ಆ್ಯಪ್ನಗರ

5 ಲಕ್ಷ ದೋಚಿದ್ದ ಆರೋಪಿಗಳಿಬ್ಬರ ಬಂಧನ

ಹುಬ್ಬಳ್ಳಿ : ಬ್ಯಾಂಕ್‌ಗೆ ಕಟ್ಟಲು 5 ಲಕ್ಷ ರೂ. ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಬ್ಯಾಗ್‌ ಕಿತ್ತುಕೊಂಡು ಹೋಗಿದ್ದ ನಾಲ್ವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಘಂಟಿಕೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹಳೇಹುಬ್ಬಳ್ಳಿ ಹೆಗ್ಗೇರಿಯ ವಿಷ್ಣು ಮಾರುತಿ ತಲೆಚಾರಲೋ(27) ಹಾಗೂ ಪಾಲಿಕೊಪ್ಪ ಗ್ರಾಮದ ವಿರೇಶ ವಿರುಪಾಕ್ಷಪ್ಪ ಶಲವಡಿ (26) ಎಂಬುವರೇ ಬಂಧಿತ ಆರೋಪಿಗಳು.

Vijaya Karnataka 13 Aug 2019, 5:00 am
ಹುಬ್ಬಳ್ಳಿ : ಬ್ಯಾಂಕ್‌ಗೆ ಕಟ್ಟಲು 5 ಲಕ್ಷ ರೂ. ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಬ್ಯಾಗ್‌ ಕಿತ್ತುಕೊಂಡು ಹೋಗಿದ್ದ ನಾಲ್ವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಘಂಟಿಕೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹಳೇಹುಬ್ಬಳ್ಳಿ ಹೆಗ್ಗೇರಿಯ ವಿಷ್ಣು ಮಾರುತಿ ತಲೆಚಾರಲೋ(27) ಹಾಗೂ ಪಾಲಿಕೊಪ್ಪ ಗ್ರಾಮದ ವಿರೇಶ ವಿರುಪಾಕ್ಷಪ್ಪ ಶಲವಡಿ (26) ಎಂಬುವರೇ ಬಂಧಿತ ಆರೋಪಿಗಳು.
Vijaya Karnataka Web arrest of 5 lakh suspects
5 ಲಕ್ಷ ದೋಚಿದ್ದ ಆರೋಪಿಗಳಿಬ್ಬರ ಬಂಧನ


ಇಲ್ಲಿಯ ಹಳೇಹುಬ್ಬಳ್ಳಿಯಲ್ಲಿ ತಿರುಗುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿಯೊಂದಿಗೆ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 6,500 ರೂ. ನಗದು ಜಪ್ತಿ ಮಾಡಿದ್ದಾರೆ. ಅಲ್ಲದೆ, ಪರಾರಿ ಆಗಿರುವ ಇನ್ನಿಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ. ಹಳೇಹುಬ್ಬಳ್ಳಿ ದುರ್ಗದಬೈಲ್‌ನಲ್ಲಿರುವ ಚೆನ್ನಬಸವೇಶ್ವರ ಆಯಿಲ್‌ ಮಿಲ್‌ ಕಂಪನಿಯ ಉದ್ಯೋಗಿ ಮಂಜುನಾಥ ಗಾಣಗೇರ, ಕಸಬಾಪೇಟೆ ಕರ್ಣಾಟಕ ಬ್ಯಾಂಕ್‌ ಶಾಖೆಗೆ ಹಣ ಕಟ್ಟಲು ಸ್ಕೂಟಿಯಲ್ಲಿ ತೆರಳಿದ್ದರು. ಈ ವೇಳೆ ಬಮ್ಮಾಪುರ ಓಣಿಯ ವೀರಭದ್ರೇಶ್ವರ ದೇವಸ್ಥಾನದ ಬಳಿ ಹೋಗುತ್ತಿದ್ದಾಗ ಅವರನ್ನು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಆರೋಪಿಗಳು ಅವರಿಗೆ ಚಾಕು ತೋರಿಸಿ ಅವರ ಬಳಿಯಿದ್ದ ಹಣ ದೋಚಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಘಂಟಿಕೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಂಧಿತ ಇಬ್ಬರು ಆರೋಪಿಗಳ ವಿರುದ್ಧ ಅನೇಕ ಪ್ರಕರಣಗಳು ದಾಖಲಾಗಿವೆ. ಒಂಟಿಯಾಗಿ ಓಡಾಡುವರನ್ನು ಅವಲೋಕಿಸಿ ಅವರನ್ನು ಬೆದರಿಸಿ ಆರೋಪಿಗಳು ಕಳ್ಳತನ ಮಾಡುತ್ತಿದ್ದರು ಎಂದು ತನಿಖೆ ವೇಳೆ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ದರೋಡೆಕೋರರು ಮಂಜುನಾಥ ಗಾಣಗೇರ ಅವರನ್ನು ಹಿಂಬಾಲಿಸುತ್ತಿದ್ದ ಮತ್ತು ದರೋಡೆ ನಡೆಸುತ್ತಿದ್ದ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಇದರ ಆಧಾರದ ಮೇಲೆ ಆರೋಪಿಗಳನ್ನು ಪತ್ತೆ ಹಚ್ಚಿದ್ದು, ಉಳಿದ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ