ಆ್ಯಪ್ನಗರ

ಪರಮೇಶ್ವರ್‌ ಮುಖ್ಯಮಂತ್ರಿ ಆಗುತ್ತಾರೆ: ಹರಿಹರ ಶಾಸಕ ರಾಮಪ್ಪ ಭವಿಷ್ಯ

​ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಡಾ.ಜಿ ಪರಮೇಶ್ವರ್ ಕೊಡುಗೆ ಬಹಳ ಇದೆ. ಮುಂದಿನ ದಿನಗಳಲ್ಲಿ ಡಾ. ಜಿ ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ ಎಂದು ಎಸ್‌. ರಾಮಪ್ಪ ನುಡಿದರು.

Vijaya Karnataka Web 24 Feb 2019, 6:15 pm
ದಾವಣಗೆರೆ: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ, ಅವರೇ ನಮ್ಮ ನಾಯಕರು ಎಂಬ ಆಂದೋಲನ ಕಾಂಗ್ರೆಸ್‌ನಲ್ಲಿ ಜೋರಾಗಿರುವ ಬೆನ್ನಲ್ಲೇ ಪರಮೇಶ್ವರ್‌ ಪರವಾಗಿ ಕೆಲವು ಬ್ಯಾಟಿಂಗ್ ಮಾಡಲು ಆರಂಭಿಸಿದ್ದಾರೆ.
Vijaya Karnataka Web ಪರಮೇಶ್ವರ್‌
ಪರಮೇಶ್ವರ್‌


ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಈ ರಾಜ್ಯದ ಮುಖ್ಯಮಂತ್ರಿ ಆಗೇ ಆಗುತ್ತಾರೆ.

ಈ ರೀತಿ ಭವಿಷ್ಯವನ್ನು ನುಡಿದವರು ಹರಿಹರ ಶಾಸಕ ಎಸ್‌. ರಾಮಪ್ಪ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹರಿಹರ ಶಾಸಕ ಎಸ್‌. ರಾಮಪ್ಪ, ಪರಮೇಶ್ವರ್‌ ಪರ ಬ್ಯಾಟಿಂಗ್‌ ಮಾಡಿದರು.

ಡಾ. ಪರಮೇಶ್ವರ್ ರಾಜಕೀಯ ಗುರುಗಳು. 2014ರಲ್ಲಿ ನನಗೆ ಕಾಂಗ್ರೆಸ್ ಬಿ ಫಾರಂ ಕೊಟ್ಟು ರಾಜಕೀಯಕ್ಕೆ ಅವಕಾಶ ಮಾಡಿಕೊಟ್ಟರು
ಎಂದು ಸ್ಮರಿಸಿದರು.

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಡಾ.ಜಿ ಪರಮೇಶ್ವರ್ ಕೊಡುಗೆ ಬಹಳ ಇದೆ. ಮುಂದಿನ ದಿನಗಳಲ್ಲಿ ಡಾ. ಜಿ ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ ಎಂದು ಎಸ್‌. ರಾಮಪ್ಪ ನುಡಿದರು.

ನಂತರ ಜಿಲ್ಲಾ ಛಲವಾದಿ ಮಹಾಸಭಾ ಅಭಿನಂದನಾ ಹಾಗೂ ಜನ ಜಾಗೃತಿ ಸಮಾವೇಶದಲ್ಲಿ ಹರಿಹರದ ಕಾಂಗ್ರೆಸ್ ಶಾಸಕ ಎಸ್ ರಾಮಪ್ಪ ಮಾತನಾಡಿದರು.

ಕೇಂದ್ರ ಸಚಿವ ಅನಂತಕುಮಾರ್ ಸಂವಿಧಾನ ಬದಲಾಯಿಸುವ ಹೇಳಿಕೆಗೆ ದಲಿತರು ತಕ್ಕ ಉತ್ತರ ನೀಡಬೇಕು. ಮುಂದಿನ ಚುನಾವಣೆಯಲ್ಲಿಯೇ ತಕ್ಕ ಶಾಸ್ತಿ ಮಾಡಬೇಕು ಎಂದರು.

ಡಾ.ಜಿ. ಪರಮೇಶ್ವರ್‌ ಮುಖ್ಯಮಂತ್ರಿ ಆಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಇದಕ್ಕೆ ಎಲ್ಲರೂ ಬೆಂಬಲ ನೀಡಬೇಕು ಎಂದು ಶಾಸಕ ರಾಮಪ್ಪ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ