ಹುಬ್ಬಳ್ಳಿ: ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಕುರಿತು ಕರ್ನಾಟಕ ರಾಜ್ಯ ಶರಣ ಹರಳಯ್ಯ ಹಾಗೂ ಸಂತ ರವಿದಾಸ ಮಹಾಸಭಾದ ವತಿಯಿಂದ ನಗರದಲ್ಲಿಶನಿವಾರ ಸಭೆ ನಡೆಸಿ ಎ.ಜೆ. ಸದಾಶಿವ ಆಯೋಗ ಜಾರಿ ಹೋರಾಟ ಸಮನ್ವಯ ಸಮಿತಿಗೆ ಸಂಪೂರ್ಣ ಬೆಂಬಲ ಸೂಚಿಸಲಾಯಿತು.
ಸರಕಾರ ಆದಷ್ಟು ಬೇಗ ಸದಾಶಿವ ಆಯೋಗದ ವರದಿ ಕೇಂದ್ರ ಸರಕಾರಕ್ಕೆ ಕಳುಹಿಸಿಕೊಡಬೇಕೆಂದು ಹಾಗೂ ಕರ್ನಾಟಕ ರಾಜ್ಯ ಸರಕಾರವು ಸದಾಶಿವ ಆಯೋಗ ವರದಿಯನ್ನು ಮುಂದಿನ ಅಧಿವೇಶನದಲ್ಲಿಚರ್ಚಿಸಿ ಜಾರಿಗೆ ತರಬೇಕೆಂದು ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಒಮ್ಮತದಿಂದ ನಿರ್ಣಯಿಸಲಾಯಿತು.
ಈ ಸಂದರ್ಭದಲ್ಲಿರಾಜ್ಯಾಧ್ಯಕ್ಷ ಶಿವಾನಂದ ಮಬ್ರುಮಕರ, ಹಿರಿಯ ಉಪಾಧ್ಯಕ್ಷ ಫಕ್ಕೀರಪ್ಪ ಬೆಟಗೇರಿ, ಸಲಹಾ ಪ್ರಧಾನ ಕಾರ್ಯದರ್ಶಿ ಬಸವರಾಜ ತೇರದಾಳ, ಕಾರ್ಯಕಾರಿ ಮಂಡಳಿ ಸದಸ್ಯ ಪೃಥ್ವಿರಾಜ ಬೆಟಗೇರಿ, ಮಾರುತಿ ಹಂಜಗಿ ಮುಂತಾದವರು ಉಪಸ್ಥಿತರಿದ್ದರು.
ಸರಕಾರ ಆದಷ್ಟು ಬೇಗ ಸದಾಶಿವ ಆಯೋಗದ ವರದಿ ಕೇಂದ್ರ ಸರಕಾರಕ್ಕೆ ಕಳುಹಿಸಿಕೊಡಬೇಕೆಂದು ಹಾಗೂ ಕರ್ನಾಟಕ ರಾಜ್ಯ ಸರಕಾರವು ಸದಾಶಿವ ಆಯೋಗ ವರದಿಯನ್ನು ಮುಂದಿನ ಅಧಿವೇಶನದಲ್ಲಿಚರ್ಚಿಸಿ ಜಾರಿಗೆ ತರಬೇಕೆಂದು ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಒಮ್ಮತದಿಂದ ನಿರ್ಣಯಿಸಲಾಯಿತು.
ಈ ಸಂದರ್ಭದಲ್ಲಿರಾಜ್ಯಾಧ್ಯಕ್ಷ ಶಿವಾನಂದ ಮಬ್ರುಮಕರ, ಹಿರಿಯ ಉಪಾಧ್ಯಕ್ಷ ಫಕ್ಕೀರಪ್ಪ ಬೆಟಗೇರಿ, ಸಲಹಾ ಪ್ರಧಾನ ಕಾರ್ಯದರ್ಶಿ ಬಸವರಾಜ ತೇರದಾಳ, ಕಾರ್ಯಕಾರಿ ಮಂಡಳಿ ಸದಸ್ಯ ಪೃಥ್ವಿರಾಜ ಬೆಟಗೇರಿ, ಮಾರುತಿ ಹಂಜಗಿ ಮುಂತಾದವರು ಉಪಸ್ಥಿತರಿದ್ದರು.