ಆ್ಯಪ್ನಗರ

ಜ್ಞಾನ ಸಂಪಾದನೆ ಹೆಚ್ಚಿಸಿಕೊಳ್ಳಲು ಸಲಹೆ

ಕಲಘಟಗಿ : ಮಕ್ಕಳು ಶಾಲೆ ದಿನಗಳಲ್ಲಿಯೇ ಕನ್ನಡ ಸಾಹಿತ್ಯ ಸಂಸ್ಕೃತಿಯ ಬಗ್ಗೆ ಜ್ಞಾನಾರ್ಜನೆ ಮಾಡಿ ತಿಳಿದುಕೊಳ್ಳುವುದು ಅವಶ್ಯ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಅಧ್ಯಕ್ಷ ಲಿಂಗರಾಜ ಅಂಗಡಿ ತಿಳಿಸಿದರು.

Vijaya Karnataka 30 Nov 2019, 5:00 am
ಕಲಘಟಗಿ : ಮಕ್ಕಳು ಶಾಲೆ ದಿನಗಳಲ್ಲಿಯೇ ಕನ್ನಡ ಸಾಹಿತ್ಯ ಸಂಸ್ಕೃತಿಯ ಬಗ್ಗೆ ಜ್ಞಾನಾರ್ಜನೆ ಮಾಡಿ ತಿಳಿದುಕೊಳ್ಳುವುದು ಅವಶ್ಯ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಅಧ್ಯಕ್ಷ ಲಿಂಗರಾಜ ಅಂಗಡಿ ತಿಳಿಸಿದರು.
Vijaya Karnataka Web advice to increase knowledge editing
ಜ್ಞಾನ ಸಂಪಾದನೆ ಹೆಚ್ಚಿಸಿಕೊಳ್ಳಲು ಸಲಹೆ


ತಾಲೂಕಿನ ಬೆಲವಂತರ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ನಿಬಂಧ ಕನ್ನಡ ಗೀತೆಗಳ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲೆ ಮುಖ್ಯೋಪಾದ್ಯಾಯರು, ಪ್ರತಿ ಶಾಲೆಗಳಲ್ಲಿಪ್ರಬಂಧ, ನಿಬಂಧ, ಕನ್ನಡ ಗೀತೆಗಳ ಸ್ಪರ್ಧೆ ಆಯೋಜಿಸಿ ಮಕ್ಕಳಲ್ಲಿಕನ್ನಡದ ಬಗ್ಗೆ ಅಭಿಮಾನ ಮೂಡುವಂತೆ ಮಾಡುವುದು ಅವಶ್ಯ ಎಂದರು.

ಪ್ರೊ.ಕೆ.ಎಸ್‌.ಕೌಜಲಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪೂರ, ತಾಲೂಕು ಕಸಾಪ ಅಧ್ಯಕ್ಷೆ ಅನಿತಾ ಹತ್ತಿ, ಶಿವಾನಂದ ಜವಳಿ ಕನ್ನಡ ಸಾಹಿತ್ಯದ ಬಗ್ಗೆ ಮಾತನಾಡಿದರು.

ತಾಲೂಕು ವೃತ್ತಿ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಭುಲಿಂಗಪ್ಪ ರಂಗಾಪೂರ, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಫ್‌.ಎಸ್‌.ಹೀರೆಮಠ, ನೌಕರರ ಸಂಘದ ಅಧ್ಯಕ್ಷ ಆರ್‌.ಎಂ.ಹೋಲ್ತಿಕೋಟಿ ಅವರನ್ನು ಸನ್ಮಾನಿಸಲಾಯಿತು.

ಸ್ಪರ್ಧೆಗಳಲ್ಲಿಭಾಗವಹಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಐ.ವಿ.ಜವಳಿ, ರಂಗನಾ ಥ.ವಾಲ್ಮಿಕಿ, ಸೈದಾಬಿ ಬಂಡಿ, ಶಿಲ್ಪಾ ಗೌರಿ, ಶಂಕರಪ್ಪ ಕರ್ಲಟ್ಟಿ, ರಂಜೀತ ಹಡಪದ, ಸಾವಿತ್ರಿ ಪೂಜಾರ, ದೀಪಾ ಬರ್ಮಪ್ಪನವರ, ಸಂಗೀತಾ, ಕೋಟ್ರಿ ಕೀರ್ತಿ, ಸಂಗೀತಾ, ನೀಲಣ್ಣವರ ಇದ್ದರು.

ಪ್ರಶಾಂತ ಉಕ್ಕುಂದ ಸ್ವಾಗತಿಸಿದರು. ಎಲ್‌.ಎಸ್‌.ಹುಲ್ಲಿಕಟ್ಟಿ ನಿರೂಪಿಸಿದರು. ಅಕ್ಕಪ್ಪ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ