನಾ ಅವಧಿಗೆ 1,500 ರೂ.ನಂತೆ, ಮಾಸಿಕ ಗರಿಷ್ಠ 50 ಸಾವಿರ ರೂ. ಗೌರವಧನ ನೀಡಲು ಕ್ರಮ ಕೈಗೊಳ್ಳಬೇಕು. ಎಲ್ಲಾ ಅತಿಥಿ ಉಪನ್ಯಾಸಕರಿಗೆ ಕೂಡಲೇ ಜಾರಿಗೆ ಬರುವಂತೆ ಇಎಸ್‌ಐ, ಪಿಎಫ್‌, ರಜೆ ಹಾಗೂ ಇತರೆ ಮಾನವೀಯ ಸೌಲಭ್ಯಗಳನ್ನು ಒದಗಿಸಬೇಕು. ಮುಂಬರುವ 3,800 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಸ್ಥಗಿತಗೊಳಿಸಿ, ಆ ಹುದ್ದೆಗಳನ್ನು ಅತಿಥಿ ಉಪನ್ಯಾಸಕರಿಗೆ ಮೀಸಲಿಟ್ಟು ಖಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಗಂಗಾಧರ್‌, ಕಾರ್ಯದರ್ಶಿ ಡಾ.ಎಂ.ಪ್ರಭಾಕರ್‌, ನಾಗರಾಜ್‌, ಮಂಜುಳಾ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ