ಆ್ಯಪ್ನಗರ

ಬಿಜೆಪಿಗೆ ಸ್ಥಳೀಯರಿಲ್ಲದ್ದಕ್ಕೆ ದುರ್ಗದ ವ್ಯಕ್ತಿ ಸ್ಪರ್ಧೆ

ಬಿಜೆಪಿಗೆ ಸ್ಪರ್ಧಿಸಲು ದಾವಣಗೆರೆಯಲ್ಲಿ ಅಭ್ಯರ್ಥಿಗಳು ಇಲ್ಲದ ಕಾರಣಕ್ಕೆ ಚಿತ್ರದುರ್ಗ ಜಿಲ್ಲೆಯ ಜನರನ್ನು ತಂದು ದಾವಣಗೆರೆಯಲ್ಲಿ ನಿಲ್ಲಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಚ್‌.ಬಿ. ಮಂಜಪ್ಪ ಹೇಳಿದರು.

Vijaya Karnataka 12 Apr 2019, 5:00 am
ಚನ್ನಗಿರಿ : ಬಿಜೆಪಿಗೆ ಸ್ಪರ್ಧಿಸಲು ದಾವಣಗೆರೆಯಲ್ಲಿ ಅಭ್ಯರ್ಥಿಗಳು ಇಲ್ಲದ ಕಾರಣಕ್ಕೆ ಚಿತ್ರದುರ್ಗ ಜಿಲ್ಲೆಯ ಜನರನ್ನು ತಂದು ದಾವಣಗೆರೆಯಲ್ಲಿ ನಿಲ್ಲಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಚ್‌.ಬಿ. ಮಂಜಪ್ಪ ಹೇಳಿದರು.
Vijaya Karnataka Web the bjp is not an indefatigable person
ಬಿಜೆಪಿಗೆ ಸ್ಥಳೀಯರಿಲ್ಲದ್ದಕ್ಕೆ ದುರ್ಗದ ವ್ಯಕ್ತಿ ಸ್ಪರ್ಧೆ


ತಾಲೂಕಿನ ಸೋಮಶೆಟ್ಟಿಹಳ್ಳಿ, ನಲ್ಲೂರು ಗ್ರಾಮದಿಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಗುರುವಾರ ಕಾಂಗ್ರೆಸ್‌ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕಳೆದ ಹದಿನೈದು ವರ್ಷಗಳಿಂದ ಸಂಸದರ ಅನುದಾನದಲ್ಲಿ ಅಭಿವೃದ್ಧಿಯೂ ಶೂನ್ಯವಾಗಿದೆ ಎಂದು ಟೀಕಿಸಿದರು.

ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಸಾಕಷ್ಟು ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ, ಈಗ ಆಡಳಿತ ನಡೆಸುತ್ತಿರುವಂತಹ ಎನ್‌ಡಿಎ ಸರಕಾರ ನಿತ್ಯ ಬಳಕೆ ವಸ್ತುಗಳ ದರ ಏರಿಸಿ ಜನಸಾಮಾನ್ಯರು ಬದುಕುದಂತಹ ಪರಿಸ್ಥಿತಿ ನಿರ್ಮಾಣ ಮಾಡಿದೆ. ದೇಶ ಬದಲಾವಣೆಯನ್ನು ಬಯಸುತ್ತಿದೆ. ಅದರಂತೆ ದೇಶದಲ್ಲಿ ಯುಪಿಎ ಸರಕಾರ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈಗಾಗಲೇ ನಾಲ್ಕು ತಾಲೂಕುಗಳ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದು ಪಕ್ಷ ದ ಕುರಿತು ಮತ್ತು ನನ್ನ ಮೇಲೆ ನಂಬಿಕೆ ಇರಿಸಿದ ಮತದಾರರು ಉತ್ತಮ ಪ್ರತಿಕ್ರಿಯೆ ವ್ಯಕ್ತ ಪಡಿಸುತ್ತಿದ್ದಾರೆ. ತಾಲೂಕಿನ ಮತದಾರರು ನನಗೆ ಅಶೀರ್ವದಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕ ವಡ್ನಾಳ್‌ ರಾಜಣ್ಣ ಮಾತನಾಡಿ, ದೇಶದ ಭವಿಷ್ಯ ನಿರ್ಧಾರ ಮಾಡುವಂತಹ ಶಕ್ತಿ ಮತದಾರರ ಕೈಲಿದ್ದು, ಜನರು ಬಿಜೆಪಿ ಸರಕಾರದ ಅಡಳಿತದಿಂದ ಬೇಸತ್ತಿದ್ದಾರೆ. ಮಂಜಪ್ಪನವರಿಗೆ ಜಿಪಂ ಅಧ್ಯಕ್ಷ , ಪಕ್ಷ ದ ಜಿಲ್ಲಾಧ್ಯಕ್ಷ ರಾಗಿ ಕಾರ್ಯನಿರ್ವಹಿಸದ ಅನುಭವನ ಇದೆ. ಅದರಂತೆ ಕಾಂಗ್ರೆಸ್‌ ಪಕ್ಷ ವು ಮಂಜಪ್ಪನವರಿಗೆ ಜೆಡಿಎಸ್‌ ಮತ್ತು ಕಾಂಗ್ರೇಸ್‌ ಪಕ್ಷ ದ ಮೈತ್ರಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದ್ದು ಮತದಾರರು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಜೆಡಿಎಸ್‌ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಹೊದಿಗೆರೆ ರಮೇಶ್‌ ಮಾತನಾಡಿ, ರಾಜ್ಯದಲ್ಲಿ ಮೈತ್ರಿಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಎರಡು ಪಕ್ಷ ಗಳು ಸಮ್ಮಿಲನವಾಗಿವೆ. ನಮ್ಮ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಂಜಪ್ಪನವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಎರಡೂ ಪಕ್ಷ ಗಳ ಕಾರ್ಯಕರ್ತರುಗಳು ಒಂದೇ ಎಂಬ ಭಾವನೆಯಿಂದ ಚುನಾವಣಾ ಪ್ರಚಾರ ಮಾಡುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಮುಖಂಡರಾದ ಅಮಾನುಲ್ಲಾ, ಬಲ್ಕೀಷ್‌ ಬಾನು, ಜೆಡಿಎಸ್‌ ತಾಲೂಕು ಅಧ್ಯಕ್ಷ ಬುಳಸಾಗರ ಬಾಬು, ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶ್ರೀನಿವಾಸ್‌, ಸಿ.ನಾಗರಾಜ್‌, ವಡ್ನಾಳ್‌ ಜಗದೀಶ್‌ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ