ಆ್ಯಪ್ನಗರ

ಕೃಷಿ ಮಸೂದೆ ರೈತರಿಗೆ ವರದಾನ

ಹುಬ್ಬಳ್ಳಿ: ಕೃಷಿಕರು ಮತ್ತು ಕೃಷಿ ಕ್ಷೇತ್ರದ ಸುಧಾರಣೆಗೆ ಕೇಂದ್ರ ಸರಕಾರ ಎರಡು ನೂತನ ಕೃಷಿ ಮಸೂದೆಗೆ ಅನುಮೋದನೆ ನೀಡಿರುವುದು ಐತಿಹಾಸಿಕ ನಿರ್ಧಾರ ಕೈಗೊಂಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.

Vijaya Karnataka Web 23 Sep 2020, 5:00 am
ಹುಬ್ಬಳ್ಳಿ: ಕೃಷಿಕರು ಮತ್ತು ಕೃಷಿ ಕ್ಷೇತ್ರದ ಸುಧಾರಣೆಗೆ ಕೇಂದ್ರ ಸರಕಾರ ಎರಡು ನೂತನ ಕೃಷಿ ಮಸೂದೆಗೆ ಅನುಮೋದನೆ ನೀಡಿರುವುದು ಐತಿಹಾಸಿಕ ನಿರ್ಧಾರ ಕೈಗೊಂಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.
Vijaya Karnataka Web agricultural bill is a boon for farmers
ಕೃಷಿ ಮಸೂದೆ ರೈತರಿಗೆ ವರದಾನ


ನಗರದಲ್ಲಿಸುದ್ದಿಗೋಷ್ಠಿಯಲ್ಲಿಮಂಗಳವಾರ ಮಾತನಾಡಿದ ಅವರು, ರೈತರಿಗೆ ಆಸರೆಯಾಗಿ ನಿಲ್ಲುವ ನಿಟ್ಟಿನಲ್ಲಿಕೇಂದ್ರ ಮತ್ತು ರಾಜ್ಯ ಸರಕಾರಗಳ ಈ ಮಸೂದೆಗಳು ಮಹತ್ವದ ಪಾತ್ರವಹಿಸಲಿವೆ ಎಂದರು.

ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರಕಾರ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ನೂತನ ಮಸೂದೆಗಳು ದೇಶದ ಕೃಷಿ ಉತ್ಪನ್ನಕ್ಕಾಗಿ ಮಾರುಕಟ್ಟೆ ಸೃಷ್ಟಿಸುವುದು ಹಾಗೂ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಸಹಾಯಕವಾಗಲಿದೆ. ಕೃಷಿ ವಲಯದಲ್ಲಿರೈತರಿಗೆ ಮುಕ್ತ ಸ್ವಾತಂತ್ರ್ಯ ನೀಡುವಲ್ಲಿಹಾಗೂ ಕೃಷಿ ವಲಯದಲ್ಲಿನ ಮೂಲ ಸೌಕರ್ಯ ಅಭಿವೃದ್ಧಿ, ಹೂಡಿಕೆ ಸೆಳೆಯುವಲ್ಲಿಮಸೂದೆಗಳು ಪರಿಣಾಮಕಾರಿಯಾಗಲಿವೆ ಎಂದರು.

ಬಂಡವಾಳಶಾಹಿಗಳಿಗೆ ಸಹಕಾರವಿಲ್ಲ
ರೈತರ ಕೃಷಿ ಉತ್ಪನ್ನಗಳ ವ್ಯಾಪಾರ ಮತ್ತು ವಾಣಿಜ್ಯ ಕಾಯಿದೆಗಳು ರೈತರು ಹಾಗೂ ವ್ಯಾಪಾರಸ್ಥರು ತಮಗಿಷ್ಟ ಬಂದ ಕಡೆ ಮಾರಾಟ ಮತ್ತು ಖರೀದಿ ಅವಕಾಶ ದೊರೆಯಲಿವೆ. ಭೂ ಸುಧಾರಣೆ ಕಾಯಿದೆ ತಿದ್ದುಪಡಿ ಕುರಿತು ಮಾತನಾಡಿದ ಅವರು, ಭೂ ಸುಧಾರಣೆ ಕಾಯಿದೆಯಿಂದ ಯಾವುದೇ ರೈತರಿಗೆ ಅನ್ಯಾಯವಾಗುವುದಿಲ್ಲ. ರೈತರಿಗೆ ಅನೂಕೂಲಕರವಾದ ಕಾಯಿದೆ ಇದಾಗಿದ್ದು, ಬಿಜೆಪಿ ಬಂಡವಾಳ ಶಾಹಿಗಳಿಗೆ ಯಾವುದೇ ಕಾರಣಕ್ಕೂ ಸಹಕಾರ ನೀಡುವುದಿಲ್ಲಎಂದು ತಿಳಿಸಿದರು.

ಸಿಎಂ ಬದಲಾವಣೆ ಇಲ್ಲ
ರಾಜ್ಯದ ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಹಿತದೃಷ್ಟಿಯಿಂದ ಸಿಎಂ ಅವರು ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಯಡಿಯೂರಪ್ಪನವರು ಪೂರ್ಣಾವಧಿಯ ಸಿಎಂ ಆಗಿ ಆಡಳಿತ ನಡೆಸಲಿದ್ದು, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲಎಂದು ಮಹೇಶ ಟೆಂಗಿನಕಾಯಿ ಪ್ರತಿಕ್ರಿಯಿಸಿದರು.

ಹುಡಾ ಅಧ್ಯಕ್ಷ ನಾಗೇಶ ಕಲ್ಬುರ್ಗಿ, ವಿಭಾಗೀಯ ಪ್ರಭಾರಿ ಲಿಂಗರಾಜ ಪಾಟೀಲ, ಬಸವರಾಜ ಕುಂದಗೋಳಮಠ, ದತ್ತಮೂರ್ತಿ ಕುಲಕರ್ಣಿ, ರವಿ ನಾಯಕ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ