ಆ್ಯಪ್ನಗರ

ಅಂಬೇಡ್ಕರ್‌ಕಾರ್ಮಿಕ ಸಹಾಯ ಹಸ್ತ ಯೋಜನೆ

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ವಿವಿಧ ಸೌಲಭ್ಯಗಳ ವಿಷಯಕ್ಕೆ ಸಂಬಂಧಿಸಿದಂತೆ ಅಂಬೇಡ್ಕರ್‌ ಕಾರ್ಮಿಕ ಸಹಾಯ ಹಸ್ತ ಯೋಜನೆ ಅಡಿಯಲ್ಲಿಸುಮಾರು 25 ಸಾವಿರ ಅಸಂಘಟಿತ ಕಾರ್ಮಿಕರಿಗೆ ವಿವಿಧ ಸೌಲಭ್ಯ ಒದಗಿಸಲಾಗುವುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಕಾರ್ಮಿಕ ಘಟಕದ ರಾಜ್ಯ ಅಧ್ಯಕ್ಷ ಎಸ್‌.ಎಸ್‌.ಪ್ರಕಾಶಂ ತಿಳಿಸಿದರು.

Vijaya Karnataka 26 Sep 2019, 5:00 am
ಹುಬ್ಬಳ್ಳಿ: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ವಿವಿಧ ಸೌಲಭ್ಯಗಳ ವಿಷಯಕ್ಕೆ ಸಂಬಂಧಿಸಿದಂತೆ ಅಂಬೇಡ್ಕರ್‌ ಕಾರ್ಮಿಕ ಸಹಾಯ ಹಸ್ತ ಯೋಜನೆ ಅಡಿಯಲ್ಲಿಸುಮಾರು 25 ಸಾವಿರ ಅಸಂಘಟಿತ ಕಾರ್ಮಿಕರಿಗೆ ವಿವಿಧ ಸೌಲಭ್ಯ ಒದಗಿಸಲಾಗುವುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಕಾರ್ಮಿಕ ಘಟಕದ ರಾಜ್ಯ ಅಧ್ಯಕ್ಷ ಎಸ್‌.ಎಸ್‌.ಪ್ರಕಾಶಂ ತಿಳಿಸಿದರು.
Vijaya Karnataka Web ambedkar labor help hand project
ಅಂಬೇಡ್ಕರ್‌ಕಾರ್ಮಿಕ ಸಹಾಯ ಹಸ್ತ ಯೋಜನೆ


ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ರಾಜ್ಯದಲ್ಲಿಶೇ.60 ಕ್ಕಿಂತ ಹೆಚ್ಚಿನ ಜನರು ಅಸಂಘಟಿತ ಕಾರ್ಮಿಕರಾಗಿದ್ದು, ಅವರಿಗೆ ಸರಕಾರ ಎಷ್ಟೇ ಸೌಲಭ್ಯಗಳನ್ನು ಒದಗಿಸಿದರು ಕೂಡಾ ಅವುಗಳು ಕಾರ್ಮಿಕರಿಗೆ ತಲುಪುತ್ತಿಲ್ಲ. ಹೀಗಾಗಿ ಕೋಟಿ ಕೋಟಿ ಹಣ ಕಾರ್ಮಿಕ ಇಲಾಖೆಯಲ್ಲಿಉಳಿದಿದೆ ಎಂದು ಹೇಳಿದರು.

ಕಾರ್ಮಿಕರು ಯೋಜನೆ ಸದುಪಯೋಗ ಪಡಿಸಿಕೊಳ್ಳುವಂತೆ ರಾಜ್ಯಾದ್ಯಂತ ಜಾಗೃತಿ ಮೂಡಿಸಲಾಗುತ್ತಿದ್ದು, ಅದರಂತೆ ಹುಬ್ಬಳ್ಳಿಯಲ್ಲಿಕಾರ್ಮಿಕರ ಸೇವಾ ಕೇಂದ್ರವನ್ನು ಸ್ಥಾಪಿಸಿ ಅದರ ಮೂಲಕ 25 ಸಾವಿರ ಅಸಂಘಟಿತ ಕಾರ್ಮಿಕರ ನೋಂದಣಿ ಮಾಡಿಕೊಳ್ಳಲಾಗುತ್ತಿದೆ ಎಂದರು.

ಪರಿಹಾರ ತಗೊಂಡು ಬನ್ನಿ
ರಾಜ್ಯ ನೆರೆ ಹಾವಳಿಯಿಂದ ತತ್ತರಿಸಿ ಹೋಗಿದ್ದು, ಬಿಜೆಪಿಯ ರಾಜ್ಯದ 25 ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಿ ಆದಷ್ಟು ಬೇಗ ನೆರೆ ಪರಿಹಾರ ಒದಗಿಸುವ ಕೆಲಸ ಮಾಡಬೇಕು. ಈ ಹಿನ್ನೆಲೆಯಲ್ಲಿಬೆಳಗಾವಿಯಲ್ಲಿಕಾಂಗ್ರೆಸ್‌ ಪಕ್ಷದಿಂದ ಹೋರಾಟ ಮಾಡಲಾಗುತ್ತಿದ್ದು, ಆದಷ್ಟು ಬೇಗ ನೆರೆ ಪರಿಹಾರ ರಾಜ್ಯಕ್ಕೆ ಬರಲಿ. ರಾಜ್ಯದಲ್ಲಿ15 ಕ್ಷೇತ್ರದಲ್ಲಿಉಪಚುನಾವಣೆ ನಡೆಯಲಿದ್ದು, ಎಲ್ಲಕ್ಷೇತ್ರದಲ್ಲಿಕಾಂಗ್ರೆಸ್‌ ಸ್ಪರ್ಧಿಸಲಿದೆ ಅಲ್ಲದೇ 15 ಕ್ಕೂ 15 ಕ್ಷೇತ್ರದಲ್ಲಿಜಯಗಳಿಸಲಿದೆ ಎಂದು ತಿಳಿಸಿದರು.

ರಾಜ್ಯ ಉಪಾಧ್ಯಕ್ಷ ಮೋಹನ್‌ ಹಿರೇಮನಿ, ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಾರ್ಮಿಕ ಘಟಕದ ಅಧ್ಯಕ್ಷ ವಿಜಯ ಗುಂಟ್ರಾಳ, ಧಾರವಾಡ ಗ್ರಾಮೀಣ ಅಧ್ಯಕ್ಷ ಸಿದ್ದಾರ್ಥ ಗಬ್ಬೂರ ಪತ್ರಿಕಾಗೋಷ್ಠಿಯಲ್ಲಿಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ