ಆ್ಯಪ್ನಗರ

ಯಾವುದೇ ಕ್ಷಣದಲ್ಲಾದರೂ ಮೈತ್ರಿ ಸರಕಾರ ಪತನ: ಜಗದೀಶ ಶೆಟ್ಟರ್‌ ಭವಿಷ್ಯ

ಹುಬ್ಬಳ್ಳಿ : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವು ರಾಜ್ಯದ ಮೈತ್ರಿ ಸರಕಾರದ ಮೇಲೆ ಪರಿಣಾಮ ಬೀರಲಿದೆ. ಯಾವುದೇ ಕ್ಷಣದಲ್ಲಾದರೂ ರಾಜ್ಯ ಸರಕಾರ ಬಿದ್ದು ಹೋಗಬಹುದು ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್‌ ಭವಿಷ್ಯ ನುಡಿದರು.

Vijaya Karnataka 26 May 2019, 5:00 am
ಹುಬ್ಬಳ್ಳಿ : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವು ರಾಜ್ಯದ ಮೈತ್ರಿ ಸರಕಾರದ ಮೇಲೆ ಪರಿಣಾಮ ಬೀರಲಿದೆ. ಯಾವುದೇ ಕ್ಷಣದಲ್ಲಾದರೂ ರಾಜ್ಯ ಸರಕಾರ ಬಿದ್ದು ಹೋಗಬಹುದು ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್‌ ಭವಿಷ್ಯ ನುಡಿದರು.
Vijaya Karnataka Web alliance government collapses at any moment jagadish shettar predicts
ಯಾವುದೇ ಕ್ಷಣದಲ್ಲಾದರೂ ಮೈತ್ರಿ ಸರಕಾರ ಪತನ: ಜಗದೀಶ ಶೆಟ್ಟರ್‌ ಭವಿಷ್ಯ


ನಗರದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ''ಮೈತ್ರಿ ಪಕ್ಷಗಳಲ್ಲಿ ಸರಕಾರ ಬೀಳುವ ಲಕ್ಷಣಗಳು ಈಗಷ್ಟೇ ಆರಂಭವಾಗಿವೆ. ಹೀಗಾಗಿ ನಾವು ಕಾಯ್ದು ನೋಡುತ್ತಿದ್ದೇವೆ'' ಎಂದರು.

''ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ರಾಜಕಾರಣದಿಂದ ಜೆಡಿಎಸ್‌ ಶಾಸಕರು ಬೇಸತ್ತು ಹೋಗಿದ್ದಾರೆ. ಅವಿನಾಶ ಜಾಧವ್‌ ಗೆಲುವಿನಿಂದ ಬಹಳಷ್ಟು ಶಾಸಕರು ಪ್ರೇರೇಪಿತರಾಗಿ ಬಿಜೆಪಿಗೆ ಬರಲೂಬಹುದು. ಈಗಾಗಲೇ ಶಾಸಕ ರಮೇಶ ಜಾರಕಿಹೋಳಿ ಮತ್ತು ತಂಡ ಆ ಕೆಲಸ ಆರಂಭಿಸಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ನಿಂದ ಬಹಳಷ್ಟು ಶಾಸಕರು ಬಿಜೆಪಿಗೆ ಬರುವ ಲಕ್ಷಣಗಳು ದಟ್ಟವಾಗಿವೆ''ಎಂದು ಹೇಳಿದರು.

ಮಂತ್ರಿ ಸ್ಥಾನ ಸಿಗಬೇಕು : ''ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಪ್ರಹ್ಲಾದ್‌ ಜೋಶಿಯವರಿಗೆ ಮಂತ್ರಿ ಸ್ಥಾನ ಸಿಗಬೇಕು. ಜತೆಗೆ ಕರ್ನಾಟಕದ ನಾಲ್ವರು ಸಂಸದರಿಗೆ ಮಂತ್ರಿ ಸ್ಥಾನ ನೀಡಬೇಕು ಎಂಬುದು ನಮ್ಮ ಆಶಯವಾಗಿದೆ. ಇದನ್ನು ವರಿಷ್ಠರಿಗೆ ತಿಳಿಸುತ್ತೇವೆ'' ಎಂದು ತಿಳಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ