ಆ್ಯಪ್ನಗರ

ಚಾಲಕ, ನಿರ್ವಾಹಕನಿಂದ ಪ್ರಯಾಣಿಕನ ಮೇಲೆ ಹಲ್ಲೆ

ಹುಬ್ಬಳ್ಳಿ : ಚಲಿಸುತ್ತಿದ್ದ ಬಸ್‌ ಹತ್ತುತ್ತಿದ್ದ ಎಂದು ಆರೋಪಿಸಿ ಪ್ರಯಾಣಿಕನ ಮೇಲೆ ಬಸ್‌ ಚಾಲಕ ಮತ್ತು ನಿರ್ವಾಹಕ ಹಲ್ಲೆ ಮಾಡಿರುವ ಘಟನೆ ಇಲ್ಲಿಯ ಚನ್ನಮ್ಮ ವೃತ್ತದಲ್ಲಿ ಭಾನುವಾರ ನಡೆದಿದೆ.

Vijaya Karnataka 2 Sep 2019, 5:00 am
ಹುಬ್ಬಳ್ಳಿ : ಚಲಿಸುತ್ತಿದ್ದ ಬಸ್‌ ಹತ್ತುತ್ತಿದ್ದ ಎಂದು ಆರೋಪಿಸಿ ಪ್ರಯಾಣಿಕನ ಮೇಲೆ ಬಸ್‌ ಚಾಲಕ ಮತ್ತು ನಿರ್ವಾಹಕ ಹಲ್ಲೆ ಮಾಡಿರುವ ಘಟನೆ ಇಲ್ಲಿಯ ಚನ್ನಮ್ಮ ವೃತ್ತದಲ್ಲಿ ಭಾನುವಾರ ನಡೆದಿದೆ.
Vijaya Karnataka Web assault on passenger by driver manager
ಚಾಲಕ, ನಿರ್ವಾಹಕನಿಂದ ಪ್ರಯಾಣಿಕನ ಮೇಲೆ ಹಲ್ಲೆ


ಹುಬ್ಬಳ್ಳಿಯಿಂದ ತಡಸಕ್ಕೆ ಹೋಗುತ್ತಿದ್ದ ಬಸ್‌ ನಿಲ್ಲಿಸುವಂತೆ ಪ್ರಯಾಣಿಕ ಕೈ ತೋರಿದ್ದಾನೆ. ಆದರೆ ಚಾಲಕ ಬಸ್‌ ನಿಲ್ಲಿಸದೇ ಮುಂದೆ ಹೊರಟಾಗ ಬಸ್‌ ಬಾಗಿಲು ತೆರೆದು ಹತ್ತಲು ಯತ್ನಿಸಿದ್ದಾನೆ. ಇದರಿಂದ ಕೋಪಗೊಂಡ ಬಸ್‌ ಚಾಲಕ ಮತ್ತು ನಿರ್ವಾಹಕ ಬಸ್‌ ನಿಲ್ಲಿಸಿ ಪೊಲೀಸರ ಎದುರೇ ಪ್ರಯಾಣಿಕನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪ್ರಯಾಣಿಕನ ಮೇಲೆ ನಡೆಯುತ್ತಿದ್ದ ಹಲ್ಲೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಹಲ್ಲೆಗೊಳಗಾದ ಪ್ರಯಾಣಿಕ ಯಾರು ಎಂದು ಗೊತ್ತಾಗಿಲ್ಲ. ಈ ಬಗ್ಗೆ ಉಪನಗರ ಪೊಲೀಸ್‌ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ