ಆ್ಯಪ್ನಗರ

ಉಡುಪಿ ಕಾಲೇಜು ವೀಡಿಯೋ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಘಟನೆ

ಭಯಭೀತಿಯಿಂದಲೇ ವಿದ್ಯಾರ್ಥಿನಿಯರು ಕಾಲೇಜಿಗೆ ಕಾಲಿಡಬೇಕಾದ ಪರಿಸ್ಥಿತಿ ಹುಬ್ಬಳ್ಳಿ ಧಾರವಾಡ ಅವಳಿ ನಗರದ ಕೆಲ ಕಾಲೇಜಿನಲ್ಲಿ ನಡೆದಿದೆ. ಉಡುಪಿ ಘಟನೆ ಮಾಸುವ ಮುನ್ನವೇ, ಹುಬ್ಬಳ್ಳಿ ಧಾರವಾಡದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದ ವಿದ್ಯಾರ್ಥಿನಿಯರ ಫೋಟೋಗಳನ್ನು ಕೆಟ್ಟದಾಗಿ ಎಡಿಟ್ ಮಾಡಿ ಇನ್ಸ್ಟಾಗ್ರಾಂ ಹ್ಯಾಕ್ ಮಾಡಿ ವೈರಲ್ ಮಾಡಲಾಗುತ್ತಿದೆ.

Edited byಸೌಮ್ಯಶ್ರೀ ಮಾರ್ನಾಡ್ | Lipi 4 Aug 2023, 5:10 pm

ಹೈಲೈಟ್ಸ್‌:

  • ಉಡುಪಿಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿ ನಗರದಲ್ಲಿ ಇನ್ನೊಂದು ಇಂತಹದೇ ಘಟನೆ ನಡೆಯುವಂತಹ ಮತ್ತು ಇದಕ್ಕೆ ಕುಮ್ಮಕ್ಕು ನೀಡುವಂತ ಘಟನೆ ನಡೆದಿದೆ.
  • ಕಳೆದ ಮೂರು ತಿಂಗಳ ಹಿಂದೆ ಹುಬ್ಬಳ್ಳಿ ಧಾರವಾಡ ಅವಳಿ ನಗರದ ಕೆಲ ಕಾಲೇಜಿನ ವಿದ್ಯಾರ್ಥಿಗಳ ಇನ್ಸ್ಟಾಗ್ರಾಂ ಹ್ಯಾಕ್ ಆಗಿದೆ. ಇನ್ಸ್ಟಾಗ್ರಾಂ ನಲ್ಲಿರುವ ವಿದ್ಯಾರ್ಥಿನಿಯರ ಫೋಟೊಗಳನ್ನು ಕೆಟ್ಟದಾಗಿ, ಅಶ್ಲೀಲವಾಗಿ ಎಡಿಟ್ ಮಾಡಿ ವೈರಲ್ ಮಾಡಲಾಗುತ್ತಿದೆ.
  • ಈಗಾಗಲೇ ಕೆಲ ವಿದ್ಯಾರ್ಥಿನಿಯರ ಫೋಟೊಗಳನ್ನು ಎಡಿಟ್ ಮಾಡಿ ವೈರಲ್ ಮಾಡಿದ ಕುರಿತು ಪೊಲೀಸರು ಕಾಲೇಜಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತಿದ್ದಾರೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Social Media hack
ಹುಬ್ಬಳ್ಳಿ: ಉಡುಪಿಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿ ನಗರದಲ್ಲಿ ಇನ್ನೊಂದು ಇಂತಹದೇ ಘಟನೆ ನಡೆಯುವಂತಹ ಮತ್ತು ಇದಕ್ಕೆ ಕುಮ್ಮಕ್ಕು ನೀಡುವಂತ ಘಟನೆ ನಡೆದಿದೆ.
ಸೈಬರ್ ವಂಚಕರಿಗೆ ಈಗ ಕಾಲೇಜಿನ ವಿದ್ಯಾರ್ಥಿನಿಯರೇ ಟಾರ್ಗೆಟ್ ಆಗಿದ್ದು ಬೆದರಿಕೆ ಪೋಸ್ಟ್ಗಳು ಹರಿದಾಡುತ್ತಿದ್ದು, ಇದು ಅವಳಿ ನಗರದ ಕೆಲ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಪಾಲಕರಲ್ಲಿ ಆತಂಕ ಮೂಡಿಸುತ್ತಿದೆ.

ನಿಮ್ಮ ಮಗಳೇ ಆ ಕಾಲೇಜಿನಲ್ಲಿ ಓದುತ್ತಿದ್ದರೆ ಏನು ಮಾಡ್ತಿದ್ರಿ? ಜಿ ಪರಮೇಶ್ವರ್‌ಗೆ ಪ್ರಮೋದ್‌ ಮುತಾಲಿಕ್‌ ಪ್ರಶ್ನೆ

ಕಳೆದ ಮೂರು ತಿಂಗಳ ಹಿಂದೆ ಹುಬ್ಬಳ್ಳಿ ಧಾರವಾಡ ಅವಳಿ ನಗರದ ಕೆಲ ಕಾಲೇಜಿನ ವಿದ್ಯಾರ್ಥಿಗಳ ಇನ್ಸ್ಟಾಗ್ರಾಂ ಹ್ಯಾಕ್ ಆಗಿದೆ. ಇನ್ಸ್ಟಾಗ್ರಾಂ ನಲ್ಲಿರುವ ವಿದ್ಯಾರ್ಥಿನಿಯರ ಫೋಟೊಗಳನ್ನು ಕೆಟ್ಟದಾಗಿ, ಅಶ್ಲೀಲವಾಗಿ ಎಡಿಟ್ ಮಾಡಿ ವೈರಲ್ ಮಾಡಲಾಗುತ್ತಿದೆ.

ಇದರಲ್ಲಿ ಅಸಹ್ಯಕರವಾಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿದ್ದು ಮುಂದಿನ ಟಾರ್ಗೆಟ್ ಯಾರು ಎಂಬುದನ್ನೂ ಸಹ ಹಾಕಲಾಗುತ್ತಿದೆ. ಇದು ಸಾಕಷ್ಟು ಆತಂಕಕ್ಕೆ ಸಹ ಕಾರಣವಾಗಿದೆ. ಈಗಾಗಲೇ ಕೆಲ ವಿದ್ಯಾರ್ಥಿನಿಯರ ಫೋಟೊಗಳನ್ನು ಎಡಿಟ್ ಮಾಡಿ ವೈರಲ್ ಮಾಡಿದ ಕುರಿತು ಪೊಲೀಸರು ಕಾಲೇಜಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತಿದ್ದಾರೆ. ಇನ್ನು ಕೆಲ ವಿದ್ಯಾರ್ಥಿಗಳು ಹೆದರಿ ಮನೆಯೊಳಗೆ ವಿಷಯ ತಿಳಿಸದೇ ಸುಮ್ಮನಿದ್ದಾರೆ.

ಉಡುಪಿ ವಿಡಿಯೋ ಪ್ರಕರಣವನ್ನು ಎಸ್‌ಐಟಿಗೆ ವಹಿಸುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ
ಇನ್ನೂ ಕೆಲ ವಿದ್ಯಾರ್ಥಿನಿಯರು ಕಾಲೇಜಿನ ಆಡಳಿತ ಮಂಡಳಿ ಹಾಗೂ ಸೈಬರ್ ಪೊಲೀಸರಿಗೆ ದೂರು ಸಹ ಕೊಟ್ಟಿದ್ದಾರೆ .ಆದ್ರೆ ದೂರು ಸಲ್ಲಿಸಿದ್ದು, ಕಾಲೇಜಿನ ಆಡಳಿತ ಮಂಡಳಿ ಗಮನಕ್ಕೆ ತಂದ ವಿಷಯ ಸೈಬರ್ ವಂಚಕರಿಗೆ ಗೊತ್ತಾಗುತ್ತಿದ್ದು, ಇದಕ್ಕೆ ಪ್ರತಿಯಾಗಿ ಸೈಬರ್ ವಂಚಕರು ಮತ್ತಷ್ಟು ಬೆದರಿಕೆ ಪೋಸ್ಟ್ಗಳನ್ನು ಹಾಕುತ್ತಿದ್ದಾರೆ.

ಮುಂದಿನ ಟಾರ್ಗೆಟ್ ಕೆಲ ಪೋಸ್ಟ್ಗಳು ಹೀಗಿವೆ "ದಮ್ಮ ಬೆಕ್ರ ಲೇ.... ಹುಡ್ಕತಿನಿ ಅಂತ... ಅಲ್ಲ ಹುಡುಕ್ರಿ, ಪಾಲಿಟಿಕ್ಸ್ + ಪೊಲೀಸ್ + ಸೈಬರ್ ... ಅರ್ಥ ಮಾಡ್ಕೋರಿ ಲೇ.. ನನ್ನ ಏನ್.... ಮಾಡ್ಲಿಕು ಆಗೋದಿಲ್ಲ ಎಂದು ಕೆಲವು ಪೋಸ್ಟ್ ಹಾಕಲಾಗಿದೆ. ಇನ್ನೊಂದರಲ್ಲಿ ಇನ್ಸ್ಟಾಗ್ರಾಮ್ ಹ್ಯಾಕ್ ಮಾಡಿದ ವಿದ್ಯಾರ್ಥಿನಿಯರ ಫೋಟೊಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಅಸಹ್ಯಕರವಾಗಿ ಬರಹ ಬರೆದು ವೈರಲ್ ಮಾಡಲಾಗಿದೆ.

ಮತ್ತೊಂದರಲ್ಲಿ "ನೆಕ್ಸ್ಟ್ ಮೈ ಟಾರ್ಗೆಟ್, ಡೋಂಟ್ ಥಿಂಕ್ ಐ ಹ್ಯಾವ್ ನೋ ಫೋಟೋಸ್ ಐ ಹ್ಯಾವ್ 3 ಇಯರ್ ಬ್ಯಾಕ್ ಪೋಟೋಸ್ ಆಫ್ ಯುವರ್ಸ್" ಎಂಬ ಬೆದರಿಕೆ ಪೋಸ್ಟ್ಗಳು ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದರಿಂದ ಭಯಗೊಂಡ ವಿದ್ಯಾರ್ಥಿನಿಯರು ಮನೆಯಿಂದ ಹೊರಗೆ ಬರಲು ಹಾಗೂ ಕಾಲೇಜಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ.

ಕಾಲೇಜಿಗೆ ಹೊರಟರೆ ವಿದ್ಯಾರ್ಥಿಗಳು ಅಸಹ್ಯಕರವಾಗಿ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದು ಇದು ಪಾಲಕರಲ್ಲೂ ಆತಂಕ ಮೂಡಿಸಿದೆ. ಸೈಬರ್ ಪೋಸ್ಟ್ಗಳ ಕುರಿತು ಕೆಲ ಪಾಲಕರು ಕಾಲೇಜಿಗೆ ವಿಚಾರಿಸಲು ಹೋದರೆ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿ ಅಸಹಾಯಕರಾಗಿ ಕೈ ಚೆಲ್ಲುತ್ತಿದ್ದಾರೆ. ತಕ್ಷಣವೇ ಪೊಲೀಸರು ಈ ಕುಕೃತ್ಯದ ವಿರುದ್ಧ ಕ್ರಮ ಕೈಗೊಳ್ಳಬೇಕು, ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.
ಲೇಖಕರ ಬಗ್ಗೆ
ಸೌಮ್ಯಶ್ರೀ ಮಾರ್ನಾಡ್
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಡಿಜಿಟಲ್ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರರಾಗಿ 7 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ರಾಜಕೀಯ, ನಾಗರಿಕರ ಸಮಸ್ಯೆಗಳು, ಬೆಂಗಳೂರು ಸ್ಥಳೀಯ ಆಡಳಿತದ ಕುಂದುಕೊರತೆಗಳ ವರದಿ, ವಿಶೇಷ ವ್ಯಕ್ತಿಗಳ ಸಂದರ್ಶನಗಳನ್ನು ಮಾಡುತ್ತಿದ್ದಾರೆ. ರಂಗಭೂಮಿ ಹಾಗೂ ಯಕ್ಷಗಾನ ಇವರ ಇತರ ಆಸಕ್ತಿಕರ ಕ್ಷೇತ್ರಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ