ಆ್ಯಪ್ನಗರ

ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಪ್ರತಿಭಟನೆ

ನೆರೆ ಸಂತ್ರಸ್ತರಿಗೆ ಶೀಘ್ರ ಪರಿಹಾರ ಒದಗಿಸುವಂತೆ ಹಾಗೂ ಆದಿವಾಸಿ, ಅಲ್ಪಸಂಖ್ಯಾತ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯುವಂತೆ ಸರಕಾರಕ್ಕೆ ಒತ್ತಾಯಿಸಿ ಭಾರತ ಕಮ್ಯೂನಿಸ್ಟ್‌ ಪಕ್ಷ ದ ಜಿಲ್ಲಾ ಘಟಕದ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿ, ಎಸಿ ಕುಮಾರಸ್ವಾಮಿಗೆ ಮನವಿ ಸಲ್ಲಿಸಿದರು.

Vijaya Karnataka 20 Aug 2019, 9:16 pm
ದಾವಣಗೆರೆ : ನೆರೆ ಸಂತ್ರಸ್ತರಿಗೆ ಶೀಘ್ರ ಪರಿಹಾರ ಒದಗಿಸುವಂತೆ ಹಾಗೂ ಆದಿವಾಸಿ, ಅಲ್ಪಸಂಖ್ಯಾತ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯುವಂತೆ ಸರಕಾರಕ್ಕೆ ಒತ್ತಾಯಿಸಿ ಭಾರತ ಕಮ್ಯೂನಿಸ್ಟ್‌ ಪಕ್ಷ ದ ಜಿಲ್ಲಾ ಘಟಕದ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿ, ಎಸಿ ಕುಮಾರಸ್ವಾಮಿಗೆ ಮನವಿ ಸಲ್ಲಿಸಿದರು.
Vijaya Karnataka Web protest to provide relief to neighboring victims
ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಪ್ರತಿಭಟನೆ


ಪಕ್ಷ ದ ಸಹ ಕಾರ್ಯದರ್ಶಿ ಆವರಗೆರೆ ಚಂದ್ರು ಮಾತನಾಡಿ, ಕಳೆದ 15 ದಿನಗಳಿಂದ ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಇಡೀ ರಾಜ್ಯ ಕತ್ತಲೆಯಲ್ಲಿದೆ. ರಾಜ್ಯದ ಸುಮಾರು 18 ಜಿಲ್ಲೆಗಳ ಜನರು ನೆರೆಹಾವಳಿ ಪ್ರವಾಹ ಸಂಕಷ್ಟಕ್ಕೊಳಗಾಗಿದ್ದಾರೆ. ಈ ಭೀಕರ ನೆರೆ ಹಾವಳಿಯನ್ನು ರಾಷ್ಟ್ರೀಯ ವಿಪತ್ತು ಎಂದು ಸರಕಾರ ಘೋಷಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯಾದ್ಯಂತ ವಿವಿಧ ಸಮೀಕ್ಷೆಯಂತೆ 2 ಲಕ್ಷ ಮನೆಗಳು ಹಾನಿಗೊಳಗಾಗಿವೆ. 30 ಸಾವಿರ ಕುಟುಂಬಗಳ ಕೃಷಿ ಭೂಮಿ ನೀರು ಪಾಲಾಗಿದೆ. ರಾಜ್ಯದಲ್ಲಿ ಒಟ್ಟಾರೆ 20 ಲಕ್ಷ ಎಕರೆಯಲ್ಲಿನ ಬೆಳೆ ಹಾನಿಯಾಗಿದೆ. 1 ಲಕ್ಷ ಎಕರೆ ಭೂಮಿ ಭೂ ಕೊರೆತಕ್ಕೊಳಗಾಗಿ ಕೃಷಿಗೆ ಯೋಗ್ಯವಿಲ್ಲದಂತಾಗಿದೆ. ಸಾವಿರಾರು ಗ್ರಾಮಗಳು ಮುಳುಗಡೆಯಾಗಿವೆ. ಅಪಾರ ಪ್ರಮಾಣದ ಪಶು ಸಂಪತ್ತು ನಾಶವಾಗಿದೆ. ನೂರಕ್ಕೂ ಹೆಚ್ಚು ಜೀವ ಹಾನಿಯಾಗಿದೆ.

ಕೃಷಿ ಉಪಕರಣ, ಗೃಹ ವಸ್ತುಗಳು, ವಿದ್ಯಾರ್ಥಿಗಳ ಪಠ್ಯ ಪುಸ್ತಕಗಳು, ಮೇವು, ಚಕ್ಕಡಿ, ಟ್ರ್ಯಾಕ್ಟರ್‌ಗಳು ಹಾನಿಗೀಡಾಗಿವೆ. ಭಾರಿ ಪ್ರಮಾಣದ ಸಾರ್ವಜನಿಕ ಆಸ್ತಿ ಪಾಸ್ತಿ, ಶಾಲಾ ಕಟ್ಟಡ, ರಸ್ತೆಗಳು, ಸೇತುವೆಗಳು, ಸರಕಾರದ ಹಾಗೂ ಸಾರ್ವಜನಿಕರ ಆಸ್ತಿಗಳು ದೊಡ್ಡ ಪ್ರಮಾಣದಲ್ಲಿ ಪ್ರವಾಹಕ್ಕೆ ತುತ್ತಾಗಿ ನಾಶವಾಗಿದೆ. ರಾಜ್ಯ ಸರಕಾರ ಇತ್ತ ಗಮನಹರಿಸಿಲ್ಲ ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ಆನಂದ್‌ರಾಜ್‌, ಎಚ್‌.ಜಿ.ಉಮೇಶ್‌, ಆವರಗೆರೆ ವಾಸು, ಮಹಮ್ಮದ್‌ ಬಾಷಾ, ಬಸವರಾಜಪ್ಪ, ಕೆ.ಎಚ್‌. ಹನುಮಂತಪ್ಪ, ಮಾನಚಾರಿ, ಲಿಂಗರಾಜ್‌, ಎಚ್‌.ಪಿ.ಉಮಾಪತಿ, ಎ.ತಿಪ್ಪೇಶಿ, ಎನ್‌.ಟಿ.ತಿಪ್ಪೇಸ್ವಾಮಿ ಸೇರಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಕೇಂದ್ರ ಸರಕಾರದ ಆರ್ಥಿಕ ಸಚಿವೆ ನಿರ್ಮಲಾ ಸೀತರಾಮನ್‌ ರಾಜ್ಯಕ್ಕೆ ಆಗಮಿಸಿದರೂ ಏನೂ ಪ್ರಯೋಜನವಾಗಿಲ್ಲ. ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿಯನ್ನು ಎರಡು ಬಾರಿ ಭೇಟಿ ಮಾಡಿದರೂ ಅವರನ್ನು ಪರಿಗಣಿಸಿಲ್ಲ. ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಮೋದಿ ಮೀನಮೇಷ ಎಣಿಸುತ್ತಿದ್ದಾರೆ.
- ಎಚ್‌.ಕೆ.ರಾಮಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ