ಆ್ಯಪ್ನಗರ

ಪ್ರತ್ಯೇಕ ಧರ್ಮ: ಚುನಾವಣೆ ಬಳಿಕ ಮಾತನಾಡುವೆ

ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ನಾನು, ಎಲ್ಲ ನಾನು ಹೇಳಿದಂತೆಯೇ ನಡೆಯುತ್ತೆ, ಚುನಾವಣೆ ಮುಗಿದ ಬಳಿಕ ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಮಾತನಾಡುವುದಾಗಿ ಶಾಸಕ, ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯಿಸಿದ್ದಾರೆ.

Vijaya Karnataka 17 Apr 2019, 5:00 am
ದಾವಣಗೆರೆ :ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ನಾನು, ಎಲ್ಲ ನಾನು ಹೇಳಿದಂತೆಯೇ ನಡೆಯುತ್ತೆ, ಚುನಾವಣೆ ಮುಗಿದ ಬಳಿಕ ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಮಾತನಾಡುವುದಾಗಿ ಶಾಸಕ, ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯಿಸಿದ್ದಾರೆ.
Vijaya Karnataka Web separate religion speak after election
ಪ್ರತ್ಯೇಕ ಧರ್ಮ: ಚುನಾವಣೆ ಬಳಿಕ ಮಾತನಾಡುವೆ


ತಾಲೂಕಿನ ತುರ್ಚುಘಟ್ಟ ಗ್ರಾಮದಲ್ಲಿ ಮಂಗಳವಾರ ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ಬಿ. ಮಂಜಪ್ಪ ಪರ ಚುನಾವಣಾ ಪ್ರಚಾರ ನಡೆಸಿದ ಅವರು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಜತೆ ಮಾತನಾಡಿ, ಪ್ರತ್ಯೇಕ ಧರ್ಮ ವಿಚಾರವಾಗಿ ಎಂಬಿ ಪಾಟೀಲ್‌ ಹಾಗೂ ಡಿಕೆಶಿ ಅವರ ಆರೋಪ ಪ್ರತ್ಯಾರೋಪ ಹಿನ್ನಲೆ ಪ್ರತಿಕ್ರಿಯೆ ನೀಡಿದರು.

ನಾನು ವೀರಶೈವ ಮಹಾಸಭಾಕ್ಕೆ ಅಧ್ಯಕ್ಷ , ನಾನು ಹೇಳಿದಂತೆ ನಡೆಯೋದು ಎಂದು ಖಡಕ್ಕಾಗಿ ಹೇಳಿದರು. ವೀರಶೈವ-ಲಿಂಗಾಯಿತ ಒಂದೇ ನಾಣ್ಯದ ಎರಡು ಮುಖಗಳು, ಎರಡು ಒಂದೇ ಎಂದರು.

ವೋಟು ಒಡೆಯಲು ಕಾಂಗ್ರೆಸ್‌ ಪ್ರತ್ಯೇಕ ಲಿಂಗಾಯಿತ ಧರ್ಮ ವಿಚಾರ ಕೈಗೆತ್ತಿಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯಿಸಲ್ಲ. ಅವರು ಕೂಡ ಸ್ವಂತಂತ್ರರು, ಯಾವ ಪಕ್ಷ ದ ಪರವಾಗಿ, ವಿರೋಧವಾಗಿ ಹೇಳಿಕೊಳ್ಳಬಹುದು. ಚುನಾವಣೆ ಮುಗಿದ ಬಳಿಕ ಪ್ರತ್ಯೇಕ ಧರ್ಮ ವಿಚಾರದ ಬಗ್ಗೆ ಮಾತನಾಡುತ್ತೇನೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ