ಆ್ಯಪ್ನಗರ

ಅಮೂಲ್ಯ ಹಿಂದೆ ದೊಡ್ಡ ತಂಡವಿದೆ, ಇಂಥವರನ್ನು ಬೇರು ಸಮೇತ ಕಿತ್ತು ಹಾಕಲಾಗುವುದು: ಬಸವರಾಜ್‌ ಬೊಮ್ಮಾಯಿ

ಕಲಬುರ್ಗಿಯಲ್ಲಿ‌ನಡೆದ ಸಭೆಯೊಂದರಲ್ಲಿ ಮಹಾರಾಷ್ಟ್ರ ದ ಓರ್ವ ಮಾಜಿ ಶಾಸಕರು‌ ಮಾತನಾಡಿದ್ದಾರೆ. ಇದು ಕೋಮು ಭಾವನೆಗೆ ದಕ್ಕೆ ತರುವ ರೀತಿಯಲ್ಲಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಸಚಿವರು ತಿಳಿಸಿದರು.

Vijaya Karnataka Web 22 Feb 2020, 1:18 pm
ದಾವಣಗೆರೆ: ದೇಶ ವಿರೋಧ ಹೇಳಿಕೆಯ ಹಿಂದೆ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಅದೇ ರೀತಿ ರಾಜ್ಯದಲ್ಲಿ ಸಹ ಈ ರೀತಿಯ ಕೆಲಸ ಆಗುತ್ತಿದೆ. ಈ ಕಾರಣಕ್ಕಾಗಿಯೇ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ಬೆಂಗಳೂರಿನಲ್ಲಿ ನಡೆಯಲಿದ್ದು, ಈ ಬಗ್ಗೆ ಸಮಗ್ರವಾಗಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
Vijaya Karnataka Web ಬಸವರಾಜ್‌ ಬೊಮ್ಮಾಯಿ
ಬಸವರಾಜ್‌ ಬೊಮ್ಮಾಯಿ


ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಮಾತನಾಡಿದರು.

ದೇಶದ್ರೋಹಿ ಹೇಳಿಕೆ ನೀಡಿದ ಅಮೂಲ್ಯಾ ಪೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾಳೆ. ಇದಕ್ಕೆ ಕುಮ್ಮಕ್ಕು ನೀಡುವುದು. ಜತೆಗೆ ಕಾನೂನು ನೆರವಿ ನೀಡುವುದು ಸಹ ನಡೆಯುತ್ತಿದೆ. ಇದರ ಹಿಂದೆ ಕೆಲ ವ್ಯಕ್ತಿಗಳು ಹಾಗೂ ಸಂಘಟನೆಗಳು ಸಹ ಇವೆ. ಈ ಎಲ್ಲ ವಿಚಾರಗಳ ಬಗ್ಗೆ ಭಾನುವಾರ ನಡೆಯುವ ಉನ್ನತ ಮಟ್ಟದ ಸಭೆಯಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಇಂತಹ ಕೃತ್ಯದಲ್ಲಿ ಭಾಗಿಯಾದವರನ್ನ ಬೇರು ಸಹಿತ ಕಿತ್ತಾಕಲಾಗುವುದು.

ಕಲಬುರ್ಗಿಯಲ್ಲಿ‌ನಡೆದ ಸಭೆಯೊಂದರಲ್ಲಿ ಮಹಾರಾಷ್ಟ್ರ ದ ಓರ್ವ ಮಾಜಿ ಶಾಸಕರು‌ ಮಾತನಾಡಿದ್ದಾರೆ. ಇದು ಕೋಮು ಭಾವನೆಗೆ ದಕ್ಕೆ ತರುವ ರೀತಿಯಲ್ಲಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಸಚಿವರು ತಿಳಿಸಿದರು.

ಮಾಧ್ಯಮದವನ್ನ ಶಾಸಕರ ಭವನಕ್ಕೆ ಪ್ರವೇಶ ನಿಷೇಧ ವಿಷಯ ಸ್ಪೀಕರ್ ವ್ಯಾಪ್ತಿಯಲ್ಲಿ ಬರುತ್ತದೆ. ನಾನು ಈ ಬಗ್ಗೆ ಏನೂ ಹೇಳಲ್ಲ ಎಂದು ಬಸವರಾಜ್‌ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ