ಆ್ಯಪ್ನಗರ

ಶಾಶ್ವತ ಬದುಕು ಕಲ್ಪಿಸಲು ಕ್ರಮ: ಕರಂದ್ಲಾಜೆ

ಹುಬ್ಬಳ್ಳಿ : ಕೇಂದ್ರ ಹಾಗೂ ರಾಜ್ಯ ಸರಕಾರ ಅತಿವೃಷ್ಟಿ ಕುರಿತು ಸಮಗ್ರ ವರದಿ ಪಡೆದ ನಂತರ ಸಂತ್ರಸ್ತರಿಗೆ ಶಾಶ್ವತ ಬದುಕು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

Vijaya Karnataka 13 Aug 2019, 5:00 am
ಹುಬ್ಬಳ್ಳಿ : ಕೇಂದ್ರ ಹಾಗೂ ರಾಜ್ಯ ಸರಕಾರ ಅತಿವೃಷ್ಟಿ ಕುರಿತು ಸಮಗ್ರ ವರದಿ ಪಡೆದ ನಂತರ ಸಂತ್ರಸ್ತರಿಗೆ ಶಾಶ್ವತ ಬದುಕು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
Vijaya Karnataka Web action to create eternal life karandlaje
ಶಾಶ್ವತ ಬದುಕು ಕಲ್ಪಿಸಲು ಕ್ರಮ: ಕರಂದ್ಲಾಜೆ


ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ''ನೆರೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಹಿಡಿದು ಗ್ರಾಮ ಲೆಕ್ಕಾಧಿಕಾರಿಗಳು ರಸ್ತೆ, ಮನೆ, ಸೇತುವೆ, ಆಸ್ತಿಪಾಸ್ತಿ ಹಾನಿ ಕುರಿತು ಸಮಗ್ರ ವರದಿ ಸಿದ್ಧಪಡಿಸಬೇಕು. ಇದಾದ ನಂತರ ಕೇಂದ್ರ, ರಾಜ್ಯ ಸರಕಾರಗಳು ಸೂಕ್ತ ಪರಿಹಾರ ನೀಡಿ ಸಂತ್ರಸ್ತರಿಗೆ ಶಾಶ್ವತ ಬದುಕು ಕಟ್ಟಿಕೊಡಲಿವೆ'' ಎಂದು ತಿಳಿಸಿದರು.

''ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ನೆರೆ ಉಂಟಾಗಿದೆ. ಈಗಾಗಲೇ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳು ಸಮರೋಪಾದಿಯಲ್ಲಿ ಸಂತ್ರಸ್ತರಿಗೆ ನೆರವು ನೀಡುತ್ತಿದ್ದಾರೆ. ಅಲ್ಲದೆ, ಕಾಳಜಿ ಕೇಂದ್ರಗಳನ್ನು ತೆರೆದು ಅಗತ್ಯ ಕ್ರಮ ಕೈಗೊಳ್ಳಲಾಗಿದೆ'' ಎಂದರು.

''ಕೃಷ್ಣಾ ನದಿಯ ಪ್ರವಾಹದಿಂದ ವಿಜಯಪುರ, ಬೆಳಗಾವಿ, ರಾಯಚೂರು, ಬಾಗಲಕೋಟ ಜಿಲ್ಲೆಗಳ ನದಿ ಪಾತ್ರದ ಗ್ರಾಮಗಳು ಮುಳುಗಡೆಯಾಗಿವೆ. ಇನ್ನು ಚಿಕ್ಕಮಗಳೂರಿನ ಎನ್‌.ಆರ್‌. ಪುರ, ಮೂಡಗೇರಿ ತಾಲೂಕುಗಳು ಅಕ್ಷರಶಃ ಕೊಡಗಿನಂತೆ ಆಗಿವೆ. ರಾಜ್ಯದಲ್ಲಿ ಉಂಟಾದ ಅತಿವೃಷ್ಟಿ ಪರಿಣಾಮದಿಂದ 1.5 ಲಕ್ಷಕ್ಕೂ ಹೆಚ್ಚು ಜನ ಸಂತ್ರಸ್ತರಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಂತ್ರಸ್ತರ ನೆರವಿಗೆ ಅಗತ್ಯ ಕ್ರಮಕೈಗೊಂಡಿವೆ'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ