ಆ್ಯಪ್ನಗರ

3.1 ಕೋಟಿ ಮೌಲ್ಯದ ಅನಧಿಕೃತ ಅಡಿಕೆ ದಾಸ್ತಾನು ಪತ್ತೆ, 31 ಲಕ್ಷ ರೂ. ದಂಡ

ಕೊರೊನಾ ಲಾಕ್‌ಡೌನ್‌ ಅವಧಿಯಲ್ಲಿ ವ್ಯಾಪಾರಸ್ಥರು, ಉದ್ದಿಮೆದಾರರು ಜಿಎಸ್‌ಟಿ ಕಾಯ್ದೆಯಡಿ ನೋಂದಣಿ ಮಾಡಿಕೊಳ್ಳದೆ ಅಡಿಕೆ ವ್ಯವಹಾರದಲ್ಲಿ ತೊಡಗಿರುವ ಮಾಹಿತಿಯ ಮೇಲೆ ದಾಳಿ ನಡೆಸಿರುವ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಸ್ತಾನುದಾರರ ಮೇಲೆ ದಂಡ ಹಾಕಿದ್ದಾರೆ.

Vijaya Karnataka 28 May 2020, 8:22 pm
ದಾವಣಗೆರೆ: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಅನಧಿಕೃತ ಅಡಿಕೆ ಗೋದಾಮುಗಳ ಮೇಲೆ ದಾಳಿ ನಡೆಸಿದ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು, 3.1 ಕೋಟಿ ರೂ. ಮೌಲ್ಯದ ಅನಧಿಕೃತ ಅಡಿಕೆ ದಾಸ್ತಾನು ಪತ್ತೆ ಹಚ್ಚಿ 31 ಲಕ್ಷ ರೂ. ದಂಡ ವಿಧಿಸಿದ್ದಾರೆ.
Vijaya Karnataka Web Arecanut


ಕೊರೊನಾ ಲಾಕ್‌ಡೌನ್‌ ಅವಧಿಯಲ್ಲಿ ವ್ಯಾಪಾರಸ್ಥರು, ಉದ್ದಿಮೆದಾರರು ಜಿಎಸ್‌ಟಿ ಕಾಯ್ದೆಯಡಿ ನೋಂದಣಿ ಮಾಡಿಕೊಳ್ಳದೆ ಅಡಿಕೆ ವ್ಯವಹಾರದಲ್ಲಿ ತೊಡಗಿರುವ ಮಾಹಿತಿ ಇತ್ತು. ಮಾಹಿತಿ ಆಧರಿಸಿ ಬುಧವಾರ (ಮೇ 27) ಬೆಳಗ್ಗೆ ದಕ್ಷಿಣ ವಲಯ ಜಾರಿ ಬೆಂಗಳೂರು ಮತ್ತು ಬಳ್ಳಾರಿ ವಿಭಾಗದ ಅಧಿಕಾರಿಗಳ ತಂಡಗಳು ಚನ್ನಗಿರಿ ತಾಲೂಕಿನ ನಲ್ಲೂರು, ಕೆರೆಬಳಚಿ ಗ್ರಾಮಗಳಲ್ಲಿನ 5 ಗೋದಾಮುಗಳ ಮೇಲೆ ದಾಳಿ ಮಾಡಿದ್ದಾರೆ. 31 ಲಕ್ಷ ರೂ. ದಂಡ ವಿಧಿಸಿ 12 ಲಕ್ಷ ರೂ. ಸಂಗ್ರಹಿಸಲಾಗಿದೆ. ಉಳಿದ ದಂಡವನ್ನು ಸಂಗ್ರಹಿಸಲಾಗುತ್ತದೆ. ಅಕ್ರಮ ದಾಸ್ತಾನು ಕುರಿತು ಎಪಿಎಂಸಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.

ರಾಜ್ಯದ ಕರಾವಳಿ, ಮಲೆನಾಡು ಮತ್ತು ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಉತ್ತಮ ಗುಣಮಟ್ಟದ ಅಡಿಕೆ ಬೆಳೆಯಲಾಗುತ್ತದೆ. ಈ ಜಿಲ್ಲೆಗಳಿಂದ ಉತ್ತರ ಭಾರತದ ರಾಜ್ಯಗಳಿಗೆ ರವಾನಿಸಲಾಗುತ್ತದೆ. ಅಕ್ರಮವಾಗಿ ಸಾಗಣೆ ಮಾಡುವುದರ ಮೇಲೆ ತೆರಿಗೆ ಇಲಾಖೆ ನಿಗಾ ವಹಿಸಿದ್ದು ಜಿಎಸ್‌ಟಿ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತೆರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ