ಆ್ಯಪ್ನಗರ

ಸಚಿವ ಸ್ಥಾನಕ್ಕಾಗಿ ಭಿಕ್ಷೆ ಬೇಡಲ್ಲ ಎಂದ ಶಾಮನೂರು

ಸಚಿವ ಸ್ಥಾನವನ್ನು ಯಾರಿಗೆ ನೀಡಬೇಕು, ಯಾರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಕಾಂಗ್ರೆಸ್‌ ಹೈಕಮಾಂಡ್‌ ತೀರ್ಮಾನಿಸುತ್ತದೆ. ನನಗೆ ಸಚಿವ ಸ್ಥಾನ ಕೊಡಿ ಎಂದು ಯಾರ ಬಳಿಯೂ ಭಿಕ್ಷೆ ಬೇಡಲ್ಲ. ಸಚಿವ ಸ್ಥಾನವನ್ನು ಹೈಕಮಾಂಡ್‌ ಕೊಟ್ಟರೆ ಕೊಡಲಿ, ಬಿಟ್ಟರೆ ಬಿಡಲಿ. ನನಗೆ ಆ ಆಸೆಯೇ ಇಲ್ಲ. ಯಾರಿಂದಲೂ ಪೋನ್‌ ಬಂದಿಲ್ಲ. ಈ ಸಂಬಂಧ ನಾನೇನೂ ದೆಹಲಿಗೆ ಹೋಗಿಲ್ಲ. ಹೋಗುವುದಿಲ್ಲ. ಇಂತಹವರಿಗೆ ಸಚಿವ ಸ್ಥಾನ ಕೊಡಿ ಎಂದು ಹೈಕಮಾಂಡ್‌ಗೆ ಒತ್ತಡವನ್ನೂ ತಂದಿಲ್ಲ ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು.

Vijaya Karnataka Web 22 Dec 2018, 6:07 pm
ದಾವಣಗೆರೆ: ಸಮ್ಮಿಶ್ರ ಸರಕಾರದಲ್ಲಿ ನನಗೆ ಸಚಿವ ಸ್ಥಾನ ಕೊಡಿ ಎಂದು ಯಾರ ಬಳಿಯೂ ಭಿಕ್ಷೆ ಬೇಡಲ್ಲ ಎಂದು ಅಖಿಲ ಭಾರತ ವೀರಶೈವ-ಲಿಂಗಾಯಿತ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಸರಕಾರದ ವಿರುದ್ಧ ಆಕ್ರೋಶದ ನುಡಿಗಳನ್ನಾಡಿದರು.
Vijaya Karnataka Web sham


ನಗರದಲ್ಲಿನ ತಮ್ಮ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನವನ್ನು ಯಾರಿಗೆ ನೀಡಬೇಕು, ಯಾರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಕಾಂಗ್ರೆಸ್‌ ಹೈಕಮಾಂಡ್‌ ತೀರ್ಮಾನಿಸುತ್ತದೆ ಎಂದರು.

ದೋಸ್ತಿ ಸಂಪುಟ ವಿಸ್ತರಣೆ: ಎಂ.ಬಿ ಪಾಟೀಲ್‌, ತಿಮ್ಮಾಪೂರ್‌ ಸಹಿತ 8 ಸಚಿವರ ಸೇರ್ಪಡೆ

'ನಾನು ಯಾರ ಬಳಿಯೂ ಹೋಗಿ ಸಚಿವ ಸ್ಥಾನ ಕೊಡಿ ಎಂದು ಕೈ ಚಾಚುವುದಿಲ್ಲ. ಸಚಿವ ಸ್ಥಾನವನ್ನು ಹೈಕಮಾಂಡ್‌ ಕೊಟ್ಟರೆ ಕೊಡಲಿ, ಬಿಟ್ಟರೆ ಬಿಡಲಿ. ನನಗೆ ಆ ಆಸೆಯೇ ಇಲ್ಲ. ಯಾರಿಂದಲೂ ಪೋನ್‌ ಬಂದಿಲ್ಲ. ಈ ಸಂಬಂಧ ನಾನೇನೂ ದೆಹಲಿಗೆ ಹೋಗಿಲ್ಲ. ಹೋಗುವುದಿಲ್ಲ. ಇಂತಹವರಿಗೆ ಸಚಿವ ಸ್ಥಾನ ಕೊಡಿ ಎಂದು ಹೈಕಮಾಂಡ್‌ಗೆ ಒತ್ತಡವನ್ನೂ ತಂದಿಲ್ಲ. ಉಳಿದಂತೆ ಎಂ.ಬಿ.ಪಾಟೀಲ್‌ ಸೇರಿದಂತೆ ಯಾರಾಗಾದರೂ ಸಚಿವ ಸ್ಥಾನ ಕೊಡಲಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಂದೆ ಅನುಭವಿಸುತ್ತಾರೆ

ಪ್ರತ್ಯೇಕ ಧರ್ಮಕ್ಕಾಗಿ ವೀರಶೈವ-ಲಿಂಗಾಯಿತ ಹೋರಾಟಗಾರರು ರಾಜ್ಯದಲ್ಲಿ ಹೋರಾಟ ನಡೆಸುತ್ತಿದ್ದು, ಸಂಪುಟ ವಿಸ್ತರಣೆಯಲ್ಲಿ ವೀರಧಿಶೈವ ಲಿಂಗಾಯತ ಸಮುದಾಯ ಕಡೆಗಣಿಸಿದರೆ ಮುಂದೆ ಅನುಭವಿಸುತ್ತಾರಷ್ಟೇ ಎಂದು ಶಿವಶಂಕರಪ್ಪನವರು ಕಾಂಗ್ರೆಸ್‌ ಹೈಕಮಾಂಡ್‌ಗೆ ಎಚ್ಚರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ