ಆ್ಯಪ್ನಗರ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ

ಹುಬ್ಬಳ್ಳಿ : ನಗರದ ಶ್ರೀ ಜಗದ್ಗುರು ಮೂರುಸಾವಿರಮಠ ವಿದ್ಯಾವರ್ಧಕ ಸಂಘದ ಶ್ರೀ ಜಗದ್ಗುರು ಗಂಗಾಧರ ಪದವಿ ಪೂರ್ವ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.

Vijaya Karnataka 31 Aug 2019, 5:00 am
ಹುಬ್ಬಳ್ಳಿ : ನಗರದ ಶ್ರೀ ಜಗದ್ಗುರು ಮೂರುಸಾವಿರಮಠ ವಿದ್ಯಾವರ್ಧಕ ಸಂಘದ ಶ್ರೀ ಜಗದ್ಗುರು ಗಂಗಾಧರ ಪದವಿ ಪೂರ್ವ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.
Vijaya Karnataka Web a tribute to gifted students
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ


ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ಸನ್ಮಾನಿಸಲಾಯಿತು ಮತ್ತು ಕಾಲೇಜಿನಲ್ಲಿ ಶೇ.85ಕಿಂತ ಹೆಚ್ಚು ಅಂಕ ಪಡೆದ 8ಜನ ವಿದ್ಯಾರ್ಥಿಗಳಿಗೆ ಭರಿಸಿರುವ ಎರಡು ವರ್ಷದ ಫೀಯನ್ನು ಚೆಕ್‌ ಮೂಲಕ ನೀಡಿದರು.

ಅಧ್ಯಕ್ಷ ತೆ ವಹಿಸಿದ್ದ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಅರವಿಂದ ಕುಬಸದ ಮಾತನಾಡಿ, ಪ್ರತಿ ವಿಷಯದಲ್ಲಿ 90 ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿ ವಿದ್ಯಾರ್ಥಿಗಳಿಗೆ 1000ರೂ.ಬಹುಮಾನ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬೋಧಿಸಿದ ಉಪನ್ಯಾಸಕರಿಗೆ 5000 ರೂ.ಬಹುಮಾನ ಕೊಡುವುದಾಗಿ ಘೋಷಿಸಿದರು.

ಮುಖ್ಯೋಪಾಧ್ಯಾಯ ವಿ.ವಿ.ತಾಂಬೆ ಮಾತನಾಡಿ, ವಿದ್ಯಾರ್ಥಿಗಳು ಗುರು-ಹಿರಿಯರಿಗೆ ಗೌರವಿಸಬೇಕು ಎಂದರು.

ಪ್ರಾ.ಬಿ.ಎಂ.ಸಾಲಿಮಠ ಪ್ರಾಸ್ತಾವಿಕ ಮಾತನಾಡಿದರು. ಅಶ್ವಿನಿ ಬದಾಮಿ ಪ್ರಮಾಣ ವಚನ ಬೋಧಿಸಿದರು. ಚೈತ್ರಾ ಮತ್ತು ಸರಸ್ವತಿ ನಿರೂಪಿಸಿದರು. ಎ. ಸಿ. ನಿರಂಜನ, ಅಂಜುಮ್‌ ಜಮಖಂಡಿ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ