ಆ್ಯಪ್ನಗರ

ಶಿಕಾರಿಪುರಕ್ಕೆ 2 ಸಾವಿರ ಕೋಟಿ, ಬಿಜೆಪಿ ಏನನ್ನುತ್ತದೆ?

ಹುಬ್ಬಳ್ಳಿ : ಯಡಿಯೂರಪ್ಪ ಸಿಎಂ ಆಗಿ ಕೇವಲ 22 ದಿನಗಳಲ್ಲಿ ಶಿಕಾರಿಪುರಕ್ಕೆ 2 ಸಾವಿರ ಕೋಟಿ ರೂ. ಮಂಜೂರು ಮಾಡಿಸಿಕೊಂಡಿದ್ದಾರೆ. ಬಿಜೆಪಿ ಈಗ ಶಿಕಾರಿಪುರ ಬಜೆಟ್‌ ಎನ್ನುತ್ತದೆಯೇ? ಎಂದು ಮಾಜಿ ಸಚಿವ ಎಚ್‌.ಡಿ. ರೇವಣ್ಣ ಪ್ರಶ್ನಿಸಿದರು.

Vijaya Karnataka 22 Aug 2019, 5:00 am
ಹುಬ್ಬಳ್ಳಿ : ಯಡಿಯೂರಪ್ಪ ಸಿಎಂ ಆಗಿ ಕೇವಲ 22 ದಿನಗಳಲ್ಲಿ ಶಿಕಾರಿಪುರಕ್ಕೆ 2 ಸಾವಿರ ಕೋಟಿ ರೂ. ಮಂಜೂರು ಮಾಡಿಸಿಕೊಂಡಿದ್ದಾರೆ. ಬಿಜೆಪಿ ಈಗ ಶಿಕಾರಿಪುರ ಬಜೆಟ್‌ ಎನ್ನುತ್ತದೆಯೇ? ಎಂದು ಮಾಜಿ ಸಚಿವ ಎಚ್‌.ಡಿ. ರೇವಣ್ಣ ಪ್ರಶ್ನಿಸಿದರು.
Vijaya Karnataka Web 2000 crores to shikaripur what does the bjp look like
ಶಿಕಾರಿಪುರಕ್ಕೆ 2 ಸಾವಿರ ಕೋಟಿ, ಬಿಜೆಪಿ ಏನನ್ನುತ್ತದೆ?


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಈ ಹಿಂದೆ ಮೈತ್ರಿ ಸರಕಾರದ ಅವಧಿಯಲ್ಲಿ ಹಾಸನ, ಮಂಡ್ಯ, ಮೈಸೂರು ಬಜೆಟ್‌ ಎಂದು ಬಿಜೆಪಿ ಆರೋಪಿಸಿದ್ದರು. ಆದರೀಗ ಯಡಿಯೂರಪ್ಪ ರೈಲ್ವೆ ಯೋಜನೆಯೊಂದಕ್ಕೆ 954 ಕೋಟಿ ರೂ., ಏತ ನೀರಾವರಿ ಯೋಜನೆಗೆ 450 ಕೋಟಿ ರೂ. ಸೇರಿ ಇತರ ಯೋಜನೆಗಳಿಗೆ ಒಟ್ಟು 2 ಸಾವಿರ ಕೋಟಿ ಮಂಜೂರು ಮಾಡಿಕೊಂಡಿದ್ದಾರೆ. ಈಗ ಬಿಜೆಪಿ ಏನು ಹೇಳುತ್ತದೆ? ಪ್ರಮುಖವಾಗಿ ನೆರೆಯಿಂದ ತತ್ತರಿಸಿರುವ ಉ-ಕ. ಭಾಗಕ್ಕೆ ಬಿಜೆಪಿ ಸರಕಾರ ಎಷ್ಟು ಅನುದಾನ ಬಿಡುಗಡೆ ಮಾಡಿದೆ?'' ಎಂದರು.

''ಈ ಹಿಂದಿನ ಸರಕಾರದ ಅವಧಿಯಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ದೂರಿದ್ದ ಜಗದೀಶ ಶೆಟ್ಟರ್‌ ಈಗ ಯಾವ ಪ್ರತಿಕ್ರಿಯೆ ನೀಡುತ್ತಾರೆ? ನಮ್ಮ ಅವಧಿಯಲ್ಲಿ ಉತ್ತರ ಕರ್ನಾಟಕಕ್ಕೆ ಹಾಗೂ ನಮ್ಮ ಕ್ಷೇತ್ರಗಳಿಗೆ ಬಿಡುಗಡೆಯಾದ ಅನುದಾನದ ಕುರಿತು ಚರ್ಚೆಗೆ ಸಿದ್ಧ'' ಎಂದು ಸವಾಲು ಹಾಕಿದರು.

''ಫೋನ್‌ ಕದ್ದಾಲಿಕೆ ತನಿಖೆ ಸಿಐಡಿಗೆ ವಹಿಸಿರುವ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದೇ ಇಲ್ಲ. ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ. ಹಿಂದೆ ಯಡಿಯೂರಪ್ಪ ಅವರ ಆಡಿಯೋ ಪ್ರಕರಣವನ್ನ ಮುಂದೆ ಕೊಂಡೊಯ್ಯಬಹುದಿತ್ತು. ಆದರೆ, ಬಸವರಾಜ ಬೊಮ್ಮಾಯಿ ಸೇರಿ ಹಲವರು ಸ್ಪೀಕರ್‌ ಎದುರು ಕೇಳಿಕೊಂಡಿದ್ದರಿಂದ ನಾವು ಮುಂದೆ ಹೋಗಲಿಲ್ಲ'' ಎಂದು ತಿಳಿಸಿದರು.

ಮಾಜಿ ಶಾಸಕ ಎನ್‌.ಎಚ್‌.ಕೋನರಡ್ಡಿ, ಪಾಲಿಕೆ ಮಾಜಿ ಸದಸ್ಯ ರಾಜಣ್ಣ ಕೊರವಿ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ