ಆ್ಯಪ್ನಗರ

ಉನ್ನತ ಭಾರತ ಅಭಿಯಾನ ಕೋಶಕ್ಕೆ ನೇಮಕ

ಧಾರವಾಡ : ಕರ್ನಾಟಕ ವಿಶ್ವವಿದ್ಯಾಲಯದ ಉನ್ನತ ಭಾರತ ಅಭಿಯಾನ ಕೋಶದ ನೂತನ ಸಂಯೋಜಕರಾಗಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಜೆ.ಎಂ. ಚಂದುನವರನ್ನು ನೇಮಕ ಮಾಡಲಾಗಿದೆ.

Vijaya Karnataka 2 Jan 2019, 5:00 am
ಧಾರವಾಡ : ಕರ್ನಾಟಕ ವಿಶ್ವವಿದ್ಯಾಲಯದ ಉನ್ನತ ಭಾರತ ಅಭಿಯಾನ ಕೋಶದ ನೂತನ ಸಂಯೋಜಕರಾಗಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಜೆ.ಎಂ. ಚಂದುನವರನ್ನು ನೇಮಕ ಮಾಡಲಾಗಿದೆ.
Vijaya Karnataka Web DRW-01RANGA03
ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಉನ್ನತ ಭಾರತ ಅಭಿಯಾನ ಕೋಶದ ನೂತನ ಸಂಯೋಜಕರಾಗಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಜೆ.ಎಂ.ಚಂದುನವರ ಅವರನ್ನು ನೇಮಕ ಮಾಡಲಾಯಿತು.


ಈ ಮೊದಲು ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಮಾಜಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಸಿ.ಎ.ಸೋಮಶೇಖರಪ್ಪ ಅವರು ಸೇವೆಯಿಂದ ನಿವೃತ್ತರಾದ ಪ್ರಯುಕ್ತ ಡಿ.31 ರಂದು ಉನ್ನತ ಭಾರತ ಅಭಿಯಾನ ಕೋಶದ ನೂತನ ಸಂಯೋಜಕರಾಗಿ ಡಾ.ಜೆ.ಎಂ.ಚಂದುನವರ ಅಧಿಕಾರ ಸ್ವೀಕರಿಸಿದರು.

ಜಿಲ್ಲೆಯ ಐದು ತಾಲೂಕುಗಳ ತಲಾ ಒಂದು ಹಳ್ಳಿಗೆ ನೂತನ ತಂತ್ರಜ್ಞಾನ ಬಳಸಿಕೊಂಡು ಗ್ರಾಮಾಭಿವೃದ್ಧಿ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಎನ್‌ಎಸ್‌ಎಸ್‌ ಸಹಯೋಗದಲ್ಲಿ ಅನುಷ್ಠಾನಗೊಳಿಸುವ ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗೆ ಕರ್ನಾಟಕ ವಿಶ್ವವಿದ್ಯಾಲಯ ಆಯ್ಕೆಯಾಗಿದ್ದು, ಅದರ ಅಂಗವಾಗಿ ಈಗಾಗಲೇ ಧಾರವಾಡ ಜಿಲ್ಲಾಡಳಿತ ಕಲಘಟಗಿ ತಾಲೂಕಿನ ಧುಮ್ಮವಾಡ, ಧಾರವಾಡ ತಾಲೂಕಿನ ಪುಡಕಲಕಟ್ಟಿ, ಕುಂದಗೋಳ ತಾಲೂಕಿನ ಗುಡಿಗೇರಿ, ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ, ನವಲಗುಂದ ತಾಲೂಕಿನ ಹೆಬ್ಬಳ್ಳಿ ಈ ಐದು ಗ್ರಾಮಗಳನ್ನು ಈ ಯೋಜನೆಗೆ ಆಯ್ಕೆಯಾಗಿವೆ.

ಈ ವೇಳೆ ಕವಿವಿ ಎನ್‌ ಎಸ್‌.ಎಸ್‌ ಕೋಶದ ಸಂಯೋಜನಾಧಿಕಾರಿ ಡಾ.ಎಂ.ಬಿ.ದಳಪತಿ, ಪತ್ರಿಕೋದ್ಯಮ ವಿಭಾಗದ ಅತಿಥಿ ಉಪನ್ಯಾಸಕ ಡಾ. ಮಂಜುನಾಥ ಅಡಿಗಲ್‌ ಸೇರಿದಂತೆ ಇತರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ