ಆ್ಯಪ್ನಗರ

ದೇಶದ ಆರ್ಥಿಕತೆಗೆ ಗುಡಿ ಕೈಗಾರಿಕೆ ಬೆನ್ನೆಲುಬು

ಭಾರತ ಅಭಿವೃದ್ಧಿ ಹೊಂದಿದ ದೇಶದ ಪಟ್ಟಿಯಲ್ಲಿ ಗುರುತಿಸಿಕೊಳ್ಳಲು ತಾಂತ್ರಿಕತೆ ಅನ್ವೇಷಣೆ ಕಂಡುಕೊಳ್ಳುವ ಅಗತ್ಯವಿದೆ ಎಂದು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿ ವಿಶ್ರಾಂತ ಕುಲಪತಿ ಪ್ರೊ.ಮೀನಾ ಚಂದಾವರಕರ್‌ ಹೇಳಿದರು.

Vijaya Karnataka 18 Jan 2019, 5:00 am
ದಾವಣಗೆರೆ : ಭಾರತ ಅಭಿವೃದ್ಧಿ ಹೊಂದಿದ ದೇಶದ ಪಟ್ಟಿಯಲ್ಲಿ ಗುರುತಿಸಿಕೊಳ್ಳಲು ತಾಂತ್ರಿಕತೆ ಅನ್ವೇಷಣೆ ಕಂಡುಕೊಳ್ಳುವ ಅಗತ್ಯವಿದೆ ಎಂದು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿ ವಿಶ್ರಾಂತ ಕುಲಪತಿ ಪ್ರೊ.ಮೀನಾ ಚಂದಾವರಕರ್‌ ಹೇಳಿದರು.
Vijaya Karnataka Web the industry is the backbone of the countrys economy
ದೇಶದ ಆರ್ಥಿಕತೆಗೆ ಗುಡಿ ಕೈಗಾರಿಕೆ ಬೆನ್ನೆಲುಬು


ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದಿಂದ ಗುರುವಾರ ಏರ್ಪಡಿಸಿದ್ದ 'ಭಾರತದ ಗುಡಿ ಕೈಗಾರಿಕೆಗಳಲ್ಲಿ ಹೊರಹೊಮ್ಮುತ್ತಿರುವ ಸಮಸ್ಯೆಗಳು, ಸವಾಲುಗಳು ಮತ್ತು ಅವಕಾಶಗಳ' ಕುರಿತ ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ತಂತ್ರಜ್ಞಾನ ಕೊರತೆಯಿಂದಾಗಿ ಸಣ್ಣ ಕೈಗಾರಿಕೆ ಅಭಿವೃದ್ಧಿಗೊಳ್ಳುತ್ತಿಲ್ಲ. ಆದರೆ, ದೇಶದ ಆರ್ಥಿಕತೆಗೆ ಗುಡಿ ಕೈಗಾರಿಕೆ ಬೆನ್ನೆಲುಬಾಗಿದೆ. ಹಲವಾರು ಕ್ಷೇತ್ರಗಳಲ್ಲಿ ಹೇರಳವಾದ ಉದ್ಯೋಗವಕಾಶಗಳಿದ್ದು, ಸಮರ್ಥವಾಗಿ ಉಪಯೋಗಿಸಿಕೊಳ್ಳಬೇಕಿದೆ ಎಂದರು.

ಪ್ರಸ್ತುತ ಹೋಮ್‌ ನರ್ಸಿಂಗ್‌ ಸೇವೆ ಪ್ರಾಮುಖ್ಯತೆ ಪಡೆಯುತ್ತಿದ್ದು, ಮಹಿಳಾ ಸಬಲೀಕರಣಕ್ಕೆ ಸಾಥ್‌ ನೀಡುತ್ತಿದೆ. ಮಹಿಳೆಯರು ಮೀಸಲಾತಿಗಾಗಿ ಕಾಯುತ್ತಾ ಕುಳಿತುಕೊಳ್ಳದೆ ಸತತ ಪರಿಶ್ರಮ ಪಟ್ಟಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಆರ್ಥಿಕ ನೀತಿ ಆರ್ಥ ಮಾಡಿಕೊಂಡು ವಾಣಿಜ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರೆ ಯಶಸ್ಸು ಸಾಧ್ಯ ಎಂದು ತಿಳಿಸಿದರು.

ದಾವಣಗೆರೆ ವಿವಿ ಕುಲಪತಿ ಪ್ರೊ.ಎಸ್‌.ವಿ. ಹಲಸೆ ಮಾತನಾಡಿ, ಸಣ್ಣ ಕೈಗಾರಿಕೆ ಪ್ರೋತ್ಸಾಹದಿಂದ ದೇಶದ ಆರ್ಥಿಕತೆ ಸುಸ್ಥಿರವಾಗುತ್ತದೆ. ಗುಡಿ ಕೈಗಾರಿಕೆಗಳಲ್ಲಿ ಹಣದ ಚಲಾವಣೆ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಸ್ನಾತಕೋತ್ತರ ವಿದ್ಯಾಭ್ಯಾಸದೊಂದಿಗೆ ವಾಣಿಜ್ಯ ಕ್ಷೇತ್ರದಲ್ಲಿ ಪರ್ಯಾಯ ಶಿಕ್ಷಣ ಪಡೆದರೆ ಹೆಚ್ಚಿನ ಉದ್ಯೋಗವಕಾಶ ದೊರೆಯುತ್ತವೆ ಎಂದು ಹೇಳಿದರು.

ದಾವಣಗೆರೆ ವಿವಿ ಕುಲಸಚಿವ ಪ್ರೊ.ಪಿ.ಕಣ್ಣನ್‌ ಮಾತನಾಡಿ, ದೇಶದ ಆರ್ಥಿಕತೆಯಲ್ಲಿ ಶೇ.45ರಷ್ಟು ಭಾಗ ಗುಡಿ ಕೈಗಾರಿಕೆಗಳಿಂದಲೇ ಲಾಭಾಂಶ ದೊರೆಯುತ್ತಿದೆ. ಜನರ ಮೂಲಭೂತ ಅವಶ್ಯಕತೆ ಪೂರೈಸುವಲ್ಲಿ ವಾಣಿಜ್ಯ ವಹಿವಾಟು ಗಮನ ಹರಿಸಬೇಕಿದೆ. ಒಂದು ದೇಶಕ್ಕೆ ಕೈಗಾರಿಕೆಗಳ ಅವಶ್ಯಕತೆ ಹೆಚ್ಚಾಗಿದ್ದು, ಲಾಭದ ಕೇಂದ್ರ ಬಿಂದುವಾಗಲಿದೆ. ಈ ದೆಸೆಯಲ್ಲಿ ವಿದ್ಯಾರ್ಥಿಗಳು ವಾಣಿಜ್ಯಶಾಸ್ತ್ರ ಅಧ್ಯಯನ ನಡೆಸಲು ಅನುಕೂಲವಾಗುವಂತೆ ಸರಕಾರ ಕೋಟ್ಯಂತರ ಹಣ ವಿನಿಯೋಗಿಸುತ್ತಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಪಿ.ಲಕ್ಷ್ಮಣ್‌, ಪ್ರಾಧ್ಯಾಪಕರಾದ ಪ್ರೊ.ಎಚ್‌.ಎಸ್‌.ಅನಿತಾ, ಪ್ರೊ.ಸೀರಪ್ಪ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ