ಜ.20ರಂದು ಹೆಜ್ಜೆ ಗೆಜ್ಜೆಗಳ ಸಂಭ್ರಮ ಕಾರ್ಯಕ್ರಮ
ನಗರದ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಜ.20ರ ಸಂಜೆ 6.30ಕ್ಕೆ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಾಟ್ಯಭಾರತಿ ಶಾಸ್ತ್ರೀಯ ನೃತ್ಯ ಮತ್ತು ಸಂಗೀತ ಕಲಾ ಕೇಂದ್ರದ ವಜ್ರಮಹೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ, 'ಹೆಜ್ಜೆ ಗೆಜ್ಜೆಗಳ ಸಂಭ್ರಮ' ಕಾರ್ಯಕ್ರಮ ನಡೆಯಲಿದೆ ಎಂದು ಕಲಾ ಕೇಂದ್ರದ ಗೌರವಾಧ್ಯಕ್ಷ ಎಚ್.ಬಿ. ಮಂಜುನಾಥ್ ಹೇಳಿದರು.
Vijaya Karnataka 19 Jan 2019, 5:00 am
ದಾವಣಗೆರೆ : ನಗರದ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಜ.20ರ ಸಂಜೆ 6.30ಕ್ಕೆ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಾಟ್ಯಭಾರತಿ ಶಾಸ್ತ್ರೀಯ ನೃತ್ಯ ಮತ್ತು ಸಂಗೀತ ಕಲಾ ಕೇಂದ್ರದ ವಜ್ರಮಹೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ, 'ಹೆಜ್ಜೆ ಗೆಜ್ಜೆಗಳ ಸಂಭ್ರಮ' ಕಾರ್ಯಕ್ರಮ ನಡೆಯಲಿದೆ ಎಂದು ಕಲಾ ಕೇಂದ್ರದ ಗೌರವಾಧ್ಯಕ್ಷ ಎಚ್.ಬಿ. ಮಂಜುನಾಥ್ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ವರ್ಷದಂತೆ ಈ ಬಾರಿಯೂ ಶಾಸ್ತ್ರಿಯ ನೃತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೀಡುವ ಪ್ರಶಸ್ತಿಯೊಂದಿಗೆ ಈ ಬಾರಿ ವಜ್ರ ಮಹೋತ್ಸವದ ವಿಶೇಷವಾಗಿ ಮತ್ತೊಂದು ಪ್ರಶಸ್ತಿಯನ್ನು ಸುಗಮ ಸಂಗೀತ ಕ್ಷೇತ್ರದ ಸಾಧಕರಿಗೆ ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅಥಿತಿಗಳಾಗಿ ಸಂಸದ ಜಿ.ಎಂ.ಸಿದ್ದೇಶ್ವರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯ ನಿರ್ದೇಶಕ ಕುಮಾರ್ ಬೆಕ್ಕೇರಿ ಭಾಗವಹಿಸುವರು.
ಮೂವರಿಗೆ ಪ್ರಶಸ್ತಿ:
ಕಾರ್ಯಕ್ರಮದಲ್ಲಿ ನಾಟ್ಯಾಚಾರ್ಯ ಶ್ರೀನಿವಾಸ ಕುಲಕರ್ಣಿ ಪ್ರಶಸ್ತಿಯನ್ನು ಬೆಂಗಳೂರಿನ ಪ್ರಭಾತ್ ಆರ್ಟ್ಸ್ ಇಂಟರ್ನ್ಯಾಷನಲ್ ನಿರ್ದೇಶಕ ರಾಘವೇಂದ್ರ ಜೆ.ಪ್ರಭಾತ್ಗೆ , ಮೈಸೂರಿನ ಕರ್ನಾಟಕ ಶಾಸ್ತ್ರೀಯ ಸಂಗೀತ ವಿದ್ವಾಂಸರಾದ ಡಾ.ಸುಕನ್ಯಾ ಪ್ರಭಾಕರ್ಗೆ ವಿದುಷಿ ಲಕ್ಷ್ಮೇದೇವಮ್ಮ ಪ್ರಶಸ್ತಿ, ದೂರದರ್ಶನ ವಿಶ್ರಾಂತ ಹೆಚ್ಚುವರಿ ಮಹಾನಿರ್ದೇಶಕ ನಾಡೋಜ ಡಾ.ಮಹೇಶ್ ಜೋಶಿಗೆ ನಾಟ್ಯಭಾರತಿ ಕಲಾಕೇಂದ್ರದ ವಜ್ರ ಮಹೋತ್ಸವ ವಿಶೇಷ ಪ್ರಶಸ್ತಿ ನೀಡಲಾಗುತ್ತದೆ ಎಂದರು.
2018ರಲ್ಲಿ ನಡೆದ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಶೇ.95.75ರಷ್ಟು ಅಂಕ ಗಳಿಸಿದ ಜಿ.ಜೆ.ಮನುಶ್ರೀಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ಅಲ್ಲದೇ 'ರಾಸಲೀಲೆ' ಎಂಬ ಮನಮೋಹಕ ನೃತ್ಯ ರೂಪಕ ಪ್ರದರ್ಶನವಿರುತ್ತದೆ ಎಂದರು.
ಗೋಷ್ಠಿಯಲ್ಲಿ ಶ್ರೀಕಾಂತ್ ರಘುನಾಥ್ ಕುಲಕರ್ಣಿ, ಶ್ರೀನಿಧಿ ರಘುನಾಥ್ ಕುಲಕರ್ಣಿ, ರಜನಿ ರಘುನಾಥ್ಕುಲಕರ್ಣಿ, ರಾಜಶೇಖರ್ ಇದ್ದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ವರ್ಷದಂತೆ ಈ ಬಾರಿಯೂ ಶಾಸ್ತ್ರಿಯ ನೃತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೀಡುವ ಪ್ರಶಸ್ತಿಯೊಂದಿಗೆ ಈ ಬಾರಿ ವಜ್ರ ಮಹೋತ್ಸವದ ವಿಶೇಷವಾಗಿ ಮತ್ತೊಂದು ಪ್ರಶಸ್ತಿಯನ್ನು ಸುಗಮ ಸಂಗೀತ ಕ್ಷೇತ್ರದ ಸಾಧಕರಿಗೆ ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅಥಿತಿಗಳಾಗಿ ಸಂಸದ ಜಿ.ಎಂ.ಸಿದ್ದೇಶ್ವರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯ ನಿರ್ದೇಶಕ ಕುಮಾರ್ ಬೆಕ್ಕೇರಿ ಭಾಗವಹಿಸುವರು.
ಮೂವರಿಗೆ ಪ್ರಶಸ್ತಿ:
ಕಾರ್ಯಕ್ರಮದಲ್ಲಿ ನಾಟ್ಯಾಚಾರ್ಯ ಶ್ರೀನಿವಾಸ ಕುಲಕರ್ಣಿ ಪ್ರಶಸ್ತಿಯನ್ನು ಬೆಂಗಳೂರಿನ ಪ್ರಭಾತ್ ಆರ್ಟ್ಸ್ ಇಂಟರ್ನ್ಯಾಷನಲ್ ನಿರ್ದೇಶಕ ರಾಘವೇಂದ್ರ ಜೆ.ಪ್ರಭಾತ್ಗೆ , ಮೈಸೂರಿನ ಕರ್ನಾಟಕ ಶಾಸ್ತ್ರೀಯ ಸಂಗೀತ ವಿದ್ವಾಂಸರಾದ ಡಾ.ಸುಕನ್ಯಾ ಪ್ರಭಾಕರ್ಗೆ ವಿದುಷಿ ಲಕ್ಷ್ಮೇದೇವಮ್ಮ ಪ್ರಶಸ್ತಿ, ದೂರದರ್ಶನ ವಿಶ್ರಾಂತ ಹೆಚ್ಚುವರಿ ಮಹಾನಿರ್ದೇಶಕ ನಾಡೋಜ ಡಾ.ಮಹೇಶ್ ಜೋಶಿಗೆ ನಾಟ್ಯಭಾರತಿ ಕಲಾಕೇಂದ್ರದ ವಜ್ರ ಮಹೋತ್ಸವ ವಿಶೇಷ ಪ್ರಶಸ್ತಿ ನೀಡಲಾಗುತ್ತದೆ ಎಂದರು.
2018ರಲ್ಲಿ ನಡೆದ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಶೇ.95.75ರಷ್ಟು ಅಂಕ ಗಳಿಸಿದ ಜಿ.ಜೆ.ಮನುಶ್ರೀಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ಅಲ್ಲದೇ 'ರಾಸಲೀಲೆ' ಎಂಬ ಮನಮೋಹಕ ನೃತ್ಯ ರೂಪಕ ಪ್ರದರ್ಶನವಿರುತ್ತದೆ ಎಂದರು.
ಗೋಷ್ಠಿಯಲ್ಲಿ ಶ್ರೀಕಾಂತ್ ರಘುನಾಥ್ ಕುಲಕರ್ಣಿ, ಶ್ರೀನಿಧಿ ರಘುನಾಥ್ ಕುಲಕರ್ಣಿ, ರಜನಿ ರಘುನಾಥ್ಕುಲಕರ್ಣಿ, ರಾಜಶೇಖರ್ ಇದ್ದರು.