ಆ್ಯಪ್ನಗರ

ದಾವಣಗೆರೆ ಗ್ರಾಪಂ ಚುನಾವಣೆ: ಸೋತವರಿಂದ ಗೆದ್ದವರ ಮೇಲೆ ಹಲ್ಲೆ, ನಿವೃತ್ತ ಶಿಕ್ಷಕ ಸಾವು; ಪುತ್ರ ಗಂಭೀರ!

ಗ್ರಾಮದ ನಿವೃತ್ತ ಶಿಕ್ಷಕ ಕೃಷ್ಣಪ್ಪ (70) ಮೃತರು. ಮೃತರ ಮಗ ವಿರೇಂದ್ರ ಎಂಬುವವರಿಗೆ ತೀವ್ರ ಗಾಯಗೊಂಡ ಹಿನ್ನೆಲೆ ಜಗಳೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸೋತವರು ಹಾಗೂ ಗೆದ್ದವರ ನಡುವೆ ಜಗಳ ನಡೆಯುತ್ತಿದ್ದಾಗ ಜಗಳ ಬಿಡಿಸಲು ತೆರಳಿದ್ದರು.

Vijaya Karnataka Web 4 Jan 2021, 8:38 am
ಜಗಳೂರು: ಕಾಂಗ್ರೆಸ್‌ ಮತ್ತು ಬಿಜೆಪಿ ಬೆಂಬಲಿತ ಗ್ರಾಪಂ ಅಭ್ಯರ್ಥಿಗಳ ಸೋಲು ಗೆಲುವಿನ ವಿಷಯವಾಗಿ ಮಾರಾಮಾರಿ ನಡೆದು ಜಗಳ ಬಿಡಿಸಲು ಹೋದ ವ್ಯಕ್ತಿಯೊಬ್ಬ ಮೃತಪಟ್ಟು, ಮತ್ತೊಬ್ಬ ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲೂಕಿನ ಮೀನಿಗರಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಗ್ರಾಮದ ನಿವೃತ್ತ ಶಿಕ್ಷಕ ಕೃಷ್ಣಪ್ಪ (70) ಮೃತರು.
Vijaya Karnataka Web death4
Representative image


ಮೃತರ ಮಗ ವಿರೇಂದ್ರ ಎಂಬುವವರಿಗೆ ತೀವ್ರ ಗಾಯಗೊಂಡ ಹಿನ್ನೆಲೆ ಜಗಳೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೀನಿಗರಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಬೆಂಬಲಿತರ ನಡುವೆ ಜಿದ್ದಾಜಿದ್ದಿನ ಪೈಪೊಟಿ ನಡುವೆ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ತಿಪ್ಪಮ್ಮ ರಂಗಪ್ಪ ಎಂಬುವವರು ಜಯಗಳಿಸಿದ್ದರು.

ಪ್ರತಿಸ್ಪರ್ಧಿ ಬಿಜೆಪಿ ಬೆಂಬಲಿತ ಶಶಿಕಲಾ ಶೃಂಗೇಶ್‌ ಎಂಬವವರು ಪರಾಜಿತರಾಗಿದ್ದರು. ಈ ಸಂಬಂಧವಾಗಿ ಇಬ್ಬರ ನಡುವೆ ಆಗಾಗ ಜಗಳ ನಡೆದಿದೆ.ಭಾನುವಾರ ಸಂಜೆ ಬಿಜೆಪಿ ಬೆಂಬಲಿತ ಶೃಂಗೇಶ್‌ ಕಡೆಯವರು ಹಾಗೂ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ತಿಪ್ಪಮ್ಮ ರಂಗಪ್ಪನವರ ನಡುವೆ ಜಗಳ ನಡೆಯುತ್ತಿತ್ತು.

ದಾವಣಗೆರೆ: ಮದುವೆ ಊಟ ಮಾಡಿ 22 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಈ ವೇಳೆ ನಿವೃತ್ತ ಶಿಕ್ಷಕ ಕೃಷ್ಣಪ್ಪನವರು ಜಗಳ ಬಿಡಿಸಲು ಹೋದಾಗ ಲ್ಲಿದ್ದವರು ಹಿಗ್ಗಾಮುಗ್ಗಾ ಥಳಿಸಿದ ಹಿನ್ನಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರ ಮಗನಿಗೆ ಗಾಯಗಳಾಗಿವೆ. ಈ ವೇಳೆ ಮಾಜಿ ಶಾಸಕ ಎಚ್‌.ಪಿ. ರಾಜೇಶ್‌ ಹಾಗೂ ಕಾಂಗ್ರೆಸ್‌ ಮುಖಂಡ ಬಸವಾಪುರ ರವಿಚಂದ್ರ ಸೇರಿ ಕಾಂಗ್ರೇಸ್‌ ಮುಖಂಡರು ಸ್ಥಳಕ್ಕೆ ಧಾವಿಸಿ ಸಾಂತ್ವನ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ