ಆ್ಯಪ್ನಗರ

ಮೂವರು ದರೋಡೆಕೋರರ ಬಂಧನ

ಅಂತರ್‌ ಜಿಲ್ಲೆಗಳಲ್ಲಿ ಬೀಗ ಹಾಕಿದ ಮನೆಗಳನ್ನು ಹಗಲು ದರೋಡೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಹರಿಹರ ಪೊಲೀಸರು ಬಂಧಿಸಿ ಸುಮಾರು 21.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಎಸ್‌ಪಿ ಆರ್‌.ಚೇತನ್‌ ತಿಳಿಸಿದ್ದಾರೆ.

Vijaya Karnataka 10 Jun 2018, 5:00 am
ದಾವಣಗೆರೆ : ಅಂತರ್‌ ಜಿಲ್ಲೆಗಳಲ್ಲಿ ಬೀಗ ಹಾಕಿದ ಮನೆಗಳನ್ನು ಹಗಲು ದರೋಡೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಹರಿಹರ ಪೊಲೀಸರು ಬಂಧಿಸಿ ಸುಮಾರು 21.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಎಸ್‌ಪಿ ಆರ್‌.ಚೇತನ್‌ ತಿಳಿಸಿದ್ದಾರೆ.
Vijaya Karnataka Web the arrest of three gangsters
ಮೂವರು ದರೋಡೆಕೋರರ ಬಂಧನ


ನಗರದ ಎಸ್‌ಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚಿಕ್ಕಮಂಗಳೂರು ಜಿಲ್ಲೆ ಶಿವನಿ ಗ್ರಾಮದ ಸ್ವಾಮಿ(26), ಸುರೇಶ್‌(35) ಹಾಗೂ ಹೊನ್ನಾಳಿ ತಾಲೂಕಿನ ದಾನಿಹಳ್ಳಿ ಗ್ರಾಮದ ನೀಲಾಚಾರಿ(39)ಬಂಧಿತರು.

ದಾವಣಗೆರೆ, ಶಿವಮೊಗ್ಗ ಮತ್ತು ಹಾವೇರಿ ಜಿಲ್ಲೆಯ ವಿವಿಧ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ಆರೋಪಿ ಪತ್ತೆಹಚ್ಚುವಲ್ಲಿ ಹರಿಹರ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಹಿಂದೆ ಸ್ವಾಮಿ, ಸುರೇಶ್‌ 6 ತಿಂಗಳು ಕಾಲ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆ ಆಗಿದ್ದರು. ಮತ್ತೆ ಕಳ್ಳತನ ಮಾಡಿ ಸಿಕ್ಕಿ ಬಿದ್ದಿದ್ದಾರೆ ಎಂದರು.

ಈ ಕಳ್ಳರ ಕುರಿತು ಹರಿಹರ 1, ಹದಡಿ 2, ಹೊನ್ನಾಳಿ 2, ನ್ಯಾಮತಿ 1, ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿತ್ತು. ಅಲ್ಲದೇ ಹೊರ ಜಿಲ್ಲೆಯ ಶಿಕಾರಿಪುರ 1, ರಟ್ಟಿಹಳ್ಳಿ 1, ಹಲಗೇರಿ 1 ಪ್ರಕರಣವನ್ನು ಪತ್ತೆ ಹಚ್ಚಲಾಗಿದೆ ಎಂದರು.

ಬಂಧಿತರಿಂದ 21.15 ಲಕ್ಷ ರೂ. ಮೌಲ್ಯದ 705 ಗ್ರಾಂ ಚಿನ್ನ, 680 ಗ್ರಾಂ ಬೆಳ್ಳಿ, 1 ಬೈಕ್‌ ವಶಕ್ಕೆ ಪಡೆದಿದ್ದು, ಒಟ್ಟಾರೆ 12 ಪ್ರಕರಣ ಪತ್ತೆ ಹಚ್ಚಲಾಗಿದೆ ಎಂದರು.

ಎಸ್‌ಪಿ ಆರ್‌.ಚೇತನ್‌, ಎಎಸ್‌ಪಿ ಟಿ.ಜೆ. ಉದೇಶ್‌ ಮಾರ್ಗದರ್ಶನದಲ್ಲಿ ಹರಿಹರ ಗ್ರಾಮಾಂತರ ಪೊಲೀಸ್‌ ಉಪಾಧೀಕ್ಷ ಎಂ.ಕೆ.ಗಂಗಲ್‌ ನೇತೃತ್ವದಲ್ಲಿ ಹರಿಹರ ವೃತ್ತ ನಿರೀಕ್ಷಕ ಎಸ್‌.ಲಕ್ಷ್ಮಣನಾಯ್ಕ್‌, ಗುರುರಾಜ್‌ ಮೈಲಾರಿ ಹಾಗೂ ಸಿಬ್ಬಂದಿ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ