ಧಾರವಾಡ : ಬಿಹಾರದಲ್ಲಿ ಮೆದುಳು ಜ್ವರದಿಂದ 170ಕ್ಕೂ ಹೆಚ್ಚು ಮಕ್ಕಳ ಸಾವಿಗೆ ಕಾರಣವಾದ ಆರೋಗ್ಯ ವ್ಯವಸ್ಥೆಯ ವೈಫಲ್ಯವನ್ನು ಖಂಡಿಸಿ ಮಂಗಳವಾರ ಎಸ್ಯುಸಿಐ-ಕಮ್ಯುನಿಸ್ಟ್ ಪಕ್ಷ ದ ಕೇಂದ್ರ ಸಮಿತಿಯಿಂದ ಮಂಗಳವಾರ ನಗರದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಎಸ್ಯುಸಿಐ-ಕಮ್ಯುನಿಸ್ಟ್ ಪಕ್ಷ ದ ಜಿಲ್ಲಾ ಸಮಿತಿ ಸದಸ್ಯ ಗಂಗಾಧರ ಬಡಿಗೇರ ಮಾತನಾಡಿ, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಇಂತಹ ಸಂಪೂರ್ಣ ವೈಫಲ್ಯವನ್ನು ತೋರಿಸುತ್ತದೆ. ಸರಕಾರಿ ಆಡಳಿತ ವ್ಯವಸ್ಥೆ ಚುನಾವಣಾ ತಯಾರಿಯಲ್ಲಿ ಮುಳುಗಿ ಈ ಕಾಯಿಲೆಯನ್ನು ಎದುರಿಸಲು ಸನ್ನದ್ಧರಾಗದಿರುವುದೇ ಈ ದುರಂತಕ್ಕೆ ಕಾರಣ.ಅವಶ್ಯವಿರುವಷ್ಟು ವೈದ್ಯರು, ಔಷಧಗಳು, ದಾದಿಯರು ಮೊದಲಾದ ಕೊರತೆಗಳನ್ನು ಆಸ್ಪತ್ರೆಗಳಲ್ಲಿ ಸರಿಪಡಿಸದೇ ಇರುವುದೇ ಇಂತಹ ವಿಪತ್ತಿಗೆ ಕಾರಣವಾಗುತ್ತದೆ. ಇನ್ನಾದರೂ ಕೇಂದ್ರ ಹಾಗೂ ಬಿಹಾರ ರಾಜ್ಯ ಸರಕಾರ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದರು.
ಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ಕನಿಷ್ಠ 10 ಲಕ್ಷ ರೂ.ಗಳ ಪರಿಹಾರ ನೀಡಬೇಕು. ಬಿಹಾರದಲ್ಲಿ ಈ ಕಾಯಿಲೆಯ ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ತುರ್ತು ಕ್ರಮ ಕೈಗೊಳ್ಳಬೇಕು. ಅಲ್ಲದೇ ಈ ತರದ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಎಸ್ಯುಸಿಐ-ಕಮ್ಯುನಿಸ್ಟ್ ಪಕ್ಷ ದ ಜಿಲ್ಲಾ ಸಮಿತಿ ಸದಸ್ಯ ಲಕ್ಷ ್ಮಣ ಜಡಗನ್ನವರ ಮಾತನಾಡಿ, ಮಕ್ಕಳ ಸಾವಿನ ಹೃದಯ ವಿದ್ರಾವಕ ದುರಂತದ ಪರಿಶೀಲನಾ ಸಭೆಯಲ್ಲಿ ಬಿಹಾರದ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ವಿಕೆಟ್ ಎಷ್ಟು ಬಿತ್ತು ಎಂದು ಭಾರತ ಪಾಕಿಸ್ತಾನ ಕ್ರಿಕೆಟ್ ಪಂದ್ಯದ ಕುರಿತು ಆಸಕ್ತಿ ವಹಿಸಿದ್ದು, ಸರಕಾರದ ಅಸೂಕ್ಷ ್ಮತೆಯನ್ನು ಎತ್ತಿ ತೋರಿಸಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜಾಸಾಬ್, ಭುವನಾ, ದೀಪಾ, ಶರಣು ಗೋನವಾರ, ರಮೇಶ ಹೊಸಮನಿ, ಮಧುಲತಾ, ಭವಾನಿಶಂಕರ್, ಮಾರುತಿ ಇಂಚಲ್, ಶಿವಾನಂದ, ಶಂಕರ್ ಕಮ್ಮಾರ ಸೇರಿದಂತೆ ನಾಗರಿಕರು, ವಿದ್ಯಾರ್ಥಿ ಉಪಸ್ಥಿತರಿದ್ದರು.
ಈ ವೇಳೆ ಎಸ್ಯುಸಿಐ-ಕಮ್ಯುನಿಸ್ಟ್ ಪಕ್ಷ ದ ಜಿಲ್ಲಾ ಸಮಿತಿ ಸದಸ್ಯ ಗಂಗಾಧರ ಬಡಿಗೇರ ಮಾತನಾಡಿ, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಇಂತಹ ಸಂಪೂರ್ಣ ವೈಫಲ್ಯವನ್ನು ತೋರಿಸುತ್ತದೆ. ಸರಕಾರಿ ಆಡಳಿತ ವ್ಯವಸ್ಥೆ ಚುನಾವಣಾ ತಯಾರಿಯಲ್ಲಿ ಮುಳುಗಿ ಈ ಕಾಯಿಲೆಯನ್ನು ಎದುರಿಸಲು ಸನ್ನದ್ಧರಾಗದಿರುವುದೇ ಈ ದುರಂತಕ್ಕೆ ಕಾರಣ.ಅವಶ್ಯವಿರುವಷ್ಟು ವೈದ್ಯರು, ಔಷಧಗಳು, ದಾದಿಯರು ಮೊದಲಾದ ಕೊರತೆಗಳನ್ನು ಆಸ್ಪತ್ರೆಗಳಲ್ಲಿ ಸರಿಪಡಿಸದೇ ಇರುವುದೇ ಇಂತಹ ವಿಪತ್ತಿಗೆ ಕಾರಣವಾಗುತ್ತದೆ. ಇನ್ನಾದರೂ ಕೇಂದ್ರ ಹಾಗೂ ಬಿಹಾರ ರಾಜ್ಯ ಸರಕಾರ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದರು.
ಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ಕನಿಷ್ಠ 10 ಲಕ್ಷ ರೂ.ಗಳ ಪರಿಹಾರ ನೀಡಬೇಕು. ಬಿಹಾರದಲ್ಲಿ ಈ ಕಾಯಿಲೆಯ ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ತುರ್ತು ಕ್ರಮ ಕೈಗೊಳ್ಳಬೇಕು. ಅಲ್ಲದೇ ಈ ತರದ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಎಸ್ಯುಸಿಐ-ಕಮ್ಯುನಿಸ್ಟ್ ಪಕ್ಷ ದ ಜಿಲ್ಲಾ ಸಮಿತಿ ಸದಸ್ಯ ಲಕ್ಷ ್ಮಣ ಜಡಗನ್ನವರ ಮಾತನಾಡಿ, ಮಕ್ಕಳ ಸಾವಿನ ಹೃದಯ ವಿದ್ರಾವಕ ದುರಂತದ ಪರಿಶೀಲನಾ ಸಭೆಯಲ್ಲಿ ಬಿಹಾರದ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ವಿಕೆಟ್ ಎಷ್ಟು ಬಿತ್ತು ಎಂದು ಭಾರತ ಪಾಕಿಸ್ತಾನ ಕ್ರಿಕೆಟ್ ಪಂದ್ಯದ ಕುರಿತು ಆಸಕ್ತಿ ವಹಿಸಿದ್ದು, ಸರಕಾರದ ಅಸೂಕ್ಷ ್ಮತೆಯನ್ನು ಎತ್ತಿ ತೋರಿಸಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜಾಸಾಬ್, ಭುವನಾ, ದೀಪಾ, ಶರಣು ಗೋನವಾರ, ರಮೇಶ ಹೊಸಮನಿ, ಮಧುಲತಾ, ಭವಾನಿಶಂಕರ್, ಮಾರುತಿ ಇಂಚಲ್, ಶಿವಾನಂದ, ಶಂಕರ್ ಕಮ್ಮಾರ ಸೇರಿದಂತೆ ನಾಗರಿಕರು, ವಿದ್ಯಾರ್ಥಿ ಉಪಸ್ಥಿತರಿದ್ದರು.