ಆ್ಯಪ್ನಗರ

ಲಾಲ್‌ ಬಹದ್ದೂರ್‌ ಶಾಸ್ತ್ರೀಯವರಂತೆ ಮತ್ತೊಬ್ಬ ನಾಯಕನ ಸಾವು: ಕೋಡಿಹಳ್ಳಿ ಶ್ರೀ ಭವಿಷ್ಯ

ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರೀಯವರ ಸಾವಿನ ಮಾದರಿಯಲ್ಲೇ ದೇಶದ ಮತ್ತೊಬ್ಬ ನಾಯಕರಿಗೂ ಸಾವು ಸಂಭವಿಸುವ ಲಕ್ಷಣ ಇದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

Vijaya Karnataka 1 Oct 2017, 8:20 am

ಧಾರವಾಡ: ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರೀಯವರ ಸಾವಿನ ಮಾದರಿಯಲ್ಲೇ ದೇಶದ ಮತ್ತೊಬ್ಬ ನಾಯಕರಿಗೂ ಸಾವು ಸಂಭವಿಸುವ ಲಕ್ಷಣ ಇದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಶುಕ್ರವಾರ ಧಾರವಾಡ ಜಂಬೂ ಸವಾರಿ ಉತ್ಸವ ಸಮಿತಿ ಆಯೋಜಿಸಿದ್ದ ಜಂಬೂ ಸವಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ವೇಳೆ ಸುದ್ದಿಗಾರರೊಂದಿಗೆ ಶ್ರೀಗಳು ಮಾತನಾಡಿದರು.

''ಚೋಟುಗೇಣಿನ ವೀರ, ಭಾರತದ ಕುವರ, ತಕ್ಕಡಿಯ ಊರಿನಲ್ಲಿ ವಿಷ ಪಾನ ಮಾಡುವರು ಎಂಬುದಾಗಿ ಈ ಹಿಂದೆ ಹೇಳಿದ್ದೆ. ಅದರಂತೆ ಲಾಲ್‌ ಬಹದ್ದೂರ್‌ ಶಾಸ್ತ್ರೀಯವರ ಸಾವು ತಾಷ್ಕೆಂಟ್‌ನಲ್ಲಿ ಸಂಭವಿಸಿತ್ತು. ಈಗ ಅಂತಹದೇ ಘಟನೆ ಸಂಭವಿಸುವ ಲಕ್ಷಣ ಇದೆ'' ಎಂದು ಶ್ರೀಗಳು ಹೇಳಿದ್ದಾರೆ.

ಮೌಢ್ಯ ನಿಷೇಧ ಕಾಯ್ದೆ ಜಾರಿ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀಗಳು, ''ಮೌಢ್ಯ ನಿಷೇಧ ಕಾಯ್ದೆ ಜಾರಿ ಮಾಡ್ತಾ ಇರೋದು ಸ್ವಾಗತಾರ್ಹ. ಸತ್ಯ-ಅಸತ್ಯ, ಒಳ್ಳೆಯದು-ಕೆಟ್ಟದು, ಧರ್ಮ-ಅಧರ್ಮ ಎಲ್ಲವೂ ಇದೆ. ಮೊದಲಿನಿಂದಲೂ ಜನ ಸತ್ಯಕ್ಕಾಗಿ ಹೋರಾಟ ಮಾಡುತ್ತಾ ಇದ್ದಾರೆ. ಆದರೆ ಕೆಲವರು ಮೌಢ್ಯವನ್ನೇ ಬಂಡವಾಳ ಮಾಡಿಕೊಂಡು ಜನರ ಸುಲಿಗೆ ಮಾಡುತ್ತಿದ್ದಾರೆ. ಹೀಗಾಗಿ ಮೌಢ್ಯ ನಿಷೇಧ ಕಾಯ್ದೆ ಜಾರಿ ಮಾಡುತ್ತಿರುವುದು ಒಳ್ಳೆಯ ಕಾರ್ಯವಾಗಿದೆ'' ಎಂದರು.

ರಾಜ್ಯದಲ್ಲಿ ಕೆಲ ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಜನವರಿ ತಿಂಗಳವರೆಗೂ ಈ ಮಳೆ ಮುಂದುವರಿಯಲಿದೆ. ಹಿಂದೆ ಮಳೆ ಬಾರದೇ ರೈತರ ಸಂಕಷ್ಟಕ್ಕೆ ಸಿಲುಕಿದ್ದರೂ ಈ ಬಾರಿ ಮಳೆಯ ಕೊರತೆ ಇಲ್ಲ.

Vijaya Karnataka Web another leader will die like lal bahadur shastri
ಲಾಲ್‌ ಬಹದ್ದೂರ್‌ ಶಾಸ್ತ್ರೀಯವರಂತೆ ಮತ್ತೊಬ್ಬ ನಾಯಕನ ಸಾವು: ಕೋಡಿಹಳ್ಳಿ ಶ್ರೀ ಭವಿಷ್ಯ

-ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಕೋಡಿಮಠ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ