ಹುಬ್ಬಳ್ಳಿ : ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಹಿಳೆಯರಿಗೆ ಪ್ರವೇಶ ಮಾಡಲು ಅವಕಾಶ ನೀಡಿದ ಕೇರಳ ಸರಕಾರದ ನಡೆ ಖಂಡಿಸಿ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂನ ಹುಬ್ಬಳ್ಳಿ ಘಟಕದ ಪದಾಧಿಕಾರಿಗಳು, ವಿಶ್ವ ಹಿಂದೂ ಪರಿಷತ್ ಪದಾಧಿಕಾರಿಗಳು ಸೇರಿದಂತೆ ನೂರಾರು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಗುರುವಾರ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಧಾರ್ಮಿಕ ವಿಷಯದಲ್ಲಿ ನ್ಯಾಯಾಲಯ ಹಾಗೂ ಕೇರಳ ಸರಕಾರ ರಾಜಕೀಯ ಮಾಡುತ್ತಿದೆ. ಕೋಟ್ಯಂತರ ಭಕ್ತರ ಪ್ರತಿಭಟನೆ ಪರಿಗಣಿಸದೆ ಕೇವಲ ಕೆಲ ಪಟ್ಟಬದ್ಧ ಹಿತಾಸಕ್ತಿಗಳ ಮಾತನ್ನು ನ್ಯಾಯಾಲಯ ಹಾಗೂ ಕೇರಳ ಸರಕಾರ ಪಾಲಿಸುತ್ತಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೊಶ ವ್ಯಕ್ತಪಡಿಸಿದರು.
ಈ ವೇಳೆ ವಿಶ್ವ ಹಿಂದೂ ಪರಿಷತ್ನ ಮುಖಂಡ ಪ್ರದೀಪ ಶೆಟ್ಟಿ ಮಾತನಾಡಿ, ಎಲ್ಲ ಧಾರ್ಮಿಕ ಕ್ಷೇತ್ರಗಳಲ್ಲಿಯೂ ಒಂದೊಂದು ತರದ ಆಚರಣೆ, ಪರಂಪರೆ ಇರುತ್ತದೆ. ಅವುಗಳಲ್ಲಿ ಕಾನೂನು ಮತ್ತು ರಾಜಕೀಯ ಬೆರೆಸುವ ಮೂಲಕ ಧಾರ್ಮಿಕ ಕ್ಷೇತ್ರಗಳ ಪರಂಪರೆಗೆ ಧಕ್ಕೆ ತರುತ್ತಿರುವುದು ರ್ದುದೈವದ ಸಂಗತಿ. ಸರಕಾರ ಈ ಕೂಡಲೇ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿಷೇಧಿಸಬೇಕು. ಇಲ್ಲದಿದ್ದರೆ ಕೇರಳ ಸರಕಾರದ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ವಿಶ್ವ ಹಿಂದೂ ಪರಿಷತ್ನ ಮಹಿಳಾ ಮುಖಂಡರಾದ ವಿಧುಲಾ ಹಳದಿಪುರ ಮಾತನಾಡಿ, ಮಹಿಳಾ ಸಬಲೀಕರಣ ಹೆಸರಿನಲ್ಲಿ ಈ ರೀತಿಯ ಅಚಾತುರ್ಯಗಳು ಆಗಬಾರದು. ಇದು ಹಿಂದೂಗಳನ್ನು ಕೆರಳಿಸಲು ಕೆಲ ಪಟ್ಟಬದ್ಧ ಹಿತಾಸಕ್ತಿಗಳ ಗುಂಪಿನವರು ಮಾಡುತ್ತಿರುವ ಕೆಲಸ ಎಂದರು.
ಮೋಹನ ಗುರುಸ್ವಾಮಿ, ಆನಂದ ಗುರುಸ್ವಾಮಿ, ಶಬರಿಮಲೆ ಸೇವಾ ಸಮಾಜಂ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಭಾರತಿ, ವಿಶ್ವ ಹಿಂದೂ ಪರಿಷತ್ನ ಪ್ರಾಂತ ಕಾರ್ಯದರ್ಶಿ ಮಹಾಬಳೇಶ್ವರ ಸೇರಿದಂತೆ ನೂರಾರು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಇದ್ದರು.
ಧಾರ್ಮಿಕ ವಿಷಯದಲ್ಲಿ ನ್ಯಾಯಾಲಯ ಹಾಗೂ ಕೇರಳ ಸರಕಾರ ರಾಜಕೀಯ ಮಾಡುತ್ತಿದೆ. ಕೋಟ್ಯಂತರ ಭಕ್ತರ ಪ್ರತಿಭಟನೆ ಪರಿಗಣಿಸದೆ ಕೇವಲ ಕೆಲ ಪಟ್ಟಬದ್ಧ ಹಿತಾಸಕ್ತಿಗಳ ಮಾತನ್ನು ನ್ಯಾಯಾಲಯ ಹಾಗೂ ಕೇರಳ ಸರಕಾರ ಪಾಲಿಸುತ್ತಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೊಶ ವ್ಯಕ್ತಪಡಿಸಿದರು.
ಈ ವೇಳೆ ವಿಶ್ವ ಹಿಂದೂ ಪರಿಷತ್ನ ಮುಖಂಡ ಪ್ರದೀಪ ಶೆಟ್ಟಿ ಮಾತನಾಡಿ, ಎಲ್ಲ ಧಾರ್ಮಿಕ ಕ್ಷೇತ್ರಗಳಲ್ಲಿಯೂ ಒಂದೊಂದು ತರದ ಆಚರಣೆ, ಪರಂಪರೆ ಇರುತ್ತದೆ. ಅವುಗಳಲ್ಲಿ ಕಾನೂನು ಮತ್ತು ರಾಜಕೀಯ ಬೆರೆಸುವ ಮೂಲಕ ಧಾರ್ಮಿಕ ಕ್ಷೇತ್ರಗಳ ಪರಂಪರೆಗೆ ಧಕ್ಕೆ ತರುತ್ತಿರುವುದು ರ್ದುದೈವದ ಸಂಗತಿ. ಸರಕಾರ ಈ ಕೂಡಲೇ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿಷೇಧಿಸಬೇಕು. ಇಲ್ಲದಿದ್ದರೆ ಕೇರಳ ಸರಕಾರದ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ವಿಶ್ವ ಹಿಂದೂ ಪರಿಷತ್ನ ಮಹಿಳಾ ಮುಖಂಡರಾದ ವಿಧುಲಾ ಹಳದಿಪುರ ಮಾತನಾಡಿ, ಮಹಿಳಾ ಸಬಲೀಕರಣ ಹೆಸರಿನಲ್ಲಿ ಈ ರೀತಿಯ ಅಚಾತುರ್ಯಗಳು ಆಗಬಾರದು. ಇದು ಹಿಂದೂಗಳನ್ನು ಕೆರಳಿಸಲು ಕೆಲ ಪಟ್ಟಬದ್ಧ ಹಿತಾಸಕ್ತಿಗಳ ಗುಂಪಿನವರು ಮಾಡುತ್ತಿರುವ ಕೆಲಸ ಎಂದರು.
ಮೋಹನ ಗುರುಸ್ವಾಮಿ, ಆನಂದ ಗುರುಸ್ವಾಮಿ, ಶಬರಿಮಲೆ ಸೇವಾ ಸಮಾಜಂ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಭಾರತಿ, ವಿಶ್ವ ಹಿಂದೂ ಪರಿಷತ್ನ ಪ್ರಾಂತ ಕಾರ್ಯದರ್ಶಿ ಮಹಾಬಳೇಶ್ವರ ಸೇರಿದಂತೆ ನೂರಾರು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಇದ್ದರು.