ಆ್ಯಪ್ನಗರ

ಪೂಜೆ ಪುನಸ್ಕಾರದಿಂದ ಮನಸ್ಸಿಗೆ ನೆಮ್ಮದಿ

ಪೂಜೆ ಪುನಸ್ಕಾರ ಮಾಡುವುದರಿಂದ ಮನಸ್ಸಿಗೆ ಶಾಂತಿ ಸಿಗಲಿದ್ದು, ದೇವರ ಬಗ್ಗೆ ಪ್ರತಿಯೊಬ್ಬರು ನಂಬಿಕೆ ಇಟ್ಟುಕೊಳ್ಳಬೇಕೆಂದು ತಪೋಕ್ಷೇತ್ರ ಕಣ್ವಕುಪ್ಪೆ ಗವಿಮಠದ ಶ್ರೀ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

Vijaya Karnataka 4 Jan 2019, 5:00 am
ಜಗಳೂರು : ಪೂಜೆ ಪುನಸ್ಕಾರ ಮಾಡುವುದರಿಂದ ಮನಸ್ಸಿಗೆ ಶಾಂತಿ ಸಿಗಲಿದ್ದು, ದೇವರ ಬಗ್ಗೆ ಪ್ರತಿಯೊಬ್ಬರು ನಂಬಿಕೆ ಇಟ್ಟುಕೊಳ್ಳಬೇಕೆಂದು ತಪೋಕ್ಷೇತ್ರ ಕಣ್ವಕುಪ್ಪೆ ಗವಿಮಠದ ಶ್ರೀ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
Vijaya Karnataka Web peace is restless in worship
ಪೂಜೆ ಪುನಸ್ಕಾರದಿಂದ ಮನಸ್ಸಿಗೆ ನೆಮ್ಮದಿ


ಪಟ್ಟಣದ ವಾಲ್ಮೀಕಿ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಗುರುವಾರ ಏರ್ಪಡಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಮನುಷ್ಯನು ಭಕ್ತಿಯ ಮೂಲಕ ದೇವರ ಕೃಪೆಗೆ ಪಾತ್ರರಾಗಬೇಕಿದ್ದು, ತಾವು ದುಡಿದ ಹಣದಲ್ಲಿ ಸ್ವಲ್ಪ ಭಾಗವನ್ನು ದಾನ ಮಾಡುವ ಗುಣ ಬೆಳೆಸಿಕೊಂಡರೆ ಮಾತ್ರ ಪರೋಪಕಾರಿಯಾಗಿ ಬಾಳಲು ಸಾಧ್ಯವಾಗಲಿದೆ. ನೆರೆ ಹೊರೆಯವರ ಕಷ್ಟ ಕಾರ್ಪಣ್ಯಗಳಿಗೆ ಭಾಗಿಯಾಗುವ ಗುಣ ಬೆಳೆಸಿಕೊಂಡು ವರ್ಷಕ್ಕೊಮ್ಮೆ ಸತ್ಯನಾರಾಯಣ ಪೂಜೆಯಲ್ಲಿ ಭಾಗವಹಿಸಿದರೆ ಸುಖ ಶಾಂತಿ ನೆಮ್ಮದಿ ಸಿಗಲಿದೆ. ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಸುಮಾರು 251ಕ್ಕೂ ಹೆಚ್ಚು ಜೋಡಿಗಳು ಭಾಗವಹಿಸಿದ್ದು, ಎಲ್ಲರಿಗೂ ಆ ದೇವರು ಸುಖ ಶಾಂತಿ ಕರುಣಿಸಲೆಂದು ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಜಯಂತ್‌ ಪೂಜಾರಿ ಮಾತನಾಡಿ, ಸಂಸ್ಥೆಯಿಂದ ಪ್ರತಿ ವರ್ಷ ಸಾಮೂಹಿಕ ಸತ್ಯನಾರಾಯಣ ಪೂಜೆ ಹಮ್ಮಿಕೊಂಡು, ಸ್ವಸಹಾಯ ಗುಂಪುಗಳ ಸದಸ್ಯರು ಸೇರಿ ಅಪಾರ ಭಕ್ತರು ನಡೆ ಮುಡಿಯಿಂದ ಪೂಜೆಯಲ್ಲಿ ಭಾಗವಹಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಎಸ್‌.ವಿ. ರಾಮಚಂದ್ರರವರ ಪತ್ನಿ ಇಂದಿರಾ ರಾಮಚಂದ್ರ, ನಾಯಕ ಸಮಾಜದ ಮುಖಂಡ ಬಿ.ಲೋಕೇಶ್‌, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಪಿ.ಎಸ್‌. ಅರವಿಂದನ್‌, ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ಸೀತಾರಾಮ್‌, ತಾಲೂಕು ಸಂಯೋಜಕ ಗಂಗಾಧರ್‌, ಆರ್ಥಿಕ ಸಮಾಲೋಚಕ ಬಿ.ಕೆಂಚನಗೌಡ ಸೇರಿ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ