ಆ್ಯಪ್ನಗರ

ಸ್ಮಶಾನದಲ್ಲಿ ಅಕ್ರಮ ಮರಳು: 9 ಜನರ ಮೇಲೆ ಕೇಸು

ತಾಲೂಕಿನ ಕಂಚೀಕೆರೆ ಗ್ರಾಮದ ಕೆರೆಯ ಬಳಿಯ ಸ್ಮಶಾನದಲ್ಲಿ ಅಕ್ರಮ ಮರಳು ದಂಧೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಜನರ ಮೇಲೆ ಅರಸೀಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijaya Karnataka 31 Aug 2018, 5:00 am
ಹರಪನಹಳ್ಳಿ: ತಾಲೂಕಿನ ಕಂಚೀಕೆರೆ ಗ್ರಾಮದ ಕೆರೆಯ ಬಳಿಯ ಸ್ಮಶಾನದಲ್ಲಿ ಅಕ್ರಮ ಮರಳು ದಂಧೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಜನರ ಮೇಲೆ ಅರಸೀಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Vijaya Karnataka Web illegal sand in cemetery case on 9 people
ಸ್ಮಶಾನದಲ್ಲಿ ಅಕ್ರಮ ಮರಳು: 9 ಜನರ ಮೇಲೆ ಕೇಸು


ಕಂಚೀಕೆರೆ ಗ್ರಾಮದ ಕೆರೆಯ ಪಕ್ಕದ ಸ್ಮಶಾನದಲ್ಲಿ ಅಕ್ರಮವಾಗಿ ಮರಳು ತೆಗೆದ ಪರಿಣಾಮ ಅಸ್ಥಿಪಂಜರಗಳು ಎಲ್ಲೆಂದರಲ್ಲಿ ಹೊರ ಬಿದ್ದಿದ್ದವು. ಇದರಿಂದ ಭಯ ಭೀತಿಗೊಂಡ ಗ್ರಾಮಸ್ಥರು ಅಧಿಕಾರಿಗಳಿಗೆ ದೂರು ನೀಡಿದ್ದರು. ವಿಷಯ ತಿಳಿದ ತಹಸೀಲ್ದಾರ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಅಕ್ರಮ ಮರಳು ಜಪ್ತಿ ಮಾಡಿದ್ದರು.

ಅಕ್ರಮವಾಗಿ ಮರಳು ಸಾಗಣೆ ಮಾಡಲಾಗುತ್ತದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅಲ್ಲಿನ ಮರಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆ ವರದಿ ಕೈ ಸೇರಿದ್ದು, ಅದು ಮರಳು ಮಿಶ್ರಿತ ಮಣ್ಣಿನಿಂದ ಕೂಡಿದೆ. ಶೇ.30ರಷ್ಟು ಮರಳು ಸಹ ಅದರಲ್ಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಉಪವಿಭಾಗಾಧಿಕಾರಿ ಜಿ.ನಜ್ಮಾ ತಿಳಿಸಿದ್ದಾರೆ.

ಒಟ್ಟು 9 ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ, ಅವರಿಗೆ ನೋಟಿಸ್‌ ನೀಡಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ತಹಸೀಲ್ದಾರ್‌ ಡಾ. ಮಧು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ