ಆ್ಯಪ್ನಗರ

ಮೇಲ್ವಿಚಾರಕರ ಕೈಗೆ ಸಿಕ್ಕಿಬಿದ್ದ ವಿದ್ಯಾರ್ಥಿನಿ

ಹುಬ್ಭಳ್ಳಿ : ಕೆಪಿಎಸ್‌ಸಿ ನಡೆಸುವ ಎಸ್‌ಡಿಎ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ನಕಲು ಮಾಡಲು ಹೋಗಿ ಸಿಕ್ಕಿಬಿದ್ದು ಪೊಲೀಸ್‌ ಅತಿಥಿಯಾದ ಘಟನೆ ಹುಬ್ಬಳ್ಳಿಯಲ್ಲಿ ಭಾನುವಾರ ನಡೆದಿದೆ.

Vijaya Karnataka 17 Jun 2019, 5:00 am
ಹುಬ್ಭಳ್ಳಿ : ಕೆಪಿಎಸ್‌ಸಿ ನಡೆಸುವ ಎಸ್‌ಡಿಎ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ನಕಲು ಮಾಡಲು ಹೋಗಿ ಸಿಕ್ಕಿಬಿದ್ದು ಪೊಲೀಸ್‌ ಅತಿಥಿಯಾದ ಘಟನೆ ಹುಬ್ಬಳ್ಳಿಯಲ್ಲಿ ಭಾನುವಾರ ನಡೆದಿದೆ.
Vijaya Karnataka Web DRW-16 NADAF 1
ವಿದ್ಯಾರ್ಥಿನಿ ಬಳಕೆ ಮಾಡಿದ ಎಲೆಕ್ಟ್ರಾನಿಕ್‌ ಸಾಧನ


ಬಾಗಲಕೋಟ ಜಿಲ್ಲೆ ಮಹಾಲಿಂಗಪುರ ಗ್ರಾಮದ ನಿಖಿತಾ ಕಲಾಲ್‌ ಎಂಬುವವರೇ ನಕಲು ಮಾಡುತ್ತಿದ್ದಾಗ ಪರೀಕ್ಷೆ ಮೇಲ್ವಿಚಾರಕರ ಕೈಗೆ ಸಿಕ್ಕಿಬಿದ್ದ ಅಭ್ಯರ್ಥಿ.

ನಗರದ ದಾಜಿಬಾನಪೇಟೆಯ ದುರ್ಗಾದೇವಿ ಮಾಧ್ಯಮಿಕ ಶಾಲೆಯಲ್ಲಿ ಎಸ್‌ಡಿಎ ಪರೀಕ್ಷೆ ಬರೆಯುತ್ತಿದ್ದ ನಿಖಿತಾ, ಪರೀಕ್ಷೆ ಕೊಠಡಿಯಲ್ಲಿ ನಿಯಮ ಉಲ್ಲಂಘಿಸಿ ಎಲೆಕ್ಟ್ರಾನಿಕ್‌ ಸಾಧನ ಬಳಸಿ ನಕಲು ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾಳೆ.

ಬೆಳಗ್ಗೆ ನಡೆದ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿಯೂ ನಕಲು ಮಾಡಿದ ವಿದ್ಯಾರ್ಥಿನಿ ಮಧ್ಯಾಹ್ನ 2 ರಿಂದ ಆರಂಭವಾದ ಸಾಮಾನ್ಯ ಕನ್ನಡ ಪರೀಕ್ಷೆಯಲ್ಲಿಯೂ ಮುಂದುವರಿಸಿದ್ದಳು. ಆಗ ನಿಖಿತಾ ಪಕ್ಕದಲ್ಲಿ ಕುಳಿತಿದ್ದ ಮತ್ತೊಬ್ಬ ಪರೀಕ್ಷಾರ್ಥಿ ನಿಖಿತಾ ಕಲಾಲ್‌ ನಕಲು ಮಾಡುತ್ತಿರುವ ಬಗ್ಗೆ ಮೇಲ್ವಿಚಾರಕರ ಗಮನಕ್ಕೆ ತಂದಿದ್ದಾನೆ. ಆಗ ಮಹಿಳಾ ಸಿಬ್ಬಂದಿ ವಿದ್ಯಾರ್ಥಿನಿಯನ್ನು ಪರಿಶೀಲಿಸಿದಾಗ ಎಲೆಕ್ಟ್ರಾನಿಕ್‌ ಸಾಧನ ಇರುವುದು ಬೆಳಕಿಗೆ ಬಂದಿದೆ.

ಏತನ್ಮಧ್ಯೆ ಬಿಇಒ ಎಸ್‌.ಎಂ.ಹುಡೇದನಮನಿ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಬಿಇಒ ಹುಡೇದಮನಿ, ಅಭ್ಯರ್ಥಿಯು ಎಲೆಕ್ಟ್ರಾನಿಕ್‌ ಸಾಧನ ಬಳಸಿ ನಕಲು ಮಾಡುತ್ತಿರುವಾಗ ಸಿಕ್ಕಿಬಿದ್ದಿದ್ದಾಳೆ. ಅವಳಿಂದ ತಪ್ಪೊಪ್ಪಿಗೆ ಪತ್ರ ಬರೆಸಿಕೊಳ್ಳಲಾಗಿದೆ. ಉತ್ತರ ಪತ್ರಿಕೆ ಹಾಗೂ ಎಲೆಕ್ಟ್ರಾನಿಕ್‌ ಸಾಧನವನ್ನ್ನು ಕೆಪಿಎಸ್‌ಸಿ ಪರೀಕ್ಷೆ ಮಂಡಳಿಗೆ ರವಾನಿಸಲಾಗುವುದು. ನಿಯಮ ಉಲ್ಲಂಘಿಸಿದ ಅಭ್ಯರ್ಥಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಪಿಎಸ್‌ಸಿಗೆ ವರದಿ ಸಲ್ಲಿಸಲಾಗುವುದು. ನಿಯಮದ ಪ್ರಕಾರ ಕನಿಷ್ಠ 10 ವರ್ಷ ಕೆಪಿಎಸ್‌ಸಿ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ. ಈ ಬಗ್ಗೆ ಕೆಪಿಎಸ್‌ಸಿ ನಿರ್ಧಾರ ತೆಗೆದುಕೊಳ್ಳುವುದು ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ