ಆ್ಯಪ್ನಗರ

ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಸಿದ್ದರಾಮಯ್ಯ ಹುಚ್ಚರಾಗಿದ್ದಾರೆ - ಈಶ್ವರಪ್ಪ

'​​ಧಮ್ ಇದ್ರೆ ಮುಂದಿನ ಸಿಎಂ ಈಶ್ವರಪ್ಪ' ಎಂದು ಘೋಷಣೆ ಮಾಡುವಂತೆ ಸಿದ್ದರಾಮಯ್ಯ ಸವಾಲೆಸಿದಿದ್ದರು. ನಾನು ಮುಂದಿನ ಸಿಎಂ ಎನ್ನುತ್ತಿರುವ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ನೋಟಿಸ್ ಕೊಡಲಿ ಎಂದು ಈಶ್ವರಪ್ಪ ಪ್ರತಿ ಸವಾಲು ಹಾಕಿದ್ದಾರೆ.

Agencies 19 Jan 2021, 8:25 pm
ದಾವಣಗೆರೆ : ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಒಂದು ರೀತಿ ಹುಚ್ಚರಾಗಿದ್ದಾರೆ ಎಂದು ಸಚಿವ ಕೆಎಸ್‌ ಈಶ್ವರಪ್ಪ ಹೇಳಿದರು.
Vijaya Karnataka Web ks eshwarappa


ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈಶ್ವರಪ್ಪ ಸಿಎಂ ಆಗುವೋದಕೋಸ್ಕರ ಕುರುಬರ ಎಸ್‌ಟಿ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿ, ಒಬ್ಬ ಮುಖ್ಯಮಂತ್ರಿ ಆಗಿದ್ದವರು. ಈ ರೀತಿ ನಿಚತನಕ್ಕೆ ಇಳಿಯಬಾರದು. ನಾನು ಮುಖ್ಯಮಂತ್ರಿ ಆಗುವುದು ಬಿಜೆಪಿ ಪಕ್ಷ ನಿರ್ಧಾರ ಮಾಡುತ್ತದೆ ಎಂದರು.

'ಧಮ್ ಇದ್ರೆ ಮುಂದಿನ ಸಿಎಂ ಈಶ್ವರಪ್ಪ' ಎಂದು ಘೋಷಣೆ ಮಾಡುವಂತೆ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ನಾನು ಮುಂದಿನ ಸಿಎಂ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಇದನ್ನು ಡಿಕೆ ಶಿವಕುಮಾರ್‌ ಸ್ಪಷ್ಟ ಪಡಿಸಬೇಕು. ತಾಕತ್ತಿದ್ದರೆ ಸಿದ್ದರಾಮಯ್ಯ ಅವರಿಗೆ ನೋಟಿಸ್ ಕೊಡಲಿ ಎಂದು ಈಶ್ವರಪ್ಪ ಸವಾಲೆಸೆದಿದ್ದಾರೆ.

ಪಾದಯಾತ್ರೆಯನ್ನು ಕನಕ ಗುರುಪೀಠದ ಸ್ವಾಮೀಜಿ ಮಾಡುತ್ತಿದ್ದಾರೆ. ನಾನು ಪಾದಯಾತ್ರೆ ಮಾಡುತ್ತಿಲ್ಲ. ಕನಿಷ್ಠ ಅರ್ಧ ಕಿಲೋಮೀಟರ್ ಆದರೂ ಸಿದ್ದರಾಮಯ್ಯ ಪಾದಯಾತ್ರೆ ಮಾಡಲಿ ಎಂದ ಅವರು, ಬಸನಗೌಡ ಪಾಟೀಲ್‌ ಯತ್ನಾಳ್, ರೇಣುಕಾಚಾರ್ಯರ ಸಮಸ್ಯೆಯನ್ನು ಪಕ್ಷ ಬಗೆಹರಿಸುತ್ತದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ