ಆ್ಯಪ್ನಗರ

ಧಾರವಾಡ: ಬಸ್ ಅಪಘಾತ, 15 ಜನರಿಗೆ ಗಾಯ

ವಾಹನವೊಂದನ್ನು ಓವರ್‌ಟೇಕ್‌ ಮಾಡಲು ಹೋಗಿ ಸಾರಿಗೆ ಸಂಸ್ಥೆಯ ಬಸ್‌ ಪಲ್ಟಿಯಾದ ಪರಿಣಾಮ ಪ್ರಯಾಣಿಕರು ಗಾಯಗೊಂಡಿದ್ದು, ಕುಸುಗಲ್‌ ಬಳಿಯ ಇಂಗಳಹಳ್ಳಿ ಕ್ರಾಸ್‌ ಬಳಿ ಈ ಘಟನೆ ಸಂಭವಿಸಿದೆ.

Vijaya Karnataka Web 14 Mar 2020, 6:32 am
ಧಾರವಾಡ: ವಾಹನವೊಂದನ್ನು ಓವರ್‌ಟೇಕ್‌ ಮಾಡಲು ಹೋಗಿ ಸಾರಿಗೆ ಸಂಸ್ಥೆಯ ಬಸ್‌ ಪಲ್ಟಿಯಾದ ಪರಿಣಾಮ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕುಸುಗಲ್‌ ಬಳಿಯ ಇಂಗಳಹಳ್ಳಿ ಕ್ರಾಸ್‌ ಬಳಿ ಶುಕ್ರವಾರ ನಡೆದಿದೆ.
Vijaya Karnataka Web accident


ಇಳಕಲ್‌ನಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಬಸ್‌ನಲ್ಲಿ 40ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಕೆಲ ಗಾಯಾಳುಗಳು ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಇನ್ನು ಕೆಲ ಪ್ರಯಾಣಿಕರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಸಣ್ಣ-ಪುಟ್ಟ ಗಾಯಗಳಾದ ಪ್ರಯಾಣಿಕರು ಆಸ್ಪತ್ರೆಯತ್ತ ಬಂದಿಲ್ಲವೆಂದು ಪ್ರಯಾಣಿಕರು ತಿಳಿಸಿದ್ದಾರೆ.

ಘಟನೆ ನಡೆದಿದ್ದು ಹೇಗೆ?
ಓವರ್‌ಟೇಕ್‌ ಮಾಡಲು ಹೋಗಿದ್ದ ಸಂದರ್ಭದಲ್ಲಿಎದುರಿಗೆ ಕುದುರೆ ಗಾಡಿ ಬಂದಿದೆ. ಈ ವೇಳೆ ಇದಕ್ಕೆ ಡಿಕ್ಕಿ ಪಡಿಸುತ್ತೇನೆಂಬ ಭರದಲ್ಲಿ ಬಸ್‌ ಚಾಲಕ ವಾಹನವನ್ನು ಏಕಾಏಕಿ ತಿರುಗಿಸಿದ್ದಾರೆ. ಇದರ ಪರಿಣಾಮದಿಂದ ಎರಡು ಅಡಿ ಆಳದ ತಗ್ಗಿಗೆ ಬಸ್‌ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಶಂಕ್ರು ಸುಣಗಾರ, ಲೀಲಾವತಿ ಎಸ್‌.ಇಟಗಿ, ಜೆ.ಎಸ್‌. ಅಂಕಲೆಮ್ಮ ಕಾಟಾನಾಯ್ಕ, ಭಾಗ್ಯಶ್ರೀ ವಡ್ಡರ ಸೇರಿದಂತೆ ಅನೇಕರಿಗೆ ಗಾಯಗಳಾಗಿವೆ. ಸ್ಥಳಕ್ಕೆ ಹುಬ್ಬಳ್ಳಿ ಠಾಣೆ ಸಿಪಿಐ ಜಾಕ್ಸನ್‌ ಡಿಸೋಜಾ, ವಿಭಾಗೀಯ ಸಾರಿಗೆ ಅಧಿಕಾರಿ ಅಶೋಕ ಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ