ಆರೆಸ್ಸೆಸ್ ಬಗ್ಗೆ ಮಾತಾಡುವ ಕುಮಾರಸ್ವಾಮಿಗೆ ಬುದ್ಧಿ ಇಲ್ಲ: ಸಚಿವ ಸೋಮಶೇಖರ್ ಕಿಡಿ
ST somashekar Slams Hd kumaraswamy ಕುಮಾರಸ್ವಾಮಿಯಯವರು ಹತಾಶರಾಗಿದ್ದಾರೆ. ದೇಶ ಭಕ್ತ ಸಂಘಟನೆ ಬಗ್ಗೆ ಏನು ಮಾತನಾಡಬೇಕು ಎಂಬ ತಿಳುವಳಿಕೆಯೂ ಅವರಿಗೆ ಇಲ್ಲ. ಇಂತಹ ಹೇಳಿಕೆಗಳನ್ನ ನೀಡುವಾಗ ತಿಳಿದು ಮಾತನಾಡಬೇಕು ಎಂದು ಹೇಳಿದ್ದಾರೆ. ಆರೆಸ್ಸೆಸ್ನವರಿಗೆ ಶೇಕಡ 40 ರಷ್ಟು ಕಮಿಷನ್ ಕೊಡುತ್ತಾರೆ ಅಂದ್ರೆ ಏನರ್ಥ? ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು. ಸುಖಾಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಮೇಲಾಗಿ ಕುಮಾರಸ್ವಾಮಿ ಅವರಿಗೆ ಏನು ಮಾಡಬೇಕು ಎಂಬುದೇ ಗೊತ್ತಾಗುತ್ತಿಲ್ಲ ಎಂದು ಎಸ್ಟಿ ಸೋಮಶೇಖರ್ ಅವರು ಹೇಳಿದರು.
ಹೈಲೈಟ್ಸ್:
- ಆರೆಸ್ಸೆಸ್ ಬಗ್ಗೆ ಕೇವಲವಾಗಿ ಮಾತನಾಡಿರುವ ಎಚ್ಡಿಕೆಗೆ ಬುದ್ಧಿ ಇಲ್ಲ
- ಕುಮಾರಸ್ವಾಮಿಯು ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ
- ಆರೆಸ್ಸೆಸ್ ಟೀಕೆ ಮಾಡಿದ ಕುಮಾರಸ್ವಾಮಿ ವಿರುದ್ಧ ಎಸ್ಟಿಎಸ್ ಕಿಡಿ
ದಾವಣಗೆರೆ: ಆರೆಸ್ಸೆಸ್ ಬಗ್ಗೆ ಕೇವಲವಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಗೆ ಬುದ್ಧಿ ಇಲ್ಲ ಎಂದು ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಅವರು ತಿರುಗೇಟು ನೀಡಿದ್ದಾರೆ. ದಾವಣಗೆರೆ ನಗರದಲ್ಲಿ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಕುಮಾರಸ್ವಾಮಿಯು ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ. ಅವರಿಗೆ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ ಅನುಭವ ಇದೆ. ಈ ರೀತಿಯಾದ ಹೇಳಿಕೆ ಕೊಡೋದು ಕುಮಾರಸ್ವಾಮಿವರಿಗೆ ಶೋಭೆ ತರುವಂಥದ್ದಲ್ಲ ಎಂದು ಹೇಳಿದ್ದಾರೆ.
ಕುಮಾರಸ್ವಾಮಿಯಯವರು ಹತಾಶರಾಗಿದ್ದಾರೆ. ದೇಶ ಭಕ್ತ ಸಂಘಟನೆ ಬಗ್ಗೆ ಏನು ಮಾತನಾಡಬೇಕು ಎಂಬ ತಿಳುವಳಿಕೆಯೂ ಅವರಿಗೆ ಇಲ್ಲ. ಇಂತಹ ಹೇಳಿಕೆಗಳನ್ನ ನೀಡುವಾಗ ತಿಳಿದು ಮಾತನಾಡಬೇಕು ಎಂದು ಹೇಳಿದ್ದಾರೆ.
ಆರೆಸ್ಸೆಸ್ನವರಿಗೆ ಶೇಕಡ 40 ರಷ್ಟು ಕಮಿಷನ್ ಕೊಡುತ್ತಾರೆ ಅಂದ್ರೆ ಏನರ್ಥ? ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು. ಸುಖಾಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಮೇಲಾಗಿ ಕುಮಾರಸ್ವಾಮಿ ಅವರಿಗೆ ಏನು ಮಾಡಬೇಕು ಎಂಬುದೇ ಗೊತ್ತಾಗುತ್ತಿಲ್ಲ ಎಂದರು.
ಯಶಸ್ವಿನಿ ಯೋಜನೆ ಮರುಜಾರಿ:
ರಾಜ್ಯದಲ್ಲಿ 33 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂಪಾಯಿ ಸಾಲ ನೀಡಲು ಸರ್ಕಾರ ಮುಂದಾಗಿದ್ದು, ಈ ಪೈಕಿ 3 ಲಕ್ಷ ಹೊಸ ರೈತರಿಗೆ ಸಾಲ ನೀಡುವುದಾಗಿ ಸೋಮಶೇಖರ್ ಹೇಳಿದ್ದಾರೆ. ಇನ್ನು, ಬಂದ್ ಆಗಿದ್ದ ಯಶಸ್ವಿನಿ ಯೋಜನೆಯನ್ನ ಮುಂದಿನ ಅಕ್ಟೋಬರ್ 2 ರಂದು ಮತ್ತೆ ಪ್ರಾರಂಭ ಮಾಡುವುದಾಗಿ ಹೇಳಿದ್ದಾರೆ. ಈಗಾಗಲೇ ಎಲ್ಲ ಕಡೆ ಸಿದ್ದತೆಯನ್ನ ನಡೆಸಲಾಗಿದ್ದು, ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಲಾಗಿದೆ. ಇನ್ನು, ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸಲು ಕ್ಷೀರ ಸಮೃದ್ಧಿ ಬ್ಯಾಂಕ್ ಆರಂಭ ಮಾಡಲು ನಿರ್ಧಾರ ಮಾಡಿದ್ದು, ಇದರಲ್ಲಿ 9 ಲಕ್ಷ ಮಹಿಳೆಯರಿಗೆ ಸಾಲ ನೀಡುವ ಉದ್ದೇಶ ಹೊಂದಿದ್ದಾಗಿ ಅವರು ತಿಳಿಸಿದರು.
ಆರೆಸ್ಸೆಸ್ ವಿರುದ್ಧ ಮಾತನಾಡಿದರೆ ಮೋಹಿನಿ ಕಥೆಯಂತೆ ಭಸ್ಮ ಆಗುವುದು ಖಚಿತ: ಎಂಪಿ ರೇಣುಕಾಚಾರ್ಯ
ದಾವಣಗೆರೆ: ಸಂಘ ಪರಿವಾರದವರ ವಿರುದ್ಧ ಮಾತನಾಡಿದರೆ ಭಸ್ಮ ಆಗುತ್ತಾರೆ. ಅಂಥವರು ದೇಶದ್ರೋಹಿಗಳು ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕುಟುಂಬ ರಾಜಕಾರಣ ಮಾಡುವುದು ಜೆಡಿಎಸ್ನವರು. ದೇವೇಗೌಡರಿಂದ ಹಿಡಿದು ಮೊಮ್ಮಕ್ಕಳು ರಾಜಕಾರಣದಲ್ಲಿದ್ದಾರೆ. ಆರೆಸ್ಸೆಸ್ ಹಾಗೂ ಹಿಂದುತ್ವದ ವಿರುದ್ಧ ಮಾತನಾಡಿದರೆ ಮೋಹಿನಿ ಕಥೆಯಂತೆ ಭಸ್ಮ ಆಗುವುದು ಖಚಿತ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆರೆಸ್ಸೆಸ್ ಬಗ್ಗೆ ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಗೆ ನಾಚಿಕೆಯಾಗಬೇಕು. ಸಂಘ ಪರಿವಾರದವರಿಗೆ ಹೆಂಡ್ತಿ ಮಕ್ಕಳಿದ್ದಾರಾ? ಮಾಜಿ ಪ್ರಧಾನಿ ದೇವೇಗೌಡರ ಪುತ್ರ ಹೆಚ್. ಡಿ. ರೇವಣ್ಣ ಮಂತ್ರಿಯಾಗಿದ್ದಾಗ ಹಾಗೂ ಎರಡು ಬಾರಿ ಸಿಎಂ ಆಗಿದ್ದ ಕುಮಾರಸ್ವಾಮಿ ರಾಜ್ಯದ ಲೂಟಿ ಮಾಡಿದ್ದಾರೆ. ಸಂಘ ಪರಿವಾರದ ಬಗ್ಗೆ ಮಾತನಾಡುವ ಯೋಗ್ಯತೆ ಹಾಗೂ ನೈತಿಕತೆ ಕಾಂಗ್ರೆಸ್ ಮುಖಂಡರು ಹಾಗೂ ಕುಮಾರಸ್ವಾಮಿಗೆ ಇಲ್ಲ. ಪರ್ಸಂಟೇಸ್ ಹಾಗೂ ಲೂಟಿ ಮಾಡಿದವರು ನೀವು ಎಂದು ಆರೋಪಿಸಿದರು.
ಲಾಠಿ, ಟೋಪಿ, ಎರಡು ಜೊತೆ ಸಮವಸ್ತ್ರ, ಪ್ಯಾಂಟ್ ಅಷ್ಟೇ ಸಂಘಪರಿವಾರದವರ ಬಳಿ ಇರೋದು. ಇವತ್ತಿಗೂ ಚಾಪೆ ಮೇಲೆ ಮಲಗುತ್ತಾರೆ. ವೈಭವದ ಜೀವನ ನಡೆಸುವುದಿಲ್ಲ. ಎಂದ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತೇವೆ ಎಂಬ ಹಗಲುಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ಮುಳುಗುವ ಹಡಗು. ದೇಶ ಹಾಗೂ ರಾಜ್ಯದಲ್ಲಿ ನೆಲಕಚ್ಚಿದೆ ಎಂದರು.
ಕುಮಾರಸ್ವಾಮಿಯಯವರು ಹತಾಶರಾಗಿದ್ದಾರೆ. ದೇಶ ಭಕ್ತ ಸಂಘಟನೆ ಬಗ್ಗೆ ಏನು ಮಾತನಾಡಬೇಕು ಎಂಬ ತಿಳುವಳಿಕೆಯೂ ಅವರಿಗೆ ಇಲ್ಲ. ಇಂತಹ ಹೇಳಿಕೆಗಳನ್ನ ನೀಡುವಾಗ ತಿಳಿದು ಮಾತನಾಡಬೇಕು ಎಂದು ಹೇಳಿದ್ದಾರೆ.
ಆರೆಸ್ಸೆಸ್ನವರಿಗೆ ಶೇಕಡ 40 ರಷ್ಟು ಕಮಿಷನ್ ಕೊಡುತ್ತಾರೆ ಅಂದ್ರೆ ಏನರ್ಥ? ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು. ಸುಖಾಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಮೇಲಾಗಿ ಕುಮಾರಸ್ವಾಮಿ ಅವರಿಗೆ ಏನು ಮಾಡಬೇಕು ಎಂಬುದೇ ಗೊತ್ತಾಗುತ್ತಿಲ್ಲ ಎಂದರು.
ಯಶಸ್ವಿನಿ ಯೋಜನೆ ಮರುಜಾರಿ:
ರಾಜ್ಯದಲ್ಲಿ 33 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂಪಾಯಿ ಸಾಲ ನೀಡಲು ಸರ್ಕಾರ ಮುಂದಾಗಿದ್ದು, ಈ ಪೈಕಿ 3 ಲಕ್ಷ ಹೊಸ ರೈತರಿಗೆ ಸಾಲ ನೀಡುವುದಾಗಿ ಸೋಮಶೇಖರ್ ಹೇಳಿದ್ದಾರೆ. ಇನ್ನು, ಬಂದ್ ಆಗಿದ್ದ ಯಶಸ್ವಿನಿ ಯೋಜನೆಯನ್ನ ಮುಂದಿನ ಅಕ್ಟೋಬರ್ 2 ರಂದು ಮತ್ತೆ ಪ್ರಾರಂಭ ಮಾಡುವುದಾಗಿ ಹೇಳಿದ್ದಾರೆ. ಈಗಾಗಲೇ ಎಲ್ಲ ಕಡೆ ಸಿದ್ದತೆಯನ್ನ ನಡೆಸಲಾಗಿದ್ದು, ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಲಾಗಿದೆ. ಇನ್ನು, ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸಲು ಕ್ಷೀರ ಸಮೃದ್ಧಿ ಬ್ಯಾಂಕ್ ಆರಂಭ ಮಾಡಲು ನಿರ್ಧಾರ ಮಾಡಿದ್ದು, ಇದರಲ್ಲಿ 9 ಲಕ್ಷ ಮಹಿಳೆಯರಿಗೆ ಸಾಲ ನೀಡುವ ಉದ್ದೇಶ ಹೊಂದಿದ್ದಾಗಿ ಅವರು ತಿಳಿಸಿದರು.
ಆರೆಸ್ಸೆಸ್ ವಿರುದ್ಧ ಮಾತನಾಡಿದರೆ ಮೋಹಿನಿ ಕಥೆಯಂತೆ ಭಸ್ಮ ಆಗುವುದು ಖಚಿತ: ಎಂಪಿ ರೇಣುಕಾಚಾರ್ಯ
ದಾವಣಗೆರೆ: ಸಂಘ ಪರಿವಾರದವರ ವಿರುದ್ಧ ಮಾತನಾಡಿದರೆ ಭಸ್ಮ ಆಗುತ್ತಾರೆ. ಅಂಥವರು ದೇಶದ್ರೋಹಿಗಳು ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕುಟುಂಬ ರಾಜಕಾರಣ ಮಾಡುವುದು ಜೆಡಿಎಸ್ನವರು. ದೇವೇಗೌಡರಿಂದ ಹಿಡಿದು ಮೊಮ್ಮಕ್ಕಳು ರಾಜಕಾರಣದಲ್ಲಿದ್ದಾರೆ. ಆರೆಸ್ಸೆಸ್ ಹಾಗೂ ಹಿಂದುತ್ವದ ವಿರುದ್ಧ ಮಾತನಾಡಿದರೆ ಮೋಹಿನಿ ಕಥೆಯಂತೆ ಭಸ್ಮ ಆಗುವುದು ಖಚಿತ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆರೆಸ್ಸೆಸ್ ಬಗ್ಗೆ ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಗೆ ನಾಚಿಕೆಯಾಗಬೇಕು. ಸಂಘ ಪರಿವಾರದವರಿಗೆ ಹೆಂಡ್ತಿ ಮಕ್ಕಳಿದ್ದಾರಾ? ಮಾಜಿ ಪ್ರಧಾನಿ ದೇವೇಗೌಡರ ಪುತ್ರ ಹೆಚ್. ಡಿ. ರೇವಣ್ಣ ಮಂತ್ರಿಯಾಗಿದ್ದಾಗ ಹಾಗೂ ಎರಡು ಬಾರಿ ಸಿಎಂ ಆಗಿದ್ದ ಕುಮಾರಸ್ವಾಮಿ ರಾಜ್ಯದ ಲೂಟಿ ಮಾಡಿದ್ದಾರೆ. ಸಂಘ ಪರಿವಾರದ ಬಗ್ಗೆ ಮಾತನಾಡುವ ಯೋಗ್ಯತೆ ಹಾಗೂ ನೈತಿಕತೆ ಕಾಂಗ್ರೆಸ್ ಮುಖಂಡರು ಹಾಗೂ ಕುಮಾರಸ್ವಾಮಿಗೆ ಇಲ್ಲ. ಪರ್ಸಂಟೇಸ್ ಹಾಗೂ ಲೂಟಿ ಮಾಡಿದವರು ನೀವು ಎಂದು ಆರೋಪಿಸಿದರು.
ಲಾಠಿ, ಟೋಪಿ, ಎರಡು ಜೊತೆ ಸಮವಸ್ತ್ರ, ಪ್ಯಾಂಟ್ ಅಷ್ಟೇ ಸಂಘಪರಿವಾರದವರ ಬಳಿ ಇರೋದು. ಇವತ್ತಿಗೂ ಚಾಪೆ ಮೇಲೆ ಮಲಗುತ್ತಾರೆ. ವೈಭವದ ಜೀವನ ನಡೆಸುವುದಿಲ್ಲ. ಎಂದ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತೇವೆ ಎಂಬ ಹಗಲುಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ಮುಳುಗುವ ಹಡಗು. ದೇಶ ಹಾಗೂ ರಾಜ್ಯದಲ್ಲಿ ನೆಲಕಚ್ಚಿದೆ ಎಂದರು.