ಆ್ಯಪ್ನಗರ

ಯೋಗೇಶ್‌ ಮಾಸ್ಟರ್‌ಗೆ ಮಸಿ ಬಳಿದವರ ಸೆರೆ

ಲೇಖಕ ಯೋಗೀಶ್‌ ಮಾಸ್ಟರ್‌ಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ವಿಕ ಸುದ್ದಿಲೋಕ 13 Mar 2017, 2:51 pm
ದಾವಣಗೆರೆ: ಲೇಖಕ ಯೋಗೀಶ್‌ ಮಾಸ್ಟರ್‌ಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
Vijaya Karnataka Web ink throw to yogesh master
ಯೋಗೇಶ್‌ ಮಾಸ್ಟರ್‌ಗೆ ಮಸಿ ಬಳಿದವರ ಸೆರೆ


ಪ್ರಿಂಟಿಂಗ್‌ ಪ್ರೆಸ್‌ನಲ್ಲಿ ಕೆಲಸ ಮಾಡುತ್ತಿರುವ ಶಿವಪ್ರಸಾದ್‌ ಮತ್ತು ಚಲಕ ಚೇತನ್‌ ಬಂಧಿತರು. ಉಳಿದ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಕುವೆಂಪು ಕನ್ನಡ ಭವನದಲ್ಲಿ ಪಿ.ಲಂಕೇಶ್‌ ಜನ್ಮ ದಿನದ ಪ್ರಯುಕ್ತ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯೋಗೇಶ್ ಮಾಸ್ಟರ್‌ ಟೀ ಕುಡಿಯಲೆಂದು ಬಾಯ್ಸ್‌ ಹಾಸ್ಟೆಲ್‌ ರಸ್ತೆಯಲ್ಲಿನ ಅಂಗಡಿಗೆ ತೆರಳಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ದುಷ್ಕರ್ಮಿಗಳು ಯೋಗೀಶ್‌ ಅವರ ತಲೆ ಕೂದಲು ಹಿಡಿದು ಎಳೆದಾಡಿ ಮಸಿ ಬಳಿದು ಪರಾರಿಯಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ