ಆ್ಯಪ್ನಗರ

ಉಪಚುನಾವಣೆಗೆ ಬಿಜೆಪಿಯಲ್ಲಿ ಐದಾರು ಜನ ಆಕಾಂಕ್ಷಿಗಳಿದ್ದಾರೆ: ನಳಿನ್‌ ಕುಮಾರ್‌ ಕಟೀಲ್‌

ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗೆ ಮತಗಟ್ಟೆ, ಶಕ್ತಿಕೇಂದ್ರದ ಸಿದ್ಧತೆಗಳು ನಡೆದಿವೆ. ಐದಾರು ಜನ ಆಕಾಂಕ್ಷಿಗಳಿದ್ದಾರೆ. ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ತಿಳಿಸಿದರು.

Vijaya Karnataka Web 29 Sep 2020, 9:40 pm
ದಾವಣಗೆರೆ: ಶಿರಾ ಹಾಗೂ ರಾಜರಾಜೇಶ್ವರಿ ನಗರದ ಉಪಚುನಾವಣೆಗೆ ಮತಗಟ್ಟೆ, ಶಕ್ತಿಕೇಂದ್ರದ ಸಿದ್ಧತೆಗಳು ನಡೆದಿವೆ. ಐದಾರು ಜನ ಆಕಾಂಕ್ಷಿಗಳಿದ್ದಾರೆ. ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ತಿಳಿಸಿದರು.
Vijaya Karnataka Web karnataka by polls many ticket aspirants in party says nalin kumar kateel
ಉಪಚುನಾವಣೆಗೆ ಬಿಜೆಪಿಯಲ್ಲಿ ಐದಾರು ಜನ ಆಕಾಂಕ್ಷಿಗಳಿದ್ದಾರೆ: ನಳಿನ್‌ ಕುಮಾರ್‌ ಕಟೀಲ್‌


ವಿದ್ಯಾನಗರದಲ್ಲಿರುವ 22 ಕೆರೆಗಳ ಏತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ದಿವಂಗತ ಡಾ.ಮಂಜುನಾಥ ಗೌಡ ಅವರ ಮನೆಗೆ ಮಂಗಳವಾರ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಉಪಚುನಾವಣೆಗೆ ಸಂಬಂಧಪಟ್ಟಂತೆ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಚುನಾವಣೆ ಸಂಬಂಧ ಬೂತ್ ಮಟ್ಟದಲ್ಲಿ ಪೂರ್ವ ತಯಾರಿ ಆಗಿದೆ. ಶೀಘ್ರದಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದರು.

ದಿವಂಗತ ಡಾ. ಮಂಜುನಾಥ ಗೌಡ,ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಅಧ್ಯಕ್ಷರಾಗಿದ್ದು, ಕೊರೊನಾ ಸೋಂಕು ತಗುಲಿದ್ದ ಕಾರಣ ಅಂತ್ಯಕ್ರಿಯೆಗೆ ಬರಲಾಗಲಿಲ್ಲ. ಆದ್ದರಿಂದ ಈಗ ಸಾಂತ್ವನ ಹೇಳಲು ನಾ ಇಲ್ಲಿಗೆ ಬಂದಿದ್ದೇನೆ. ಮಂಜುನಾಥ ನಮ್ಮ ಕುಟುಂಬದ ಸದಸ್ಯರಾಗಿದ್ದು, ಅವರು ಅಗಲಿಕೆಯಿಂದ ಪಕ್ಷಕ್ಕೆ ನಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

56 ವಿಧಾನಸಭೆ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ, ಮಧ್ಯಪ್ರದೇಶವೇ ಕೇಂದ್ರಬಿಂದು

ಬಿಜೆಪಿ ಅಧಿಕಾರಕ್ಕೆ ಬಂದು 24 ಗಂಟೆಯೊಳಗೆ ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಬರುತ್ತದೆ ಎಂಬ ಮಾತನ್ನು ಉಳಿಸಿಕೊಂಡಿಲ್ಲ ಎಂದು ಬೇಲೂರು ಕೃಷ್ಣಮೂರ್ತಿ ಟೀಕಿಸಿದ್ದರು ಎಂಬ ಪ್ರಶ್ನೆಗೆ ಉತ್ತರಿಸಿದ ಕಟೀಲ್, ರಾಜ್ಯದಲ್ಲಿ ಈಗ ಗೋಹತ್ಯೆ ಕಡಿಮೆಯಾಗಿದೆ. ಸಿದ್ದರಾಮಯ್ಯ ಅಧಿಕಾರವಾವಧಿಯಲ್ಲಿ ಏನಾಗಿತ್ತು ಎಂಬುದನ್ನು ನೆನಪು ಮಾಡಿಕೊಳ್ಳಿ. ಕರಾವಳಿ ಭಾಗದಲ್ಲಿ ಹಟ್ಟಿಗೆ ನುಗ್ಗಿ ಗೋವು ಕಳುವು ಮಾಡುತ್ತಿದ್ದರು. ಮನೆಗೆ ಬಂದು ತಲವಾರ್ ತೋರಿಸಿ ಜಾನುವಾರು ಕಳುವು ಮಾಡುತ್ತಿದ್ದರು. ಶೃಂಗೇರಿಯಲ್ಲಿ ಪೊಲೀಸ್ ಎನ್‌ಕೌಂಟರ್ ಎಲ್ಲವನ್ನೂ ನೆನಪಿಸಿಕೊಳ್ಳಬೇಕು ಎಂದು ಟಾಂಗ್ ನೀಡಿದ್ರು.

ಶಿರಾ , ಆರ್‌.ಆರ್‌ ನಗರ ಬೈಎಲೆಕ್ಷನ್ ಫಿಕ್ಸ್: ಗರಿಗೆದರಿದ ರಾಜಕೀಯ ಚಟುವಟಿಕೆ

ದಿವಂಗತ ಸುರೇಶ ಅಂಗಡಿ ಕುಟುಂಬದವರಿಗೆ ಉಪಚುನಾವಣೆಯಲ್ಲಿ ಟಿಕೆಟ್ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರ ಕುಟಂಬದವರು ದುಃಖದಲ್ಲಿ ಇದ್ದಾರೆ. ಮೊದಲು ಅವರ ಕುಟುಂಬದವರಿಗೆ ಸಾಂತ್ವನ ಹೇಳುವ ಕೆಲಸ ಮಾಡುತ್ತೇವೆ. ನಂತರ, ಟಿಕೆಟ್ ಬಗ್ಗೆ ಯೋಚಿಸುತ್ತೇವೆ ಎಂದು ನುಣುಚಿಕೊಂಡರು. ಈ ಸಂದರ್ಭದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್, ಶಾಸಕ ಎಸ್.ಎ.ರವೀಂದ್ರನಾಥ್, ಪ್ರೋ.ಲಿಂಗಣ್ಣ, ಬೀದರ್ ಸಂಸದ ಭಗವಂತ ಖೂಬಾ, ಶಿವಯೋಗಿಸ್ವಾಮಿ, ಪ್ರೋ.ಲಿಂಗಣ್ಣ, ವೀರೇಶ್ ಹನಗವಾಡಿ ಸೇರಿ ಇತರರು
ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ