ಆ್ಯಪ್ನಗರ

20 ದಿನಗಳಲ್ಲೇ ಹರಪನಹಳ್ಳಿ ಬಳ್ಳಾರಿಗೆ

ರಾಜ್ಯದಲ್ಲಿ ನಡೆದ ಉಪ ಚುನಾವಣೆ ಪ್ರಯುಕ್ತ ಹರಪನಹಳ್ಳಿ ತಾಲೂಕು ಬಳ್ಳಾರಿ ಜಿಲ್ಲೆಗೆ ಮರು ಸೇರ್ಪಡೆಯಾಗಲು ವಿಳಂಬವಾಗಿದ್ದು, ಇನ್ನೂ ಕೇವಲ 15ರಿಂದ 20 ದಿನಗಳಲ್ಲೇ ದಾವಣಗೆರೆ ಜಿಲ್ಲೆಯಿಂದ ಬೇರ್ಪಡಲಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

Vijaya Karnataka Web 8 Nov 2018, 8:56 pm
ಹರಪನಹಳ್ಳಿ: ರಾಜ್ಯದಲ್ಲಿ ನಡೆದ ಉಪ ಚುನಾವಣೆ ಪ್ರಯುಕ್ತ ಹರಪನಹಳ್ಳಿ ತಾಲೂಕು ಬಳ್ಳಾರಿ ಜಿಲ್ಲೆಗೆ ಮರು ಸೇರ್ಪಡೆಯಾಗಲು ವಿಳಂಬವಾಗಿದ್ದು, ಇನ್ನೂ ಕೇವಲ 15ರಿಂದ 20 ದಿನಗಳಲ್ಲೇ ದಾವಣಗೆರೆ ಜಿಲ್ಲೆಯಿಂದ ಬೇರ್ಪಡಲಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.
Vijaya Karnataka Web harappanahalli to bellary in 20 days
20 ದಿನಗಳಲ್ಲೇ ಹರಪನಹಳ್ಳಿ ಬಳ್ಳಾರಿಗೆ


ತಾಲ್ಲೂಕಿನ ಉಚ್ಚಂಗಿದುರ್ಗದಲ್ಲಿ ಸುದ್ಧಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ತಾಲೂಕು ಬಳ್ಳಾರಿ ಜಿಲ್ಲೆಗೆ ಅಧಿಕೃತವಾಗಿ ಸೇರುವ ಬಗ್ಗೆ ದಾವಣಗೆರೆ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಿದ್ದು, ಅವರಿಂದಲೇ ಪರಿಪೂರ್ಣ ಮಾಹಿತಿ ಪಡೆದು ತಿಳಿಸುತ್ತಿದ್ದೇನೆ ಎಂದರು.

ತಾಲೂಕಿನ 7 ಪಂಚಾಯ್ತಿಗಳು ಜಗಳೂರು ವಿಧಾನಸಭಾ ಕ್ಷೇತ್ರಕ್ಕೆ ಒಳಪಡುತ್ತಿದ್ದು, ಈ ವ್ಯಾಪ್ತಿಯಲ್ಲಿ 4 ಕೋಟಿಗೂ ಅಧಿಕ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಅನುದಾನ ನೀಡಲಾಗಿದೆ. 15ರಿಂದ 20 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಒದಗಿಸಲಾಗಿದೆ. ಸಿರಿಗೆರೆ ಶ್ರೀಗಳ ಮಾರ್ಗದರ್ಶದಲ್ಲಿ ಈ ಕ್ಷೇತ್ರದ 6 ಕೆರೆಗಳಿಗೆ ನದಿ ನೀರು ತುಂಬಿಸಲು ಜಿಪಿಆರ್‌ ಸಮೀಕ್ಷೆ ನಡೆದಿದ್ದು, 600 ಕೋಟಿ ರೂ.ಅನುದಾನ ಮಂಜುರಾತಿಯ ಹಂತದಲ್ಲಿದೆ ಎಂದರು.

ಜಗಳೂರು ಶಾಸಕ ಎಸ್‌.ವಿ. ರಾಮಚಂದ್ರ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ 1 ಕೋಟಿ ಮನೆಗಳನ್ನು ಮಂಜೂರು ಮಾಡಿದ್ದು, ಈ 7 ಪಂಚಾಯಿತಿಗಳಿಗೆ 4500 ಮನೆಗಳನ್ನು ಆನ್‌ಲೈನ್‌ ಮೂಲಕ ಮಂಜೂರಾತಿ ದೊರೆತಿದೆ. ಮುಂದಿನ 2022ನೇ ವರ್ಷದಲ್ಲಿ 5 ಕೋಟಿ ಮನೆಗಳ ನಿರ್ಮಾಣಕ್ಕೆ ಗುರಿ ಹೊಂದಲಾಗಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ