ಆ್ಯಪ್ನಗರ

ತವರಿಗೆ ಬಂದ 320 ಜನರು

ಹುಬ್ಬಳ್ಳಿ: ದೇಶದಲ್ಲಿ ಲಾಕ್‌ಡೌನ್‌ ಘೋಷಣೆ ಆದಾಗಿನಿಂದ ದೆಹಲಿಯಲ್ಲಿಸಿಲುಕಿದ್ದ ರಾಜ್ಯದ 320 ಕಾರ್ಮಿಕರು, ವಿದ್ಯಾರ್ಥಿಗಳು ಶ್ರಮಿಕ್‌ ಎಕ್ಸಪ್ರೆಸ್‌ ರೈಲಿನ ಮೂಲಕ ಶನಿವಾರ ಹುಬ್ಬಳಿಗೆ ವಾಪಸ್ಸಾದರು.

Vijaya Karnataka 17 May 2020, 5:00 am
ಹುಬ್ಬಳ್ಳಿ: ದೇಶದಲ್ಲಿ ಲಾಕ್‌ಡೌನ್‌ ಘೋಷಣೆ ಆದಾಗಿನಿಂದ ದೆಹಲಿಯಲ್ಲಿಸಿಲುಕಿದ್ದ ರಾಜ್ಯದ 320 ಕಾರ್ಮಿಕರು, ವಿದ್ಯಾರ್ಥಿಗಳು ಶ್ರಮಿಕ್‌ ಎಕ್ಸಪ್ರೆಸ್‌ ರೈಲಿನ ಮೂಲಕ ಶನಿವಾರ ಹುಬ್ಬಳಿಗೆ ವಾಪಸ್ಸಾದರು.
Vijaya Karnataka Web 16 VIJU 6_21
ಹುಬ್ಬಳ್ಳಿಯ ರೈಲ್ವೆ ನಿಲ್ದಾಣಕ್ಕೆ ದಿಲ್ಲಿಯಿಂದ ಶ್ರಮಿಕ್‌ ಎಕ್ಸಪ್ರೆಸ್‌ ರೈಲಿನ ಮೂಲಕ ಶನಿವಾರ ಆಗಮಿಸಿದ ಜನರು.


ಬೆಳಗ್ಗೆ 11.30ಕ್ಕೆ ಹುಬ್ಬಳ್ಳಿಯ ನೈಋುತ್ಯ ರೈಲ್ವೆ ಕೇಂದ್ರಿಯ ನಿಲ್ದಾಣಕ್ಕೆ ರೈಲು ಆಗಮಿಸಿತು. ಎರಡು ತಿಂಗಳಿಂದ ತೊಂದರೆಗೆ ಸಿಲುಕಿದ್ದ ಜನರು ಕರ್ನಾಟಕ ರಾಜ್ಯಕ್ಕೆ ಆಗಮಿಸುತ್ತಿದ್ದಂತೆ ನಿಟ್ಟುಸಿರು ಬಿಟ್ಟರು.

ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಸಾಮಾಜಿಕ ಅಂತರದೊಂದಿಗೆ ಸಾರಿಗೆ ಸಂಸ್ಥೆ ಬಸ್‌ ಮೂಲಕ ಆಯಾ ಜಿಲ್ಲೆಗಳಿಗೆ ಹೋಗಲು ಅನುಕೂಲ ಕಲ್ಪಿಸಲಾಯಿತು. ಪ್ರತಿಯೊಬ್ಬರಿಗೂ ಥರ್ಮಲ್‌ ಸ್ಕ್ರೀನಿಂಗ್‌ ಮೂಲಕ ಆರೋಗ್ಯ ಪರೀಕ್ಷಿಸಲಾಯಿತು. ಎಲ್ಲರ ಕೈಗಳಿಗೂ ಕ್ವಾರಂಟೈನ್‌ ಮುದ್ರೆ ಹಾಕಲಾಯಿತು. ಬಳಿಕ ಜಿಲ್ಲಾಡಳಿತದಿಂದ ಪೂರೈಸಿದ ಮಧ್ಯಾಹ್ನದ ಊಟ, ನೀರನ್ನು ಅಲ್ಲಿನ ಸಿಬ್ಬಂದಿ ವಿತರಣೆ ಮಾಡಿದರು.

ಕೃಷಿ ವಿವಿಗೆ ದಾಖಲು:
ರೈಲಿನಲ್ಲಿಆಗಮಿಸಿದ ಧಾರವಾಡ ಜಿಲ್ಲೆಯ 41 ಜನರನ್ನು ಸಾಮಾಜಿಕ ಅಂತರ ಕಾಯ್ದುಕೊಂಡು ಎರಡು ಸಾರಿಗೆ ಸಂಸ್ಥೆಯ ಬಸ್ಸುಗಳ ಮೂಲಕ ಕೃಷಿ ವಿವಿಗೆ ಕರೆ ತಂದು ಕ್ವಾರಂಟೈನ್‌ ಮಾಡಲಾಯಿತು. ಕೆಲವರು ಸೆಲ್‌್ಫ ಕ್ವಾರಂಟೈನ್‌ ಆಗುವುದಾಗಿ ತಿಳಿಸಿ ತಮ್ಮ ಖಾಸಗಿ ವಾಹನಗಳ ಮೂಲಕ ಮನೆಗಳಿಗೆ ತೆರಳಿದ್ದು, ಅವರ ಮೇಲೆ ಆಯಾ ಜಿಲ್ಲಾಡಳಿತ ನಿಗಾ ವಹಿಸಲಿದೆ.

ಧಾರವಾಡ ಮೂಲದ ಗಜಾನನ ಎಂಬುವವರು ಮಾತನಾಡಿ, ಲಾಕ್‌ಡೌನ್‌ನಿಂದಾಗಿ ದಿಲ್ಲಿಯಲ್ಲಿಸಿಲುಕಿದ್ದ ನಾವು ವಾಪಸ್‌ ನಮ್ಮೂರಿಗೆ ಬಂದಿರುವುದು ಖುಷಿ ತಂದಿದೆ. 5-6 ವರ್ಷದಿಂದ ದಿಲ್ಲಿಯಲ್ಲಿನೆಲೆಸಿ ಖಾಸಗಿ ಕಂಪನಿಯಲ್ಲಿಕೆಲಸ ಮಾಡುತ್ತಿದ್ದೇವೆ. ಲಾಕ್‌ಡೌನ್‌ನಿಂದ ಅಲ್ಲಿಯೇ ಸಿಲುಕುವಂತಾಗಿ ಸಾಕಷ್ಟು ತೊಂದರೆ ಅನುಭವಿಸಿದ್ದೇವೆ. ಪ್ರತಿದಿನ ಮನೆಗೆ ಕರೆ ಮಾಡಿ ಪಾಲಕರ ಜೊತೆ ಮಾತನಾಡುತ್ತಿದ್ದೆವು. ಈಗ ವಾಪಸ್ಸಾದರೂ 14 ದಿನ ಕ್ವಾರಂಟೈನ್‌ ಮುಗಿದ ನಂತರ ಮನೆಗೆ ಹೋಗುತ್ತೇವೆ.

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯಲು ನಾನು ದಿಲ್ಲಿಗೆ ತೆರಳಿದ್ದೆ. ಆದರೆ, ಲಾಕ್‌ಡೌನ್‌ನಿಂದ ಅಲ್ಲಿಯೇ ಸಿಲುಕುವಂತಾಯಿತು. ರೈಲ್ವೆ ಮೂಲಕ ತೆರಳಲು ಅವಕಾಶ ನೀಡಿದ್ದರಿಂದ ವಾಪಸ್‌ ಊರಿಗೆ ಬರಲು ಸಾಧ್ಯವಾಗಿದೆ ಎಂದು ಸಮ್ಮೇದ ಪತ್ರಾವಳಿ ಹೇಳಿದರು. ಬೇರೆ ರಾಜ್ಯಗಳಲ್ಲಿಸಿಲುಕಿರುವವರನ್ನು ಕರೆತರಲು ಶ್ರಮಿಸಿದ ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ