ಆ್ಯಪ್ನಗರ

ಸಾಲ ವಾಪಸ್‌ ಬಾರದಿದ್ದಕ್ಕೆ ಠಾಣೆಯಲ್ಲಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿ : ಬೇರೊಬ್ಬರಿಗೆ ಸಾಲವಾಗಿ ನೀಡಿದ ಹಣ ವಾಪಸ್‌ ಬರುತ್ತಿಲ್ಲ ಎಂದು ಅಳುತ್ತಾ ಪೊಲೀಸ್‌ ಠಾಣೆಗೆ ಬಂದ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಲ್ಲಿಯ ಉಪನಗರ ಠಾಣೆಯಲ್ಲಿ ನಡೆದಿದೆ.

Vijaya Karnataka 28 Aug 2019, 5:00 am
ಹುಬ್ಬಳ್ಳಿ : ಬೇರೊಬ್ಬರಿಗೆ ಸಾಲವಾಗಿ ನೀಡಿದ ಹಣ ವಾಪಸ್‌ ಬರುತ್ತಿಲ್ಲ ಎಂದು ಅಳುತ್ತಾ ಪೊಲೀಸ್‌ ಠಾಣೆಗೆ ಬಂದ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಲ್ಲಿಯ ಉಪನಗರ ಠಾಣೆಯಲ್ಲಿ ನಡೆದಿದೆ.
Vijaya Karnataka Web attempted suicide in the station for not returning the loan
ಸಾಲ ವಾಪಸ್‌ ಬಾರದಿದ್ದಕ್ಕೆ ಠಾಣೆಯಲ್ಲಿ ಆತ್ಮಹತ್ಯೆಗೆ ಯತ್ನ


ಹಳೇಹುಬ್ಬಳ್ಳಿ ಅರವಿಂದನಗರದ ಪರಶುರಾಮ ಅಂಬಾಸಾ ಬದ್ದಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಆ. 25ರಂದು ಮಧ್ಯಾಹ್ನ 1 ರ ಸುಮಾರಿಗೆ ಅಳುತ್ತಾ ಠಾಣೆಗೆ ಬಂದ ಪರಶುರಾಮ ತನಗೆ ಬರಬೇಕಾದ ಹಣ ಬಂದಿಲ್ಲ. ನನಗೆ ಜೀವನವೇ ಬೇಸರವಾಗಿದೆ ಎಂದು ಅಳುತ್ತಾ ಠಾಣೆಯಲ್ಲಿಯೇ ವಿಷಯ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಬಗ್ಗೆ ಪೊಲೀಸ್‌ ಅಧಿಕಾರಿ ನೀಡಿದ ದೂರಿನ ಮೇರೆಗೆ ಉಪನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಂಡ ವಸೂಲಿ: ಸಂಚಾರ ನಿಯಮ ಉಲ್ಲಂಘನೆ ಮಾಡಿದವರ ಮೇಲೆ ಆ.26ರಂದು 1580 ಪ್ರಕರಣಗಳನ್ನು ದಾಖಲಿಸಿದ್ದು ಒಟ್ಟು 2,35,500 ರೂ. ದಂಡ ವಸೂಲಿ ಮಾಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ