ಆ್ಯಪ್ನಗರ

ಆನ್‌ಲೈನ್‌ನಲ್ಲೇ ವಿದ್ಯಾರ್ಥಿಗಳಿಗೆ ಪಾಠ

ಹುಬ್ಬಳ್ಳಿ: ಕೊರೊನಾ ವೈರಸ್‌ ಹರಡುವ ಭೀತಿಯಿಂದ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಕಳೆದ ಒಂದು ವಾರದಿಂದ ಚೇತನಾ ಬ್ಯುಸಿನೆಸ್‌ ಸ್ಕೂಲ್‌ ಎಂಬಿಎ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಉಪನ್ಯಾಸ ಕೇಳುವ ಸೌಲಭ್ಯವನ್ನು ಕಲ್ಪಿಸಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕ ವಿಶ್ವನಾಥ ಕೊರವಿ ಹೇಳಿದರು.

Vijaya Karnataka 22 Mar 2020, 5:00 am
ಹುಬ್ಬಳ್ಳಿ: ಕೊರೊನಾ ವೈರಸ್‌ ಹರಡುವ ಭೀತಿಯಿಂದ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಕಳೆದ ಒಂದು ವಾರದಿಂದ ಚೇತನಾ ಬ್ಯುಸಿನೆಸ್‌ ಸ್ಕೂಲ್‌ ಎಂಬಿಎ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಉಪನ್ಯಾಸ ಕೇಳುವ ಸೌಲಭ್ಯವನ್ನು ಕಲ್ಪಿಸಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕ ವಿಶ್ವನಾಥ ಕೊರವಿ ಹೇಳಿದರು.
Vijaya Karnataka Web a lesson for students online
ಆನ್‌ಲೈನ್‌ನಲ್ಲೇ ವಿದ್ಯಾರ್ಥಿಗಳಿಗೆ ಪಾಠ


ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಜಗತ್ತಿನಾದ್ಯಂತ ಕೊರೊನಾ ಭೀತಿ ಉಂಟಾಗಿದೆ. ವಿದ್ಯಾರ್ಥಿಗಳು ನಿತ್ಯ ಮನೆಯಿಂದ ಕಾಲೇಜಿಗೆ ಬರುವುದರಿಂದ ಸೋಂಕು ತಗಲುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಆದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಝೂಮ್‌ ಆ್ಯಪ್‌ ಮೂಲಕ ಮನೆಯಲ್ಲಿಯೇ ಆನ್‌ಲೈನ್‌ ಪಾಠ ಕೇಳುವ ಅವಕಾಶ ನೀಡಲಾಗಿದೆ ಎಂದರು.

ಝೂಮ್‌ ಆ್ಯಪ್‌ ಮೂಲಕ ಪ್ರತಿ ವಿದ್ಯಾರ್ಥಿಗೆ ಲಾಗಿನ್‌ ಎಕ್ಸೆಸ್‌ ನೀಡಲಾಗಿದೆ. ಇದರಿಂದ ವಿದ್ಯಾರ್ಥಿಗಳು ಕಾಲೇಜಿನ ತರಗತಿಯಂತೆ ಆನ್‌ಲೈನ್‌ ಪಾಠಕ್ಕೆ ಹಾಜರಾಗುತ್ತಿದ್ದಾರೆ. ಇದರಿಂದ ಪಾಠವೂ ನಡೆದಿದೆ. ವಿದ್ಯಾರ್ಥಿಗಳ ಆರೋಗ್ಯವನ್ನೂ ಕಾಪಾಡಿದಂತಾಗಿದೆ ಎಂದರು.

ಆನ್‌ಲೈನ್‌ ಪಾಠಕ್ಕೆ ಹಾಜರಾಗುವ ಮತ್ತು ಗೈರುಹಾಜರಾಗುವ ವಿದ್ಯಾರ್ಥಿಗಳ ಭಾವಚಿತ್ರವು ಆನ್‌ಲೈನ್‌ನಲ್ಲಿ ಉಪನ್ಯಾಸಕರಿಗೂ ಕಂಡುಬರುತ್ತದೆ. ಅಲ್ಲದೇ, ನೇರವಾಗಿ ಉಪನ್ಯಾಸಕರ ಜತೆ ಸಂವಾದ ನಡೆಸಬಹುದಾಗಿದೆ. ವಿದ್ಯಾರ್ಥಿಗಳು ಪಾಠದ ಕುರಿತ ಸಂದೇಹವನ್ನು ಬಗೆಹರಿಸಿಕೊಳ್ಳಬಹುದು. ವಿದ್ಯಾರ್ಥಿಗಳಿಗೆ ತಮ್ಮ ತಮ್ಮಲ್ಲಿಸಂಭಾಷಣೆ ನಡೆಸಲು ಚಾಟ್‌ ವ್ಯವಸ್ಥೆ ಕೂಡ ಇದರಲ್ಲಿದೆ. ಹೀಗಾಗಿ ಇದು ಉಪನ್ಯಾಸಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲ ಕಲ್ಪಿಸಲಿದೆ ಎಂದರು.

ಶುಕ್ರವಾರ, ಶನಿವಾರ 75ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಇದರಲ್ಲಿಪಾಲ್ಗೊಂಡಿದ್ದಾರೆ. ಇನ್ನು, ಈ ಆ್ಯಪ್‌ನಲ್ಲಿಏಕಕಾಲಕ್ಕೆ 500 ವಿದ್ಯಾರ್ಥಿಗಳು ಲಾಗಿನ್‌ ಆಗಬಹುದು. ಆದರೆ ನಮ್ಮಲ್ಲಿನೂರು ವಿದ್ಯಾರ್ಥಿಗಳಿಗೆ ಪ್ರಸ್ತುತ ಲಾಗಿನ್‌ ನೀಡಲಾಗಿದೆ. ನಮ್ಮಲ್ಲಿಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಮೂರು ಅವಧಿಯ ಆನ್‌ಲೈನ್‌ ತರಗತಿ ನಡೆಯುತ್ತಿವೆ. ವಿದ್ಯಾರ್ಥಿಗಳು ಆನ್‌ಲೈನ್‌ ಪಾಠದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿಕಾಲೇಜಿನ ಅಕ್ಯಾಡೆಮಿಕ್‌ ಡೈರೆಕ್ಟರ್‌ ರಮಾಕಾಂತ ಕುಲಕರ್ಣಿ ಸೇರಿದಂತೆ ಅನೇಕರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ