ಆ್ಯಪ್ನಗರ

ಆತ್ಮಹತ್ಯೆ ಸ್ಥಿತಿಗೆ ಬಂದ ಸಮ್ಮಿಶ್ರ ಸರಕಾರ: ಜೋಶಿ

ಹುಬ್ಬಳ್ಳಿ : ಸಮ್ಮಿಶ್ರ ಸರಕಾರದಲ್ಲಿ ಒಳ ಹೊಡೆತ ಹೆಚ್ಚಾಗಿದ್ದರಿಂದ ಒಬ್ಬರಿಗೊಬ್ಬರು ಕಿತ್ತಾಡಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಬಂದೊದಗಿದೆ ಎಂದು ಸಂಸದ ಪ್ರಹ್ಲಾದ್‌ ಜೋಶಿ ಹೇಳಿದರು.

Vijaya Karnataka 11 May 2019, 5:00 am
ಹುಬ್ಬಳ್ಳಿ : ಸಮ್ಮಿಶ್ರ ಸರಕಾರದಲ್ಲಿ ಒಳ ಹೊಡೆತ ಹೆಚ್ಚಾಗಿದ್ದರಿಂದ ಒಬ್ಬರಿಗೊಬ್ಬರು ಕಿತ್ತಾಡಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಬಂದೊದಗಿದೆ ಎಂದು ಸಂಸದ ಪ್ರಹ್ಲಾದ್‌ ಜೋಶಿ ಹೇಳಿದರು.
Vijaya Karnataka Web a coalition government committed to suicides joshi
ಆತ್ಮಹತ್ಯೆ ಸ್ಥಿತಿಗೆ ಬಂದ ಸಮ್ಮಿಶ್ರ ಸರಕಾರ: ಜೋಶಿ


ಕುಂದಗೋಳ ತಾಲೂಕಿನ ಬುಡರಸಿಂಗಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎಸ್‌.ಐ. ಚಿಕ್ಕನಗೌಡ್ರ ಪರ ಪ್ರಚಾರ ಸಂದರ್ಭದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕುಮಾರಸ್ವಾಮಿ ಮತ್ತು ದೇವೇಗೌಡರ ಕುಟುಂಬ ಯಾವುದೇ ಸ್ಥಾನಮಾನದಲ್ಲಿರುವುದು ಇಷ್ಟವಿಲ್ಲ. ಹೀಗಾಗಿ ಸಿದ್ದರಾಮಯ್ಯನವರೇ ಸಮ್ಮಿಶ್ರ ಸರಕಾರ ಬೀಳಿಸಲು ಕುತಂತ್ರ ನಡೆಸಿದ್ದಾರೆ ಎಂದು ದೂರಿದರು.

ಮೈತ್ರಿ ಸರಕಾರ ಪತನಗೊಳಿಸಲು ಸಿದ್ದರಾಮಯ್ಯನವರೇ ಕುತಂತ್ರ ಮಾಡಿ ಬಿಜೆಪಿ ಮೇಲೆ ಆಪಾದನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಸಮ್ಮಿಶ್ರ ಸರಕಾರದ ವಿಲನ್‌ ಎಂಬುವುದನ್ನು ಅರ್ಥ ಮಾಡಿಕೊಳ್ಳಬೇಕು. ಅವರ ಆಂತರಿಕವಾಗಿ ಹೊಡೆದಾಡಿಕೊಂಡು ಬಿಜೆಪಿಯತ್ತ ಬರುತ್ತಾರೆ. ಬದಲಾಗಿ ಬಿಜೆಪಿ ಆಪರೇಷನ್‌ ಕಮಲ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ