ಆ್ಯಪ್ನಗರ

ಅಳ್ನಾವರ ಪಪಂ: ನಿಂಬಣ್ಣವರ ಪ್ರಚಾರ

ಅಳ್ನಾವರ : ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಸ್ಥಳೀಯ ಆಡಳಿತದಲ್ಲಿ ಬದಲಾವಣೆ ತರಲು ಸಹಕರಿಸಬೇಕು ಎಂದು ಶಾಸಕ ಸಿ.ಎಮ್‌.ನಿಂಬಣ್ಣವರ ಹೇಳಿದರು.

Vijaya Karnataka 28 May 2019, 5:00 am
ಅಳ್ನಾವರ : ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಸ್ಥಳೀಯ ಆಡಳಿತದಲ್ಲಿ ಬದಲಾವಣೆ ತರಲು ಸಹಕರಿಸಬೇಕು ಎಂದು ಶಾಸಕ ಸಿ.ಎಮ್‌.ನಿಂಬಣ್ಣವರ ಹೇಳಿದರು.
Vijaya Karnataka Web DRW-27 aln photo 2
ಅಳ್ನಾವರದಲ್ಲಿ ಪಪಂ ಚುನಾವಣೆ ಪ್ರಚಾರದಲ್ಲಿ ಶಾಸಕ ಸಿ.ಎಂ. ನಿಂಬಣ್ಣವರ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.


ಅಳ್ನಾವರದಲ್ಲಿ ಭಾನುವಾರ ವಿವಿಧ ವಾರ್ಡ್‌ಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿ ಮಾತನಾಡಿ, ಸರಕಾರಿ ಯೋಜನೆಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಲು ಬದ್ಧರಾಗಿರುವ ಅಭ್ಯರ್ಥಿಗೆ ಮತ ನೀಡಿ ಪಟ್ಟಣದ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಬೇಕು. ಪಾರದರ್ಶಕ ಆಡಳಿತ ನೀಡುವ ಭರವಸೆ ನಮ್ಮದಾಗಿದೆ. ಇದಕ್ಕೆ ಮತದಾರರ ಬೆಂಬಲ ಬೇಕು ಎಂದು ತಿಳಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಈರಣ್ಣ ಜಡಿ, ಉಪಾಧ್ಯಕ್ಷ ಶಂಕರ ಬಸವರೆಡ್ಡಿ, ಪ್ರಧಾನ ಕಾರ್ಯದರ್ಶಿ ಶಿವಾಜಿ ಡೊಳ್ಳಿನ, ಡಾ.ಚಂದ್ರಶೇಖರ ಚಂದರಗಿಮಠ, ಅಶೋಕ ಸಾವಂತ, ಗುರುರಾಜ ನರಗುಂದ, ಪಕ್ಷ ದ ಅಭ್ಯರ್ಥಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ