ಆ್ಯಪ್ನಗರ

ಕಾಂಗ್ರೆಸ್‌ ಅಭ್ಯರ್ಥಿ ಎಸ್ಸೆಸ್ಸೆಂ ಗೆಲುವಿಗೆ ಶ್ರಮಿಸೋಣ

ಈ ಬಾರಿ ನಡೆಯುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮಲ್ಲಿಕಾರ್ಜುನ್‌ ಗೆಲುವಿಗೆ ಪಕ್ಷ ದ ಕಾರ್ಯಕರ್ತರು ಹಗಲಿರುಳು ಶ್ರಮಿಸಬೇಕೆಂದು ಮಾಜಿ ಶಾಸಕ ಎಚ್‌.ಪಿ.ರಾಜೇಶ್‌ ಹೇಳಿದರು.

Vijaya Karnataka 17 Feb 2019, 5:00 am
ಜಗಳೂರು : ಈ ಬಾರಿ ನಡೆಯುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮಲ್ಲಿಕಾರ್ಜುನ್‌ ಗೆಲುವಿಗೆ ಪಕ್ಷ ದ ಕಾರ್ಯಕರ್ತರು ಹಗಲಿರುಳು ಶ್ರಮಿಸಬೇಕೆಂದು ಮಾಜಿ ಶಾಸಕ ಎಚ್‌.ಪಿ.ರಾಜೇಶ್‌ ಹೇಳಿದರು.
Vijaya Karnataka Web lets try the congress candidate essessems win
ಕಾಂಗ್ರೆಸ್‌ ಅಭ್ಯರ್ಥಿ ಎಸ್ಸೆಸ್ಸೆಂ ಗೆಲುವಿಗೆ ಶ್ರಮಿಸೋಣ


ಪಟ್ಟಣದ 6ನೇ ವಾರ್ಡ್‌ನ ಮುಸ್ಲಿಂ ಕಾಲೊನಿಯಲ್ಲಿ ಶನಿವಾರ ಜನ ಸಂಪರ್ಕ ಅಭಿಯಾನ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್‌ ಪಕ್ಷ ವು ದೊಡ್ಡ ಪಕ್ಷ ವಾಗಿದ್ದು ಪಕ್ಷ ದ ಕಾರ್ಯಕರ್ತರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇದ್ದರೂ ಬದಿಗೊತ್ತಿ ಪಕ್ಷ ದ ಸಂಘಟನೆಗೆ ಒತ್ತು ನೀಡಬೇಕು. ಈ ಬಾರಿ ದಾವಣಗೆರೆ ಲೋಕಸಭೆ ಚುನಾವಣೆಗೆ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಸ್ಪರ್ಧಿಸಲಿದ್ದು ಅವರ ಗೆಲುವಿಗೆ ಪಕ್ಷ ದ ಕಾರ್ಯಕರ್ತರು ಅಭಿಮಾನಿಗಳು ಶ್ರಮಿಸಬೇಕು ಎಂದರು.

ಫೆ.25ರ ನಂತರ ತಾಲೂಕಿನ ಎಲ್ಲಾ 22 ಗ್ರಾಪಂಗಳಿಗೆ ಭೇಟಿ ನೀಡಿ ಜನ ಸಂಪರ್ಕ ಅಭಿಯಾನದ ಸಭೆ ನಡೆಸಿ ಪಕ್ಷ ದ ಜನಪರ ಯೋಜನೆಗಳ ಬಗ್ಗೆ ಜನರಿಗೆ ತಿಳಿಸುವ ಮೂಲಕ ಶಕ್ತಿ ಕಾರ್ಯಕ್ರಮ ಯಶಸ್ವಿಗೊಳಿಸುವ ಕೆಲಸವನ್ನು ಕಾರ್ಯಕರ್ತರೊಂದಿಗೆ ಮಾಡಲಾಗುವುದು. ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯರ ಆಡಳಿತದಲ್ಲಿ ಅನ್ನಭಾಗ್ಯ ಸೇರಿದಂತೆ ವಿದ್ಯಾಸಿರಿ, ಪಶುಭಾಗ್ಯ, ಕೃಷಿಭಾಗ್ಯ, ಕ್ಷೀರಭಾಗ್ಯ, ಮೈತ್ರಿ, ಮನಸ್ವಿನಿ, ಇಂದಿರಾ ಕ್ಯಾಂಟೀನ್‌, ಸಾಲಮನ್ನಾ ಸೇರಿದಂತೆ ಹತ್ತು ಹಲವು ಜನಪರ ಯೋಜನೆ ಜಾರಿಯಾಗಿದ್ದು, ಅಂದು 53 ಕೆರೆಗಳಿಗೆ ನೀರು ತುಂಬಿಸಲು 660 ಕೋಟಿ ಹಣವನ್ನು ಬಜೆಟ್‌ನಲ್ಲಿ ಮೀಸಲಿರಿಸಿ ಜಗಳೂರನ್ನು ಪರಿಗಣಿಸಲಾಗಿತ್ತು. ಆದರೆ ಈ ಬಾರಿಯ ಬಜೆಟ್‌ನಲ್ಲಿ ಜಗಳೂರಿಗೆ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಬಿಡುಗಡೆಯಾದ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನಡೆಯುತ್ತಿದೆ. ಇದುವರೆಗೂ ಹೊಸದಾಗಿ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. 650 ಕೋಟಿ ಅನುದಾನ ತರಲಾಗಿದೆ ಎಂದು ಶಾಸಕರು ಹೇಳುತ್ತಿದ್ದಾರೆ. ಆದರೆ ಕ್ಷೇತ್ರದ ಅಭಿವೃದ್ಧಿ ಮಾತ್ರ ಸಂಪೂರ್ಣ ಕುಂಠಿತವಾಗಿದೆ ಎಂದು ಹೇಳಿದರು.

ಎಸ್‌ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಕಲ್ಲೇಶರಾಜ್‌ ಪಟೇಲ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ತಿಪ್ಪೇಸ್ವಾಮಿಗೌಡ, ಕೆಪಿಸಿಸಿ ಸದಸ್ಯ ಸತೀಶರೆಡ್ಡಿ, ಕಾಂಗ್ರೆಸ್‌ ಜಿಲ್ಲಾ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ, ಪಪಂ ಮಾಜಿ ಅಧ್ಯಕ್ಷ ಇಕ್ಬಾಲ್‌ ಅಹಮದ್‌ ಖಾನ್‌, ಷಂಷೀರ್‌ ಅಹಮದ್‌ ಸೇರಿದಂತೆ ಪಕ್ಷ ದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಇದ್ದರು.

16ಜೆಎಲ್‌ಆರ್‌ ಪೋಟೋ02:

ಜಗಳೂರು ಪಟ್ಟಣದ 6ನೇ ವಾರ್ಡಿನ ಮುಸ್ಲಿಂ ಕಾಲೊನಿಯಲ್ಲಿ ಶನಿವಾರ ಜನ ಸಂಪರ್ಕ ಅಭಿಯಾನ ಸಭೆಯಲ್ಲಿ ಮಾಜಿ ಶಾಸಕ ಎಚ್‌.ಪಿ.ರಾಜೇಶ್‌ ಮಾತನಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ