ಆ್ಯಪ್ನಗರ

ಅಮಿತ್‌ ಶಾ ರಾರ‍ಯಲಿಗೆ ಅಗತ್ಯ ಭದ್ರತೆ: ಸಚಿವ ಬೊಮ್ಮಾಯಿ

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸಿಎಎ ಕಾಯ್ದೆ ಕುರಿತು ಜನರಲ್ಲಿಜಾಗೃತಿ ಮೂಡಿಸಲು ಜ. 18ರಂದು ಹುಬ್ಬಳ್ಳಿಯಲ್ಲಿಹಮ್ಮಿಕೊಂಡ ರಾರ‍ಯಲಿಗೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Vijaya Karnataka 16 Jan 2020, 5:00 am
ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸಿಎಎ ಕಾಯ್ದೆ ಕುರಿತು ಜನರಲ್ಲಿಜಾಗೃತಿ ಮೂಡಿಸಲು ಜ. 18ರಂದು ಹುಬ್ಬಳ್ಳಿಯಲ್ಲಿಹಮ್ಮಿಕೊಂಡ ರಾರ‍ಯಲಿಗೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
Vijaya Karnataka Web 15 SANTOSH 1 A_3
ಹುಬ್ಬಳ್ಳಿ ನೆಹರು ಮೈದಾನದಲ್ಲಿಅಮಿತ್‌ ಶಾ ಕಾರ್ಯಕ್ರಮದ ಹಿನ್ನೆಲೆಯಲ್ಲಿವ್ಯವಸ್ಥೆಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಬುಧವಾರ ಪರಿಶೀಲನೆ ನಡೆಸಿದರು.


ಇಲ್ಲಿನ ನೆಹರು ಮೈದಾನದಲ್ಲಿಜ. 18 ಕಾರ್ಯಕ್ರಮದ ಸಿದ್ಧತೆ ಹಾಗೂ ಭದ್ರತಾ ಕ್ರಮಗಳನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಹರು ಮೈದಾನದ ಸುತ್ತಲಿರುವ ಹೋಟೆಲ್‌, ವಾಣಿಜ್ಯ ಸಂಕೀರ್ಣಗಳ ಮೇಲೂ ನಿಗಾ ವಹಿಸಲಾಗುತ್ತಿದೆ. 16ರಿಂದ ಇಲ್ಲಿನ ಲಾಡ್ಜ್‌ಗಳಿಗೆ ಯಾರಾರ‍ಯರು ಬರುತ್ತಾರೆ ಎಂಬುದರ ಬಗ್ಗೆ ನಿಗಾವಹಿಸಲು ಸೂಚಿಸಲಾಗಿದೆ. ಇನ್ನು ಕೆಲವಡೆ ಜನರ ನಿರ್ಬಂಧ ಹೇರಲಾಗಿದೆ ಎಂದರು.

ಅಂದು ದೊಡ್ಡ ಪ್ರಮಾಣದಲ್ಲಿಕಾರ್ಯಕ್ರಮ ನಡೆಯುತ್ತಿರುವುದರಿಂದ ವಾಹನಗಳು ಹೆಚ್ಚಾಗಿ ಬರುತ್ತಿವೆ. ಅದಕ್ಕಾಗಿ ನಗರದ ಬೇರೆ ಬೇರೆ ಕಡೆಗಳಲ್ಲಿಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗುತ್ತಿದೆ. ಅಗತ್ಯ ಬಿದ್ದರೆ, ಕೆಲವು ಮಾರ್ಗಗಳ ಬದಲಾವಣೆಯನ್ನೂ ಮಾಡಲಾಗುವುದು. ಬಂದೋಬಸ್‌್ತಗೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗುತ್ತದೆ ಎಂದು ಹೇಳಿದರು.

ಅಡಚಣೆ ಮಾಡಿದರೆ ಸೂಕ್ತ ಕ್ರಮ
ಪ್ರಜಾಪ್ರಭುತ್ವ ರಾಷ್ಟ್ರ. ಇಲ್ಲಿಯಾರು ಬೇಕಾದರೂ ಪ್ರತಿಭಟನೆ ನಡೆಸಬಹುದು. ಸಿಎಎ ವಿರೋಧಿಸಿ ಇತ್ತೀಚಿಗೆ ಕಾಂಗ್ರೆಸ್‌ ಬೃಹತ್‌ ರಾರ‍ಯಲಿ ನಡೆಸಿತ್ತು. ಆಗ ನಾವು ಅವರ ಹೋರಾಟಕ್ಕೆ ಯಾವುದೇ ರೀತಿಯ ಅಡಚಣೆ ಮಾಡಿರಲಿಲ್ಲ. ಆದರೆ, ಶಾ ರಾರ‍ಯಲಿ ವಿರುದ್ಧ ಗೋ ಬ್ಯಾಕ್‌ ಚಳವಳಿ ಮಾಡುವುದಾಗಿ ಕಾಂಗ್ರೆಸ್‌ ಹೇಳಿದೆ. ಅವರು ಹೋರಾಟ ಮಾಡುವುದಕ್ಕೆ ನಮ್ಮ ಅಭ್ಯಂತರ ಇಲ್ಲ. ಆದರೆ, ಅಡಚಣೆ ಮಾಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿಮುಖಂಡರಾದ ಶಿವು ಮೆಣಸಿನಕಾಯಿ, ಹನುಮಂತಪ್ಪ ದೊಡ್ಡಮನಿ, ಪೊಲೀಸ್‌ ಆಯುಕ್ತ ಆರ್‌. ದಿಲೀಪ್‌, ಡಿಸಿಪಿ ನಾಗೇಶ ಸೇರಿದಂತೆ ಅನೇಕರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ