ಆ್ಯಪ್ನಗರ

ಅಂಬೇಡ್ಕರ್‌ ಕ್ರೀಡಾಂಗಣ ಅತಿಕ್ರಮಣ ತೆರವುಗೊಳಿಸಿ

ಹುಬ್ಬಳ್ಳಿ : ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌ ಕ್ರೀಡಾಂಗಣ ನಿರ್ಮಾಣಕ್ಕೆ ಉದ್ದೇಶಿಸಿತ ಹೆಗ್ಗೇರಿ ಕೆರೆಯ ಜಾಗವನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡಿದ್ದು, ಕೂಡಲೇ ಭೂಮಾಪನಾ ಇಲಾಖೆ ಸರ್ವೇ ನಡೆಸಿ ಅತಿಕ್ರಮಣ ತೆರವುಗೊಳಿಸಬೇಕು ಎಂದು ಸಮತಾ ಸೇನಾ ಕರ್ನಾಟಕದ ಮುಖಂಡ ಗುರುನಾಥ ಉಳ್ಳಿಕಾಶಿ ಆಗ್ರಹಿಸಿದರು.

Vijaya Karnataka 28 Nov 2018, 5:00 am
ಹುಬ್ಬಳ್ಳಿ : ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌ ಕ್ರೀಡಾಂಗಣ ನಿರ್ಮಾಣಕ್ಕೆ ಉದ್ದೇಶಿಸಿತ ಹೆಗ್ಗೇರಿ ಕೆರೆಯ ಜಾಗವನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡಿದ್ದು, ಕೂಡಲೇ ಭೂಮಾಪನಾ ಇಲಾಖೆ ಸರ್ವೇ ನಡೆಸಿ ಅತಿಕ್ರಮಣ ತೆರವುಗೊಳಿಸಬೇಕು ಎಂದು ಸಮತಾ ಸೇನಾ ಕರ್ನಾಟಕದ ಮುಖಂಡ ಗುರುನಾಥ ಉಳ್ಳಿಕಾಶಿ ಆಗ್ರಹಿಸಿದರು.
Vijaya Karnataka Web DRW-27MANJU2A


ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಅವರು ಮಾತನಾಡಿದರು. ಕೆರೆಯ ಜಾಗದ ಒತ್ತುವರಿ ತೆರವುಗೊಳಿಸದೇ, ಸೂಕ್ತ ಯೋಜನಾ ವರದಿ ತಯಾರಿಸದೆ. ತರಾತುರಿಯಲ್ಲಿ ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌ ಕ್ರೀಡಾಂಗಣ ಕಾಮಗಾರಿ ಮಾಡಲಾಗುತ್ತಿದೆ. ಅವೈಜ್ಞಾನಿಕ ಕಾಮಗಾರಿಯಿಂದ ಕೆರೆಯ ಜಾಗೆ ಹಾಗೂ ಪಾಲಿಕೆಯ ಹಣವನ್ನು ಹಾಳು ಮಾಡಲಾಗುತ್ತಿದ್ದು, ಅದಕ್ಕೆ ಸ್ಥಳೀಯ ಶಾಸಕ ಜಗದೀಶ ಶೆಟ್ಟರ್‌ ಹಾಗೂ ಸಂಸದ ಪ್ರಹ್ಲಾದ್‌ ಜೋಶಿಯವರ ಕೈವಾಡವಿದೆ ಎಂದು ಆರೋಪಿಸಿದರು.

ಹೆಗ್ಗೇರಿಗೆ ಕೆರೆಗೆ ನೀರಿನ ಮೂಲವಿಲ್ಲದೇ ಕೊಳಚೆ ಗುಂಡಿಯಾದ ಕಾರಣ ಸಾರ್ವಜನಿಕರಿಗೆ ಅನುಕೂಲಕ್ಕಾಗಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡಲು ಒತ್ತಾಯಿಸಿ ಸಮತಾ ಸೇನಾ ಸಂಘಟನೆಯಿಂದ ಪಾಲಿಕೆಗೆ ಮನವಿ ಸಲ್ಲಿಸಲಾಗಿತ್ತು. ಸಂಘಟನೆಯ ಆಗ್ರಹಕ್ಕೆ ಮಣಿದು ಮಹಾನಗರ ಪಾಲಿಕೆ ಅದಕ್ಕೆ ಒಪ್ಪಿಗೆ ನೀಡಿದೆ ಎಂದರು.

ಕೆರೆಯ 1 ಎಕರೆ 11ಗುಂಟೆ ಜಾಗೆಯನ್ನು ಅತಿಕ್ರಮಣ ತೆರವುಗೊಳಿಸುವಲ್ಲಿ ಪಾಲಿಕೆ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ಕ್ರೀಡಾಂಗಣ ನಿರ್ಮಾಣಕ್ಕೆ ಸರಕಾರದಿಂದ 100 ಕೋಟಿ ಹಾಗೂ ಪಾಲಿಕೆಯಿಂದ 1 ಕೋಟಿ ಅನುದಾನ ನೀಡಲಾಗಿದೆ. ಆದರೂ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸದೇ ಅವೈಜ್ಞಾನಿಕ ಕಾಮಗಾರಿ ನಡೆಸಲಾಗುತ್ತಿದ್ದು, ಇದು ಹಲವು ಅನುಮಾನಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು.

ಕೋರ್ಟ್‌ ಆದೇಶ ಪಾಲಿಸುತ್ತಿಲ್ಲ

ಹೆಗ್ಗೇರಿ ಕೆರೆಯ ಒತ್ತುವರಿ ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿದ್ದರೂ ಪಾಲಿಕೆ ಅಧಿಕಾರಿಗಳು ನ್ಯಾಯಾಲಯದ ಆದೇಶ ಧಿಕ್ಕರಿಸುತ್ತಿರುವುದು ಖಂಡನೀಯ. ಈ ಅವೈಜ್ಞಾನಿಕ ಯೋಜನೆಯ ಹಿಂದೆ ಕಾಣದ ಕೈಗಳ ಕೈವಾಡ ಇರುವ ಅನುಮಾನ ದಟ್ಟವಾಗಿದೆ. ಒತ್ತುವರಿಯನ್ನು ಶೀಘ್ರವೇ ತೆರವುಗೊಳಿಸಿ ಆ ಜಾಗವನ್ನು ಸರಕಾರಕ್ಕೆ ಹಸ್ತಾಂತರಿಸಬೇಕು. ಅಲ್ಲಿಯವರೆಗೂ ಯಾವುದೇ ಅಭಿವೃದ್ಧಿ ಕಾಮಗಾರಿಗೆ ಚಾಲನೇ ನೀಡಬಾರದು. ಒಂದು ವೇಳೆ ನಮ್ಮ ಮನವಿಯನ್ನು ಉಲ್ಲಂಘಿಸಿದರೆ ಮುಂಬರುವ ದಿನಗಳಲ್ಲಿ ಶಾಸಕ ಹಾಗೂ ಸಂಸದರ ಮನೆಯ ಎದುರು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಧುಕೇಶ್ವರ ದೇಶಪಾಂಡೆ ಸೇರಿದಂತೆ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ