ದಾವಣಗೆರೆ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರೋಡ್ ಶೋ ನಡೆಸಿ ಹವಾ ಎಬ್ಬಿಸಿದ್ದ ಬೆನ್ನಲ್ಲೇ ಇಬ್ಬರು ಸ್ಟಾರ್ ಸಿಎಂಗಳು ಪ್ರಚಾರಕ್ಕೆ ಇಂದು ಜಿಲ್ಲೆಗೆ ಆಗಮಿಸುತ್ತಿದ್ದು ಕಣ ರಂಗೇರಿದೆ. ಏಟಿಗೆ ಎದಿರೇಟು ನೀಡುತ್ತಲೇ ರಾಜ್ಯ ತಿರುಗುತ್ತಿರುವ ಸಿಎಂ ಸಿದ್ದರಾಮಯ್ಯ ಇಂದು, ನಾಳೆ ಜಿಲ್ಲೆಯ ಹರಿಹರ, ಮಾಯಕೊಂಡ, ಹರಪನಹಳ್ಳಿ, ಚನ್ನಗಿರಿ ನಾಲ್ಕು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಇನ್ನೊಂದೆಡೆ ಬಿಜೆಪಿಯ ಸ್ಟಾರ್ ಪ್ರಚಾರಕ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಕೂಡ ಇಂದು ಹೊನ್ನಾಳಿಯಲ್ಲಿ ಪ್ರಚಾರ ನಡೆಸಲಿದ್ದಾರೆ, ಜತೆಗೆ ಇಲ್ಲಿಯೇ ವಾಸ್ತವ್ಯ ಕೂಡ ಹೂಡಲಿದ್ದಾರೆ.
ಈ ಇಬ್ಬರ ಆಗಮನದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರಚಾರ ರಂಗು ಪಡೆದುಕೊಳ್ಳಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಹಿಡಿದು ಬಿಜೆಪಿಯ ಅಮಿತ್ ಶಾ ಸೇರಿ ರಾಜ್ಯಕ್ಕೆ ಆಗಮಿಸುವ ಎಲ್ಲ ನಾಯಕರಿಗೂ ಸಿದ್ದರಾಮಯ್ಯ ಅವರೇ ಟಾರ್ಗೆಟ್ ಆಗಿರುವುದರಿಂದ ಯೋಗಿ ಆದಿತ್ಯನಾಥ್ ಇಲ್ಲಿ ಯಾವ ಮಾತಿನ ಬಾಂಬ್ ಸಿಡಿಸಬಹುದು, ಅದಕ್ಕೆ ಇದೇ ಜಿಲ್ಲೆಯಲ್ಲಿ ಪ್ರಚಾರ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ತಿರುಗೇಟು ಏನು ಎಂಬ ಕುತೂಹಲ ಹೆಚ್ಚಿದೆ.
ಯೋಗಿ ಆದಿತ್ಯನಾಥ್ ಪ್ರಚಾರ:
ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಿಜೆಪಿಯಿಂದ ಮೇ 3 ರ ಸಂಜೆ 6ಕ್ಕೆ ಹೊನ್ನಾಳಿಯಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಭಾಷಣ ಮಾಡಲಿದ್ದಾರೆ. ಇಲ್ಲಿನ ಪಕ್ಷದ ಅಭ್ಯರ್ಥಿ ಎಂ.ಪಿ. ರೇಣುಕಾಚಾರ್ಯ ಪರ ಮತ ಯಾಚಿಸುವರು. ಸಂಸದ ಜಿ.ಎಂ. ಸಿದ್ದೇಶ್, ಬಿಜೆಪಿ ಅಭ್ಯರ್ಥಿ ರೇಣುಕಾಚಾರ್ಯ ಸೇರಿದಂತೆ ಅನೇಕ ರಾಜ್ಯ, ಜಿಲ್ಲಾ ಮುಖಂಡರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ನಂತರ ನಗರದ ಹಿರೇಕಲ್ಮಠದಲ್ಲಿ ವಾಸ್ತವ್ಯ ಹೂಡುವರು. ಈ ಸಂದರ್ಭದಲ್ಲಿ ಅವರು ಅನೇಕ ಸಾಧು ಸಂತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ನಂತರ ಮಾರನೇ ದಿನ ಶುಕ್ರವಾರ ಯೋಗಿ ಆದಿತ್ಯನಾಥ್ ಅವರು ಅಭ್ಯರ್ಥಿ ಎಂ.ಪಿ.ರೇಣುಕಾಚಾರ್ಯ ಅವರ ನಿವಾಸದಲ್ಲಿ ಬೆಳಗಿನ ಉಪಹಾರ ಮುಗಿಸಿಕೊಂಡು ಅಲ್ಲಿಂದ ಲಖನೌಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ರಾಜಪ್ಪ ಮಾಹಿತಿ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಪ್ರಚಾರ
ಸಿಎಂ ಸಿದ್ದರಾಮಯ್ಯ ಕೂಡ ಜಿಲ್ಲೆಯಲ್ಲಿ ಕೂಡ ಎರಡು ದಿನ ಪ್ರಚಾರ ನಡೆಸಲಿದ್ದಾರೆ. ಮೇ 3 ರ ಗುರುವಾರ ಬೆಳಗ್ಗೆ 11ಕ್ಕೆ ಹರಿಹರದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಬಹಿರಂಗ ಸಭೆಯಲ್ಲಿ ಪ್ರಚಾರ ನಡೆಸುವರು. ನಂತರ ಮಧ್ಯಾಹ್ನ 1.30ಕ್ಕೆ ಮಾಯಕೊಂಡ ಸರಕಾರಿ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಅಲ್ಲಿಂದ ಮಧ್ಯಾಹ್ನ 3 ಗಂಟೆಗೆ ಹರಪನಹಳ್ಳಿ ಸಭೆ ಮುಗಿಸಿಕೊಂಡು, ಮೊಳಕಾಲ್ಮೂರು, ನಂತರ ನಾಯಕನಹಟ್ಟಿಯಲ್ಲಿ ನಡೆಯಲಿರುವ ಪ್ರಚಾರ ಸಭೆಯಲ್ಲಿ ಭಾಗವಹಿಸುವರು. ಮೇ. 4 ರ ಬೆಳಗ್ಗೆ 11 ಕ್ಕೆ ಸಂತೆಬೆನ್ನೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ. ಇವರ ಜತೆ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ.
ಹೆಲಿಪ್ಯಾಡ್ ಸಿದ್ಧತೆ
ಇಬ್ಬರು ಸಿಎಂಗಳು ಹೆಲಿಕಾಪ್ಟರ್ನಲ್ಲಿ ಪ್ರಚಾರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೆಲಿಪ್ಯಾಡ್ಗಳ ಸಿದ್ಧತೆ ಕೂಡ ಭರದಿಂದ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಆಗಮಿಸುವ ಹೆಲಿಕಾಪ್ಟರ್ಗಾಗಿ ಮಾಯಕೊಂಡ ಎಪಿಎಂಸಿ ಆವರಣ, ಸಂತೆಬೆನ್ನೂರಿನ ಹೊರವಲಯದ ಚಿಕ್ಕಬೆನ್ನೂರಿನ ಕೆರೆ ಪಕ್ಕದಲ್ಲಿ ಹೆಲಿಪ್ಯಾಡ್ ಸಿದ್ದಗೊಳಿಸಲಾಗುತ್ತಿದೆ. ಯುಪಿ ಸಿಎಂ ಯೋಗಿ ಅದಿತ್ಯನಾಥ್ ಆಗಮನದ ಹಿನ್ನೆಲೆಯಲ್ಲಿ ಹೊನ್ನಾಳಿಯ ಕಡದಕಟ್ಟೆ ಕ್ರಾಸ್ ಬಳಿಯಿರುವ ಹೆಲಿಪ್ಯಾಡ್ ಸ್ವಚ್ಛಗೊಳಿಸಿ ಸಿದ್ಧಪಡಿಸಲಾಗಿದೆ.
ಈ ಇಬ್ಬರ ಆಗಮನದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರಚಾರ ರಂಗು ಪಡೆದುಕೊಳ್ಳಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಹಿಡಿದು ಬಿಜೆಪಿಯ ಅಮಿತ್ ಶಾ ಸೇರಿ ರಾಜ್ಯಕ್ಕೆ ಆಗಮಿಸುವ ಎಲ್ಲ ನಾಯಕರಿಗೂ ಸಿದ್ದರಾಮಯ್ಯ ಅವರೇ ಟಾರ್ಗೆಟ್ ಆಗಿರುವುದರಿಂದ ಯೋಗಿ ಆದಿತ್ಯನಾಥ್ ಇಲ್ಲಿ ಯಾವ ಮಾತಿನ ಬಾಂಬ್ ಸಿಡಿಸಬಹುದು, ಅದಕ್ಕೆ ಇದೇ ಜಿಲ್ಲೆಯಲ್ಲಿ ಪ್ರಚಾರ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ತಿರುಗೇಟು ಏನು ಎಂಬ ಕುತೂಹಲ ಹೆಚ್ಚಿದೆ.
ಯೋಗಿ ಆದಿತ್ಯನಾಥ್ ಪ್ರಚಾರ:
ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಿಜೆಪಿಯಿಂದ ಮೇ 3 ರ ಸಂಜೆ 6ಕ್ಕೆ ಹೊನ್ನಾಳಿಯಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಭಾಷಣ ಮಾಡಲಿದ್ದಾರೆ. ಇಲ್ಲಿನ ಪಕ್ಷದ ಅಭ್ಯರ್ಥಿ ಎಂ.ಪಿ. ರೇಣುಕಾಚಾರ್ಯ ಪರ ಮತ ಯಾಚಿಸುವರು. ಸಂಸದ ಜಿ.ಎಂ. ಸಿದ್ದೇಶ್, ಬಿಜೆಪಿ ಅಭ್ಯರ್ಥಿ ರೇಣುಕಾಚಾರ್ಯ ಸೇರಿದಂತೆ ಅನೇಕ ರಾಜ್ಯ, ಜಿಲ್ಲಾ ಮುಖಂಡರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ನಂತರ ನಗರದ ಹಿರೇಕಲ್ಮಠದಲ್ಲಿ ವಾಸ್ತವ್ಯ ಹೂಡುವರು. ಈ ಸಂದರ್ಭದಲ್ಲಿ ಅವರು ಅನೇಕ ಸಾಧು ಸಂತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ನಂತರ ಮಾರನೇ ದಿನ ಶುಕ್ರವಾರ ಯೋಗಿ ಆದಿತ್ಯನಾಥ್ ಅವರು ಅಭ್ಯರ್ಥಿ ಎಂ.ಪಿ.ರೇಣುಕಾಚಾರ್ಯ ಅವರ ನಿವಾಸದಲ್ಲಿ ಬೆಳಗಿನ ಉಪಹಾರ ಮುಗಿಸಿಕೊಂಡು ಅಲ್ಲಿಂದ ಲಖನೌಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ರಾಜಪ್ಪ ಮಾಹಿತಿ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಪ್ರಚಾರ
ಸಿಎಂ ಸಿದ್ದರಾಮಯ್ಯ ಕೂಡ ಜಿಲ್ಲೆಯಲ್ಲಿ ಕೂಡ ಎರಡು ದಿನ ಪ್ರಚಾರ ನಡೆಸಲಿದ್ದಾರೆ. ಮೇ 3 ರ ಗುರುವಾರ ಬೆಳಗ್ಗೆ 11ಕ್ಕೆ ಹರಿಹರದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಬಹಿರಂಗ ಸಭೆಯಲ್ಲಿ ಪ್ರಚಾರ ನಡೆಸುವರು. ನಂತರ ಮಧ್ಯಾಹ್ನ 1.30ಕ್ಕೆ ಮಾಯಕೊಂಡ ಸರಕಾರಿ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಅಲ್ಲಿಂದ ಮಧ್ಯಾಹ್ನ 3 ಗಂಟೆಗೆ ಹರಪನಹಳ್ಳಿ ಸಭೆ ಮುಗಿಸಿಕೊಂಡು, ಮೊಳಕಾಲ್ಮೂರು, ನಂತರ ನಾಯಕನಹಟ್ಟಿಯಲ್ಲಿ ನಡೆಯಲಿರುವ ಪ್ರಚಾರ ಸಭೆಯಲ್ಲಿ ಭಾಗವಹಿಸುವರು. ಮೇ. 4 ರ ಬೆಳಗ್ಗೆ 11 ಕ್ಕೆ ಸಂತೆಬೆನ್ನೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ. ಇವರ ಜತೆ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ.
ಹೆಲಿಪ್ಯಾಡ್ ಸಿದ್ಧತೆ
ಇಬ್ಬರು ಸಿಎಂಗಳು ಹೆಲಿಕಾಪ್ಟರ್ನಲ್ಲಿ ಪ್ರಚಾರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೆಲಿಪ್ಯಾಡ್ಗಳ ಸಿದ್ಧತೆ ಕೂಡ ಭರದಿಂದ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಆಗಮಿಸುವ ಹೆಲಿಕಾಪ್ಟರ್ಗಾಗಿ ಮಾಯಕೊಂಡ ಎಪಿಎಂಸಿ ಆವರಣ, ಸಂತೆಬೆನ್ನೂರಿನ ಹೊರವಲಯದ ಚಿಕ್ಕಬೆನ್ನೂರಿನ ಕೆರೆ ಪಕ್ಕದಲ್ಲಿ ಹೆಲಿಪ್ಯಾಡ್ ಸಿದ್ದಗೊಳಿಸಲಾಗುತ್ತಿದೆ. ಯುಪಿ ಸಿಎಂ ಯೋಗಿ ಅದಿತ್ಯನಾಥ್ ಆಗಮನದ ಹಿನ್ನೆಲೆಯಲ್ಲಿ ಹೊನ್ನಾಳಿಯ ಕಡದಕಟ್ಟೆ ಕ್ರಾಸ್ ಬಳಿಯಿರುವ ಹೆಲಿಪ್ಯಾಡ್ ಸ್ವಚ್ಛಗೊಳಿಸಿ ಸಿದ್ಧಪಡಿಸಲಾಗಿದೆ.