ಆ್ಯಪ್ನಗರ

ಏಮ್ಸ್‌ ಉತ್ತರ ಕರ್ನಾಟಕದಲ್ಲಿ ಸ್ಥಾಪನೆಯಾಗಲಿ

ಹುಬ್ಬಳ್ಳಿ : ಏಮ್ಸ್‌ನ್ನು ರಾಮನಗರದಲ್ಲಿ ಸ್ಥಾಪಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಮೂಲಕ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್‌ ಕಿಡಿಕಾರಿದರು.

Vijaya Karnataka 26 Dec 2018, 5:00 am
ಹುಬ್ಬಳ್ಳಿ : ಏಮ್ಸ್‌ನ್ನು ರಾಮನಗರದಲ್ಲಿ ಸ್ಥಾಪಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಮೂಲಕ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್‌ ಕಿಡಿಕಾರಿದರು.
Vijaya Karnataka Web aims may be established in north karnataka
ಏಮ್ಸ್‌ ಉತ್ತರ ಕರ್ನಾಟಕದಲ್ಲಿ ಸ್ಥಾಪನೆಯಾಗಲಿ


ನಗರದ ಶ್ರೀ ಬಾಲಾಜಿ ಆಸ್ಪತ್ರೆಯಲ್ಲಿ ಮಂಗಳವಾರ ನಡೆದ ಹಾರ್ಟ್‌ ಕೇರ್‌ ಸೆಂಟರ್‌ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಅಗತ್ಯ ಸೌಲಭ್ಯವುಳ್ಳ ಆಸ್ಪತ್ರೆಗಳಿವೆ. ಬೆಂಗಳೂರು ಮತ್ತು ರಾಮನಗರ ಹತ್ತಿರದ ಜಿಲ್ಲೆಗಳಾಗಿವೆ. ರಾಮನಗರಕ್ಕೆ ಏಮ್ಸ್‌ ಅಷ್ಟೊಂದು ಅವಶ್ಯಕವಾಗಿಲ್ಲವಾದರೂ, ಮುಖ್ಯಮಂತ್ರಿ ಕುಮಾರಸ್ವಾಮಿ ಏಮ್ಸನ್ನು ರಾಮನಗರದಲ್ಲಿ ಸ್ಥಾಪಿಸುವಂತೆ ಪತ್ರ ಬರೆದಿದ್ದಾರೆ. ಇದರಿಂದ ಏಮ್ಸ್‌ ವಿಚಾರದಲ್ಲಿ ಕುಮಾರಸ್ವಾಮಿ ಮತ್ತೆ ರಾಜಕೀಯ ಮಾಡುತ್ತಿದ್ದಾರೆಂಬುದು ಸ್ಪಷ್ಟವಾಗುತ್ತದೆ ಎಂದರು.

ಏಮ್ಸ್‌ ಉತ್ತರ ಕರ್ನಾಟಕದ ಯಾವುದಾರರು ಜಿಲ್ಲೆಯಲ್ಲಿ ಸ್ಥಾಪನೆ ಆಗಬೇಕು. ಅಂದಾಗ ಮಾತ್ರ ಇದರ ಲಾಭ ಈ ಭಾಗದ ಲಕ್ಷಾಂತರ ಬಡ ಜನರಿಗೆ ತಲುಪಲು ಸಾಧ್ಯ. ರಾಮನಗರದಲ್ಲಿ ಸ್ಥಾಪನೆಯಾದರೆ, ಉತ್ತರ ಕರ್ನಾಟಕ ಭಾಗದ ಜನರು ದೂರದ ಬೆಂಗಳೂರು ಮತ್ತು ರಾಮನಗರಕ್ಕೆ ಹೋಗಬೇಕಾಗುತ್ತದೆ. ಉತ್ತರ ಕರ್ನಾಟಕದಲ್ಲಿ ಸ್ಥಾಪನೆ ಮಾಡಿದರೆ ಈ ಭಾಗದ ಜನರಿಗೆ ಅನುಕೂಲವಾಗಲಿದೆ. ಮೇಲ್ಮಟ್ಟದಲ್ಲಿ ತಾವು ಒತ್ತಡ ಹೇರು ಕೆಲಸ ಮಾಡಲಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರು, ಸಂಘ-ಸಂಸ್ಥೆಗಳು ಹೋರಾಟ ಮಾಡಬೇಕಿದೆ ಎಂದರು.

ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ಏಮ್ಸ್‌ ಉತ್ತರ ಕರ್ನಾಟಕ ಭಾಗದಲ್ಲಿ ಸ್ಥಾಪಿಸಲು ಅವಕಾಶ ನೀಡುವಂತೆ ನಮ್ಮ ಸರಕಾರ ಸಚಿವರ ಮೇಲೆ ಒತ್ತಡ ಹಾಕಲಾಗುವುದು. ಅಲ್ಲದೆ, ಇದರಿಂದ ಉತ್ತರ ಕರ್ನಾಟಕ ಭಾಗದ ಜನರಿಗೆ ಆಗುವ ಲಾಭ ಕುರಿತು ಕೇಂದ್ರಕ್ಕೆ ಮನವರಿಕೆ ಮಾಡಿಕೊಡಲಾಗುವುದು. ಮುಖ್ಯಮಂತ್ರಿ ಕುಮಾರಸ್ವಾಮಿ ನೀಡಿದ ಪತ್ರದ ಅಣತಿಯಂತೆ ಯಾವುದೇ ಕಾರಣಕ್ಕೂ ರಾಮನಗರಕ್ಕೆ ಏಮ್ಸ್‌ ನೀಡಬಾರದು ಎಂದು ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ