ಆ್ಯಪ್ನಗರ

ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ: ಹುಬ್ಬಳ್ಳಿಯಲ್ಲಿ ಶೆಟ್ಟರ್ ಹೇಳಿಕೆ

ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ. ಅಂದ ಮೇಲೆ ಅದರ ಬಗ್ಗೆ ಚರ್ಚೆ ಬೇಡ. ಮುಂದಿನ ಎರಡೂವರೆ ವರ್ಷ ಕೂಡಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

Vijaya Karnataka Web 2 Jan 2021, 4:32 pm
ಹುಬ್ಬಳ್ಳಿ: ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಖಾಲಿ ಇರದ ಹುದ್ದೆಗಳ ಬಗ್ಗೆ ಚರ್ಚೆ ಮಾಡಬಾರದು ಎಂದು ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಶನಿವಾರ ಹೇಳಿಕೆ ನೀಡಿದ್ದಾರೆ.
Vijaya Karnataka Web jagadish shettar


ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾರೆ. ಮುಂದಿನ ಎರಡೂವರೆ ವರ್ಷ ಕೂಡ ಅವರೇ ಸಿಎಂ ಆಗಿರುತ್ತಾರೆ. ಶುಕ್ರವಾರ ಯಡಿಯೂರಪ್ಪ ಅವರು ಹೇಳಿದ್ದು ಸತ್ಯ ಎಂದಿದ್ದಾರೆ.

ಇನ್ನು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಈ ವಿಚಾರ ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಟ್ಟಿದ್ದು, ಕೇಂದ್ರದ ವರಿಷ್ಠರ ಜೊತೆ ಚರ್ಚಿಸಿ ಅವರು ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ‌. ವಿರೋಧ ಪಕ್ಷಗಳಿಗೆ ಮಾಡಲು ಬೇರೇನು ಕೆಲಸ ಇಲ್ಲ, ಹೀಗಾಗಿ ಸಿಎಂ ರಾಜೀನಾಮೆ ಬಗ್ಗೆ ಮಾತನಾಡುತ್ತಾರೆ.

ಶಿರಾದಲ್ಲಿ ಬಿಜೆಪಿಯ ಬಲ ವೃದ್ಧಿ, ಗ್ರಾಮ ಪಂಚಾಯಿತಿ ಅಖಾಡದಲ್ಲಿ 2015ಕ್ಕಿಂತ ಭರ್ಜರಿ ಸಾಧನೆ

ಶಿವಮೊಗ್ಗದಲ್ಲಿ ಭಾನುವಾರ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ನಾನು ಭಾಗಿಯಾಗುತ್ತಿದ್ದೇನೆ. ಈ ವೇಳೆ ಪಕ್ಷದ ಸಂಘಟನೆ ಬಗ್ಗೆ ಚರ್ಚಿಸುತ್ತೇವೆ. ನಿರಂತರ ಪಕ್ಷ ಸಂಘಟನೆಯ ಕೆಲಸದಿಂದಾಗಿ ಗ್ರಾಮ ಪಂಚಾಯತಿಯಲ್ಲಿ ಶೇಕಡಾ 60 ರಷ್ಟು ಈ ಬಾರಿ ಗೆದ್ದಿದ್ದೇವೆ ಎಂದರು. ಇದೇ ವೇಳೆ ಬೆಳಗಾವಿ ಚುನಾವಣೆ ಘೋಷಣೆಯಾದ ಬಳಿಕ ಬಿಜೆಪಿ ಅಭ್ಯರ್ಥಿಯ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

ಸಮೀಕ್ಷೆಯಲ್ಲಿ ಬಯಲು: ಹೊಸ ಮನೆ ಬಹುತೇಕರ ನ್ಯೂ ಇಯರ್‌ ರೆಸುಲ್ಯೂಷನ್‌, ಕಾರಣವೇನು ಗೊತ್ತಾ?

ದೇಶದಲ್ಲಿ ಕೊರೊನಾ ಇಳಿಕೆಗೆ ಮೋದಿ ನಾಯಕತ್ವ ಕಾರಣ. ನರೇಂದ್ರ ಮೋದಿಯವರ ನಾಯಕತ್ವದಲ್ಲಿ ದೇಶ ಪ್ರಗತಿ ಪತದಲ್ಲಿ ಸಾಗುತ್ತಿದೆ. ಕೋವಿಡ್ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿ ಕೆಲಸ ಮಾಡಲಿದೆ. ಕೋವಿಡ್ ಲಸಿಕೆ ವಿತರಣೆಯಲ್ಲಿ ಜಗತ್ತಿನ ಇತರ ರಾಷ್ಟ್ರಗಳನ್ನು ಹಿಂದಿಕ್ಕಿ ಯಶಸ್ವಿಯಾಗುತ್ತೇವೆ ಎಂದು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ