ಆ್ಯಪ್ನಗರ

ಜೀವನದಲ್ಲಿ ಶಿಸ್ತು ಅಳವಡಿಸಿಕೊಳ್ಳಿ

ಧಾರವಾಡ : ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಅಳವಡಿಸಿಕೊಳ್ಳಬೇಕು ಎಂದು ಡಾ. ಶಂಭು ಹೆಗಡಾಳ ಹೇಳಿದರು. ನಗರದ ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆಯ ವಿಜ್ಞಾನ, ಕಲಾ ಮತ್ತು ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ

Vijaya Karnataka 30 Jan 2019, 5:00 am
ಧಾರವಾಡ : ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಅಳವಡಿಸಿಕೊಳ್ಳಬೇಕು ಎಂದು ಡಾ. ಶಂಭು ಹೆಗಡಾಳ ಹೇಳಿದರು. ನಗರದ ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆಯ ವಿಜ್ಞಾನ, ಕಲಾ ಮತ್ತು ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
Vijaya Karnataka Web DRW-29MAILAR12
ಧಾರವಾಡದ ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆಯ ವಿಜ್ಞಾನ, ಕಲಾ ಮತ್ತು ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ನ್ಯಾಯವಾದಿ ಆರ್‌.ಯು.ಬೆಳ್ಳಕ್ಕಿ ಮಾತನಾಡಿದರು


ವಿದ್ಯಾರ್ಥಿಗಳು ಸಾಮಾನ್ಯರಲ್ಲಿ ಅಸಾಮಾನ್ಯರಾಗಿ ಗುರುತಿಸಿಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಅಂದಾಗ ಜೀವನದಲ್ಲಿ ಏನ್ನನಾದರೂ ಸಾಧನೆ ಮಾಡಬಹುದು ಎಂದರು.

ಅಧ್ಯಕ್ಷ ತೆ ವಹಿಸಿದ್ದ ನ್ಯಾಯವಾದಿ ಆರ್‌.ಯು.ಬೆಳ್ಳಕ್ಕಿ ಮಾತನಾಡಿ, ವಿದ್ಯಾರ್ಥಿಗಳು ತಮಗೆ ಸಿಗುವ ಸಮಯದ ಮಹತ್ವ ಅರಿತು ಪ್ರತಿ ದಿನ, ಪ್ರತಿ ಕ್ಷ ಣವನ್ನು ಸದ್ವಿನಿಯೋಗ ಮಾಡಿಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಉಪನ್ಯಾಸಕಿ ಜಿ.ಬೆಟಗೇರಿ, ಸುಪ್ರೀತಾ ಪರಮಣ್ಣವರ, ದಿನೇಶ ವೈ.ಯಣ್ಣಿ ಇದ್ದರು. ಸಿದ್ದಮ್ಮಾ ಹಾಗೂ ಸಂಗಡಿಗರು ಹಾಡಿದರು. ಡಾ.ಎಸ್‌.ಜಿ ಹಿರೇಮಠ ಸ್ವಾಗತಿಸಿದರು. ಸಿ.ಎಸ್‌.ರಾಯನಗೌಡರ ಪರಿಚಯಿಸಿದರು. ನವೀನ ಮರಿಗೌಡ್ರ ನಿರೂಪಿಸಿದರು. ನೇತ್ರಾವತಿ ಶಹಾಪೂರಮಠ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ