ಆ್ಯಪ್ನಗರ

ರಸ್ತೆ ಅವಾಂತರ ಅನಾವರಣಗೊಳಿಸಿದ ಸಂವಾದ

ಹುಬ್ಬಳ್ಳಿ : ಹು-ಧಾ ಅವಳಿನಗರದ ರಸ್ತೆಗಳ ತಗ್ಗು ದಿನ್ನೆಗಳ 'ಗುಂಡಿ ಗಂಡಾಂತರ' ಕುರಿತಂತೆ 'ವಿಜಯ ಕರ್ನಾಟಕ' ಕಚೇರಿಯಲ್ಲಿ ಶನಿವಾರ ಸಂವಾದ ಕಾರ್ಯಕ್ರಮ ನಡೆಯಿತು. ಹಾಳಾದ ರಸ್ತೆಗಳ ದುಸ್ಥಿತಿ ಕುರಿತು ಬೆಳಕು ಚೆಲ್ಲುವ ನಿಟ್ಟಿನಲ್ಲಿ ವಿಜಯ ಕರ್ನಾಟಕ ತಯಾರಿಸಿದ ವಿಡಿಯೋ ಹಾಗೂ ಚಿತ್ರಗಳ ಪ್ರದರ್ಶನ ಮಾಡಲಾಯಿತು.

Vijaya Karnataka 1 Sep 2019, 5:00 am
ಹುಬ್ಬಳ್ಳಿ : ಹು-ಧಾ ಅವಳಿನಗರದ ರಸ್ತೆಗಳ ತಗ್ಗು ದಿನ್ನೆಗಳ 'ಗುಂಡಿ ಗಂಡಾಂತರ' ಕುರಿತಂತೆ 'ವಿಜಯ ಕರ್ನಾಟಕ' ಕಚೇರಿಯಲ್ಲಿ ಶನಿವಾರ ಸಂವಾದ ಕಾರ್ಯಕ್ರಮ ನಡೆಯಿತು. ಹಾಳಾದ ರಸ್ತೆಗಳ ದುಸ್ಥಿತಿ ಕುರಿತು ಬೆಳಕು ಚೆಲ್ಲುವ ನಿಟ್ಟಿನಲ್ಲಿ ವಿಜಯ ಕರ್ನಾಟಕ ತಯಾರಿಸಿದ ವಿಡಿಯೋ ಹಾಗೂ ಚಿತ್ರಗಳ ಪ್ರದರ್ಶನ ಮಾಡಲಾಯಿತು.
Vijaya Karnataka Web a roadside unveiling dialog
ರಸ್ತೆ ಅವಾಂತರ ಅನಾವರಣಗೊಳಿಸಿದ ಸಂವಾದ


ಸಂವಾದದಲ್ಲಿ ಖ್ಯಾತ ಹೃದ್ರೋಗ ತಜ್ಞ ಡಾ. ಜಿ.ಬಿ. ಸತ್ತೂರ, ಬಿಜೆಪಿ ಮಹಾನಗರ ಜಿಲ್ಲಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಕಾಂಗ್ರೆಸ್‌ ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್‌ ಹಳ್ಳೂರ, ಸಾಮಾಜಿಕ ಹೋರಾಟಗಾರ ಸಂತೋಷ ನರಗುಂದ, ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನವೀನ ಮುನಿಯಪ್ಪನವರ, ಸಾಮಾಜಿಕ ಹೋರಾಟಗಾರ ಬಸವರಾಜ ಕೊರವರ, ಕಾಂಗ್ರೆಸ್‌ ಯುವ ಮುಖಂಡ ರಜತ್‌ ಉಳ್ಳಾಗಡ್ಡಿಮಠ, ಹು-ಧಾ ಮಹಾನಗರ ಪಾಲಿಕೆ ಅಧಿಧೀಕ್ಷಕ ಅಭಿಯಂತರ ಮಹೇಶ ಪಾಲ್ಗೊಂಡುಅವಳಿ ನಗರದಲ್ಲಿ ರಸ್ತೆಗಳು ಹಾಳಾಗಲು ಕಾರಣವೇನು? ಅವುಗಳನ್ನು ದುರಸ್ತಿ ಮತ್ತು ಅಭಿವೃದ್ಧಿ ಯಾವ ರೀತಿಯಲ್ಲಿ ಮಾಡಬೇಕು? ಈ ಸಮಸ್ಯೆಗೆ ಶಾಶ್ವತ ಪರಿಹಾರ ಇಲ್ಲವೇ? ಎಂಬುದರ ಕುರಿತು ಗಂಭೀರ ಚರ್ಚಿಸಿ, ತಮ್ಮ ಅಭಿಪ್ರಾಯವನ್ನು ಮಂಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ