ಆ್ಯಪ್ನಗರ

ವಾಟಾಳ್ ನಾಗರಾಜ್ ದೊಂಬರಾಟ ಮಾಡುವುದನ್ನು ನಿಲ್ಲಿಸಲಿ: ರೇಣುಕಾಚಾರ್ಯ ಕಿಡಿ

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಡಿಸೆಂಬರ್‌ 5ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದು, ವಾಟಾಳ್‌ ನಾಗರಾಜ್‌ ವಿರುದ್ಧ ಹರಿಹಾಯ್ತಿದ್ದಾರೆ. ಅದರಂತೆ ಶಾಸಕ ಎಂ.ಪಿ.ರೇಣುಕಾಚಾರ್ಯ ಕೂಡ ವಾಟಾಳ್‌ ನಾಗರಾಜ್‌ ವಿರುದ್ಧ ಕಿಡಿಕಾರಿದ್ದಾರೆ.

Vijaya Karnataka Web 24 Nov 2020, 9:48 pm
ದಾವಣಗೆರೆ: ವಾಟಾಳ್ ನಾಗರಾಜ್ ಮೈಸೂರಲ್ಲಿ 73 ಎಕರೆ ತೋಟ ಅಕ್ರಮವಾಗಿ ಗಳಿಸಿದ್ದಾರೆ. ಅವರ ತೋಟಗಳಲ್ಲಿ ಕೆಲಸ ತಮಿಳರು ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.
Vijaya Karnataka Web Honnali MLA M P Renukacharya


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮರಾಠ ಅಭಿವದ್ಧಿ ಪ್ರಾಧಿಕಾರ ವಿರೋಧಿಸಿ ಡಿಸೆಂಬರ್ 5 ರಂದು ಬಂದ್‌ಗೆ ಕರೆ ನೀಡಿರುವ ವಾಟಾಳ್ ವಿರುದ್ಧ ವಾಗ್ದಾಳಿ ನಡೆಸಿದ ವಾಟಾಳ್ ಮೊದಲು ದೊಂಬರಾಟ ಮಾಡುವುದನ್ನು ಬಿಡಬೇಕು ಎಂದರು.

ವಾಟಾಳ್ ನಾಗರಾಜ್ ಅಕ್ರಮವಾಗಿ ಬೆಂಗಳೂರಿನಲ್ಲಿ ಅನೇಕ ನಿವೇಶನ ಹೊಂದಿದ್ದಾರೆ. ಅವರ ಅಕ್ರಮಗಳ ಬಗ್ಗೆ ನನ್ನ ಬಳಿ ದಾಖಲೆಗಳಿವೆ. ಅವರು ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾತನಾಡುವಾಗ ಎಚ್ಚರ ಇಟ್ಟುಕೊಂಡು ಮಾತನಾಡಬೇಕು ಎಂದು ವಾಟಾಳ್ ನಾಗರಾಜ್ ವಿರುದ್ಧ ಹರಿಹಾಯ್ದರು.

ಸಿಎಂ ಪ್ರಶ್ನಿಸುವ ನೈತಿಕತೆ ಯಾರಿಗೂ ಇಲ್ಲ! ವಾಟಾಳ್‌ ವಿರುದ್ಧ ರೇಣುಕಾಚಾರ್ಯ ಗರಂ

ವಾಟಾಳ್ ಯಾವ ಯಾವ ಮುಖ್ಯಮಂತ್ರಿಗಳ ಕಾಲು ಹಿಡಿದು ಕೆಲಸ ಮಾಡಿಸಿಕೊಂಡಿದ್ದಾರೆ ಎನ್ನುವುದು ನನಗೆ ಗೊತ್ತು. ಯಡಿಯೂರಪ್ಪ ಅವರ ಕಾಲು ಹಿಡಿದು ಕೆಲಸ ಮಾಡಿಸಿಕೊಂಡಿದ್ದಾರೆ. ಅವರ ಬಗ್ಗೆ ಹಗುರವಾಗಿ ಮಾತನಾಡೋದು ಬಿಡಬೇಕು ಎಂದು ವಾಟಾಳ್ ನಾಗರಾಜ್‌ಗೆ ಎಚ್ಚರಿಕೆ ನೀಡಿದರು.

ದೇವೇಗೌಡರ ಕುಟುಂಬವನ್ನು ಖರೀದಿಸಲು ಆಗಲ್ಲ: ಕಾಂಗ್ರೆಸ್‌ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ